ಬಿದ್ದು ಸಿಕ್ಕ ಚಿನ್ನಾಭರಣವಿದ್ದ ಬ್ಯಾಗ್ ಮರಳಿಸಿದ ಆಟೋ ಚಾಲಕ
Team Udayavani, Jun 14, 2022, 1:27 AM IST
ಸಾಂದರ್ಭಿಕ ಚಿತ್ರ..
ಬಂಟ್ವಾಳ: ಮಾಣಿಯಿಂದ ಬಿ.ಸಿ. ರೋಡ್ ಕಡೆಗೆ ಆಗಮಿಸುವ ವೇಳೆ ಆಟೋ ರಿಕ್ಷಾ ಚಾಲಕರೊಬ್ಬರಿಗೆ ಸಿಕ್ಕ ಚಿನ್ನಾಭರಣ ಹಾಗೂ ಮೊಬೈಲ್ ಇದ್ದ ವ್ಯಾನಿಟಿ ಬ್ಯಾಗನ್ನು ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ತಂದೊಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಾಣಿ ನಿವಾಸಿ ಆಟೋ ಚಾಲಕ ಶಂಕರ ನಾರಾಯಣ ಶೆಟ್ಟಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕರಾಗಿದ್ದು, ಅವರು ಬಿ.ಸಿ. ರೋಡಿಗೆ ಆಗಮಿಸುವ ವೇಳೆ ಕಲ್ಲಡ್ಕ ಸಮೀಪ ಬ್ಯಾಗ್ ಸಿಕ್ಕಿತ್ತು.
ಬಿ. ಮೂಡಾ ಗ್ರಾಮದ ನಿವಾಸಿ ರುಕ್ಸಾನ ಅಬ್ದುಲ್ ಮಜೀದ್ ಅವರು ಸೋಮವಾರ ಮಾಣಿಯಿಂದ ಬಿ.ಸಿ. ರೋಡಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ವ್ಯಾನಿಟಿ ಬ್ಯಾಗ್ ಕಳೆದುಕೊಂಡಿದ್ದರು.
ಅದರಲ್ಲಿ 50 ಗ್ರಾಂ ಚಿನ್ನಾಭರಣ ಹಾಗೂ ಮೊಬೈಲ್ ಇದ್ದು, ಅದು ಸಿಕ್ಕರೆ ಮಾಹಿತಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲೂ ಮನವಿ ಮಾಡಿದ್ದರು.
ಬ್ಯಾಗನ್ನು ಪೊಲೀಸರ ಸಮ್ಮುಖದಲ್ಲಿ ವಾರಿಸುದಾರರಿಗೆ ಹಸ್ತಾಂತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ