“ಆಟಿಯ ಕಷ್ಟ ದಿನಗಳ ಅರಿವು ಮೂಡಿಸಿ’


Team Udayavani, Jul 31, 2017, 6:15 AM IST

ati.jpg

ಬಪ್ಪಳಿಗೆ : ಹಿಂದಿನ ಕಾಲದ ಆಟಿ ಆಚರಣೆಗೂ ಇಂದಿಗೂ ತುಂಬಾ ವ್ಯತ್ಯಾಸವಿದೆ. ಅಂದಿನ ಕಷ್ಟ ಇಂದಿನ ಮಕ್ಕಳಿಗೆ ಗೊತ್ತಿಲ್ಲ. ಇದನ್ನು ತಿಳಿಹೇಳುವ ಜವಾಬ್ದಾರಿ ಹೆತ್ತವರಿಗೆ ಸೇರಿದ್ದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ಕವಿತಾ ಸನಿಲ್‌ ಹೇಳಿದರು.

ನಗರದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ, ಬಿಲ್ಲವ ಮಹಿಳಾ ವೇದಿಕೆ ವತಿಯಿಂದ ರವಿವಾರ ನಡೆದ ಬಿರುವೆರ್ನ ಆಟಿಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪೆಟ್ಟು- ಗಲಾಟೆಗೆ ಯುವಕರು ಬಲಿಯಾಗುವ ಪ್ರಸಂಗ ನಮ್ಮ ಕಣ್ಣ ಮುಂದೇ ಇದೆ. ಅದರಲ್ಲೂ ಬಿಲ್ಲವ ಸಮುದಾಯದ ಯುವಕರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದನ್ನು ನಿವಾರಿಸುವ ದೃಷ್ಟಿಯಿಂದ ಸಮಾಜ ಒಂದಾಗಬೇಕು. ಒಗ್ಗಟ್ಟಿನಿಂದ ಮುಂದು ವರಿದಾಗ ಯಶಸ್ಸು ಸಾಧ್ಯ ಎಂದರು.

ಬದುಕಿನ ಹೋರಾಟ
ಆಟಿ ವಿಷಯದ ಬಗ್ಗೆ ಮಾತನಾಡಿದ ಪತ್ರಕರ್ತ ನರೇಶ್‌ ಸಸಿಹಿತ್ಲು, ಆಟಿ ಆಚರಣೆ ಎನ್ನುವುದು ಬದುಕಿನ ಹೋರಾಟ. ತಿನ್ನಲು ಏನೂ ಇಲ್ಲದ ದಿನಗಳ ಚಿತ್ರಣವದು. ಆದರೆ ಇಂದು ಕಾಲ ಬದಲಾಗಿದೆ. ಬದುಕಿನ ನಿರ್ವ ಹಣೆಗೆ ಬೇಕಾದಷ್ಟು ಸಂಪತ್ತು ನಮ್ಮ ಬಳಿ ಇದೆ. ಹೀಗೆ ಬದುಕು ಬದಲಾಗುವಾಗ ಆಟಿ ಆಚರಣೆ ಇನ್ನೊಂದು ಮಗ್ಗುಲಿಗೆ ಹೊರಳಿದೆ ಎಂದರು.

ಹೆತ್ತವರೇ ಪರೋಕ್ಷ ಕಾರಣ
ಬಿಲ್ಲವರ ಸಂಘದ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತೇವೆ. ಬೆಳಗ್ಗೆ- ಸಂಜೆ ಓದುವಂತೆ ಒತ್ತಡ ತರುತ್ತೇವೆ. ಒಳ್ಳೆಯ ಶಿಕ್ಷಣ ಪಡೆದ ಮಕ್ಕಳು ಬಳಿಕ ಹೆತ್ತವರ ಕೈಗೆ ಸಿಗುವುದೇ ಇಲ್ಲ. ಇದು ದುರಂತ. ಆಧುನಿಕತೆಯಲ್ಲಿ ಮಕ್ಕಳು ದಾರಿ ತಪ್ಪಲು ಹೆತ್ತವರೇ ಪರೋಕ್ಷ ಕಾರಣರಾಗಿದ್ದಾರೆ. ಇದರ ಬಗ್ಗೆ ಎಚ್ಚೆತ್ತು ಕೊಳ್ಳುವ ಅಗತ್ಯವಿದೆ ಎಂದರು.

ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಪೂಜಾ ವಸಂತ್‌ ಅಧ್ಯಕ್ಷತೆ ವಹಿಸಿ ದ್ದರು. ಉಪ್ಪಿನಂಗಡಿ ವಲಯ ಅರಣ್ಯಾ ಧಿಕಾರಿ ಸಂಧ್ಯಾ ಸಚಿನ್‌, ಯುವ ವಾಹಿನಿ ಪುತ್ತೂರು ಘಟಕ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು, ಬಿಲ್ಲವ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಜತ್‌ ಕುಮಾರ್‌ ಎನ್‌.ಎಸ್‌., ಮಹಿಳಾ ವೇದಿಕೆ ಅಧ್ಯಕ್ಷೆ  ಪೂಜಾ ವಸಂತ್‌ ಉಪಸ್ಥಿತರಿದ್ದರು. ಮಹಿಳಾ ವೇದಿಕೆ ಸಂಚಾಲಕ ಸಂಜೀವ ಪೂಜಾರಿ ಕುರೆಮಜಲು ಅವರನ್ನು ಸಮ್ಮಾನಿ ಸಲಾ ಯಿತು. ಇದೇ ವೇಳೆ ಗ್ರಾಮ ಸಮಿತಿ ಅಧ್ಯಕ್ಷರನ್ನು ಗೌರವಿಸಲಾಯಿತು. ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಜಯಶ್ರೀ ಪೆರಿಯಡ್ಕ ಪ್ರಾಸ್ತಾವಿಸಿದರು. ನವ್ಯಾ ದಾಮೋದರ್‌ ಸ್ವಾಗತಿಸಿ, ಸಂಗೀತಾ ಬಪ್ಪಳಿಗೆ ವಂದಿಸಿದರು. ದೇವಕಿ, ಶಶಿಧರ್‌ ಕಿನ್ನಿಮಜಲು ನಿರೂಪಿಸಿದರು. ಬಳಿಕ ಆಟಿ ಕೂಟದ ಗೊಬ್ಬುಲು, ತುಳುನಾಡª ಜನಪದ ವೈವಿಧ್ಯ ಜರಗಿತು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.