ಸ್ಥಳೀಯಾಡಳಿತಗಳಿಗೆ ಅಧಿಕಾರ: ಹೊಸ ಮೀಸಲಾತಿ ಪಟ್ಟಿ ಸಲ್ಲಿಸಲು ಸರಕಾರದ ಮೀನಮೇಷ!


Team Udayavani, Jan 24, 2020, 6:12 AM IST

Voting 1

ಸುಳ್ಯ: ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ ನಡೆಸಿ ಚುನಾಯಿತ ಸದಸ್ಯರಿಗೆ ಅಧಿಕಾರ ಕಲ್ಪಿಸಲು ಅವಕಾಶ ನೀಡುವಲ್ಲಿ ರಾಜ್ಯ ಸರಕಾರ ವಿಳಂಬ ಧೋರಣೆ ಅನುಸರಿಸುತ್ತಿರುವ ಅನುಮಾನ ವ್ಯಕ್ತವಾಗಿದೆ! ಒಂದು ವರ್ಷದೊಳಗೆ ಎರಡು ಹಂತದಲ್ಲಿ ಚುನಾವಣೆ ನಡೆದ 208 ಸ್ಥಳೀಯಾಡಳಿತಗಳ ಪೈಕಿ ಗರಿಷ್ಠ ಸಂಸ್ಥೆಗಳು ಅಧಿಕಾರಕ್ಕೆ ಕಾದು ಕುಳಿತಿವೆ. ಆದರೆ ರಾಜ್ಯ ಸರಕಾರ ನ್ಯಾಯಾಲಯದ ನೆಪವೊಡ್ಡಿ ದಿನದೂಡುತ್ತಿರುವುದು ಜನಪ್ರತಿನಿಧಿಗಳಿಗೆ ನುಂಗಲಾರದ ತುತ್ತಾಗಿದೆ.

ಮೀಸಲಾತಿ ಬಿಕ್ಕಟ್ಟು!
ರಾಜ್ಯ ಸರಕಾರವು 2018ರ ಆ.31ರಂದು ಮೊದಲ ಹಂತದಲ್ಲಿ 109 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಸಿತು. ಚುನಾವಣೆಗೆ ದಿನಾಂಕ ಘೋಷಣೆ ಮೊದಲೇ ಅಧ್ಯಕ್ಷ -ಉಪಾಧ್ಯಕ್ಷತೆಗೆ ಮೀಸಲಾತಿ ಪ್ರಕಟಿಸಿತ್ತು. ಫಲಿತಾಂಶ ಪ್ರಕಟವಾದ ಅನಂತರ ಮೀಸಲಾತಿ ಬದಲಾಯಿಸಿತು. ಇದರ ವಿರುದ್ಧ ಆಕಾಂಕ್ಷಿಗಳು ನ್ಯಾಯಾಲಯದ ಮೆಟ್ಟಲೇರಿದರು. ಕೆಲವು ತಿಂಗಳಲ್ಲಿ ಮೊದಲು ಪ್ರಕಟಿಸಿದ ಮೀಸಲಾತಿ ಅನ್ವಯವೇ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ನ್ಯಾಯಾಲಯದ ಮುಂದೆ ಸರಕಾರ ಒಪ್ಪಿತು. ಆದರೆ ಅದು ಜಾರಿಗೆ ಬರಲಿಲ್ಲ. ಇದರ ನಡುವೆ ಸರಕಾರ ಎರಡನೇ ಹಂತದಲ್ಲಿ 103 ಸ್ಥಳೀಯ ಸಂಸ್ಥೆಗಳಿಗೆ 2019ರ ಮೇ 29ಕ್ಕೆ ಎರಡು ಹಂತಗಳಲ್ಲಿ ಚುನಾವಣೆ ನಿಗದಿ ಮಾಡಿ, ಮೇ 31ಕ್ಕೆ ಫಲಿತಾಂಶ ಪ್ರಕಟಿಸಿತು. ಮೊದಲ ಹಂತದ ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಕಾರಣ ಎರಡನೇ ಹಂತದಲ್ಲಿ ಚುನಾವಣೆ ನಡೆದ ಸ್ಥಳೀಯಾಡಳಿತಗಳಿಗೆ ಅಧಿಕಾರ ಸಿಗಲಿಲ್ಲ.

ವ್ಯಾಜ್ಯ ವಿಚಾರಣೆಯ ಹಂತದಲ್ಲಿರುವ ಸಂದರ್ಭದಲ್ಲೇ 226 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ 2018ರ ಸೆ.3ರಂದು ಹೊರಡಿಸಿದ್ದ ಮೂಲ ಅಧಿಸೂಚನೆ ಹಿಂಪಡೆಯುವುದಾಗಿ ರಾಜ್ಯ ಸರಕಾರವು 2019ರ ನವೆಂಬರ್‌ನಲ್ಲಿ ಹೈಕೋರ್ಟ್‌ಗೆ ತಿಳಿಸಿತ್ತು. ಹೊಸದಾಗಿ ಮೀಸಲಾತಿ ಮರು ನಿಗದಿಪಡಿಸಿ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿತ್ತು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಮೇಲ್ಮನವಿಗಳನ್ನು ವಿಲೇವಾರಿ ಮಾಡಿ ಆದೇಶ ಹೊರಡಿಸಿತು. ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ 2019ರ ಜ.18 ಮತ್ತು 2018ರ ಅ.9ರಂದು ಏಕಸದಸ್ಯ ನ್ಯಾಯಪೀಠ ನೀಡಿದ್ದ ಪ್ರತ್ಯೇಕ ಆದೇಶ ರದ್ದುಗೊಳಿಸುವುದಾಗಿ ತಿಳಿಸಿತು.

ವಿಳಂಬ ಧೋರಣೆ
ಉಚ್ಚ ನ್ಯಾಯಾಲಯಕ್ಕೆ 2019ರ ನವೆಂಬರ್‌ನಲ್ಲಿ ತಿಂಗಳೊಳಗೆ ಹೊಸ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸುವುದಾಗಿ ಹೇಳಿದ್ದ ಸರಕಾರ ಅದನ್ನು ಪಾಲಿಸಿಲ್ಲ. ಹೊಸ ಮೀಸಲಾತಿ ಪಟ್ಟಿ ಅಂತಿಮಗೊಂಡು ಪೌರಾಡಳಿತ ಇಲಾಖೆಯಲ್ಲಿ ಇದೆ ಎಂದು ಆಡಳಿತ ಪಕ್ಷದ ಕೆಲವು ಚುನಾಯಿತ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ. ನ್ಯಾಯಾಲಯಕ್ಕೆ ಭರವಸೆ ನೀಡಿ ಎರಡೂವರೆ ತಿಂಗಳು ಕಳೆದರೂ ರಾಜ್ಯ ಸರಕಾರ ಪಟ್ಟಿ ಸಲ್ಲಿಕೆ ಮಾಡಿಲ್ಲ. ಸರಕಾರದ ಈ ವಿಳಂಬ ನೀತಿಯಿಂದ ಅಧಿಕಾರ ಹಂಚಿಕೆ ವಿಳಂಬ ಆಗುತ್ತಿದೆ.

ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ಸಿಗದ ಕಾರಣ ಸ್ಥಳೀಯಾಡಳಿತವು ಆಡಳಿತಾಧಿಕಾರಿ ವ್ಯವಸ್ಥೆಯಲ್ಲೇ ಮುಂದುವರಿದಿದೆ. ಚುನಾಯಿತ ಪ್ರತಿನಿಧಿಗಳೂ ಜನರ ಬೇಡಿಕೆಗಳಿಗೆ ಸ್ಪಂದಿಸುವ ಸ್ಥಿತಿಯಲ್ಲಿ ಇಲ್ಲ. ಫಲಿತಾಂಶದ ಸಂದರ್ಭ ಹೊಸ ಸದಸ್ಯರಲ್ಲಿ ಇದ್ದ ಉತ್ಸಾಹ ಬತ್ತಿದೆ. ಸ್ಥಳೀಯಾಡಳಿತಗಳು ಅಧಿಕಾರಿ ಕೇಂದ್ರಿತ ನೆಲೆ ಆಗಿ ಬದಲಾಗಿವೆ.

ಹಿಂದಿನ ಸರಕಾರದ ತಪ್ಪಿನಿಂದ ವಿಳಂಬವಾಗಿತ್ತು. ನಮ್ಮ ಸರಕಾರ ಕಾನೂನು ತಜ್ಞರ ಜತೆ ಚರ್ಚಿಸಿ, ಹೈಕೋರ್ಟ್‌ಗೆ ಅಫಿದಾವಿತ್‌ ಸಲ್ಲಿಸಿತ್ತು. ಮೀಸಲಾತಿ ಪಟ್ಟಿಯನ್ನು ಪುನಃ ನೀಡಬೇಕು ಎನ್ನುವುದನ್ನು ಹೈಕೋರ್ಟ್‌ ಸಹಮತದೊಂದಿಗೆ ನಿರ್ಧರಿಸಲಾಗಿತ್ತು. ಕೆಲವೇ ದಿನಗಳಲ್ಲಿ ತೀರ್ಮಾನ ಆಗಬಹುದು.
-ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ , ಸಚಿವರು ದ.ಕ.

 ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.