ಡ್ರಗ್ಸ್‌ ಜಾಲದ ವಿರುದ್ಧ ಜಾಗೃತರಾಗಿ:ಖಾದರ್‌


Team Udayavani, Oct 25, 2017, 10:45 AM IST

25-Mng–3.jpg

ಮಹಾನಗರ: ಮಾದಕ ದ್ರವ್ಯಗಳ ವ್ಯಸನದಿಂದ ಇಡೀ ಜೀವನ ನರಳುವಂತಾಗುವುದರಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು. ತಮ್ಮ ಸುತ್ತ ಮುತ್ತ ಡ್ರಗ್ಸ್‌ ಮಾರಾಟದ ಬಗ್ಗೆ ತಿಳಿದಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು. ಟಿ. ಖಾದರ್‌ ಹೇಳಿದರು.

ನಗರದ ಸಂತ ಅಲೋಶಿಯಸ್‌ ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ಜಿಲ್ಲಾ ಎನ್‌ಎಸ್‌ಯುಐ ವತಿಯಿಂದ ಜರಗಿದ ‘ಮಾದಕ ದ್ರವ್ಯ ವಿರೋಧಿ ಅಭಿಯಾನ’ದ ಉದ್ಘಾಟನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.

ಡ್ರಗ್ಸ್‌ ಜಾಲದಲ್ಲಿ ಬೀಳದಂತೆ ವಿದ್ಯಾರ್ಥಿಗಳು ಸ್ವಯಂ ಕಡಿವಾಣ ಹಾಕಿಕೊಳ್ಳಬೇಕು ಹಾಗೂ ಸ್ನೇಹಿತರಿಗೂ ಇದರ ದುಷ್ಪರಿಣಾಮದ ಬಗ್ಗೆ ತಿಳಿಸಬೇಕು. ಮಾನಸಿಕ ಸ್ಥೈರ್ಯವನ್ನು ವೃದ್ಧಿಸಿ ಆತ್ಮವಿಶ್ವಾಸ ಬೆಳೆಸಿಕೊಂಡು ಮುನ್ನಡೆಯಬೇಕು ಎಂದವರು ಆಶಿಸಿದರು.

ಮಾದಕ ಜಾಲ ಕಂಡಲ್ಲಿ ದೂರು ನೀಡಿ
ಪರಿಸರದಲ್ಲಿ ಅಥವಾ ಸ್ನೇಹಿತ ವರ್ಗದಲ್ಲಿ ಮಾದಕ ದ್ರವ್ಯ ಜಾಲಕ್ಕೆ ಒಳಗಾದವರು ಕಂಡು ಬಂದಲ್ಲಿ ಕಾಲೇಜಿನ ಮುಖ್ಯಸ್ಥರು ಅಥವಾ ಅವರ ಮನೆಯವರಿಗೆ ತಿಳಿಸುವ ಮೂಲಕ ತಮ್ಮ ಸ್ನೇಹಿತರನ್ನು ಸರಿಪಡಿಸಲು ಸಹಕರಿಸುವ
ಕಾರ್ಯ ಮಾಡಬೇಕು ಎಂದು ಸಚಿವ ಖಾದರ್‌ ಸಲಹೆ ನೀಡಿದರು.

ದುಶ್ಚಟಗಳಿಂದ ದೂರವಿರಿ
ಉದ್ಘಾಟಿಸಿದ ಶಾಸಕ ಜೆ. ಆರ್‌. ಲೋಬೋ ಮಾತನಾಡಿ, ಹೆತ್ತವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಕಾಲೇಜಿಗೆ ಕಳುಹಿಸುತ್ತಾರೆ. ಅವರ ವಿಶ್ವಾಸ, ಅಭಿಲಾಷೆಗೆ ಚ್ಯುತಿ ಬಾರದಂತೆ ವಿದ್ಯಾರ್ಥಿಗಳು ಕಲಿಕೆಗೆ ಒತ್ತು ನೀಡುವ ಮೂಲಕ ಮಾದಕ ವ್ಯಸನಗಳಂತಹ ದುಶ್ಚಟಗಳಿಂದ ದೂರವಿರಬೇಕು ಎಂದವರು ಹೇಳಿದರು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಅಬ್ದುಲ್ಲಾ ಬಿನ್ನು ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ಬಿ. ಇಬ್ರಾಹಿಂ, ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಯ ವಿಶೇಷ ಪೊಲೀಸ್‌ ಅಧಿಕಾರಿ ಗುರು ಕಾಮತ್‌, ಸಂತ ಅಲೋಶಿಯಸ್‌ ಕಾಲೇಜಿನ ಫಾ| ಮೆಲ್ವಿನ್‌ ಮೆಂಡೋನ್ಸಾ, ಎನ್‌ಎಸ್‌ಯುಐನ ಪದಾಧಿಕಾರಿಗಳಾದ ಅಬ್ದುಲ್‌ ರೆಹಮಾನ್‌ ರವೂಫ್, ರೂಪೇಶ್‌ ರೈ, ಕಾರ್ತಿಕ್‌ ಕುಮಾರ್‌, ಮಹಮ್ಮದ್‌ ಸವಾದ್‌, ಆಸ್ಟಿನ್‌ ಸಿಕ್ವೇರಾ ಮತ್ತಿತರರು ಉಪಸ್ಥಿತರಿದ್ದರು.

ಅಭಿಯಾನ
ಎನ್‌ಎಸ್‌ಯುಐನಿಂದ ಶಾಲಾ ಕಾಲೇಜುಗಳಲ್ಲಿ ನ. 10ರವರೆಗೆ ಅಭಿಯಾನ ನಡೆಯಲಿದ್ದು, ಇದರ ಅಂಗವಾಗಿ ಉಪನ್ಯಾಸ, ಬೀದಿ ನಾಟಕ, ಕಿರುಚಿತ್ರ ಪ್ರದರ್ಶನ, ಕರಪತ್ರ ವಿತರಣೆ ಮೂಲಕ ಜಾಗೃತಿ ಕಾರ್ಯ ನಡೆಯಲಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.