ಇನ್ನೂ ಸೇವೆಗೆ ತೆರೆದುಕೊಳ್ಳದ ಆಯುಷ್‌ ಆಸ್ಪತ್ರೆ

ಕಳೆದ ವರ್ಷವೇ ಕಾರ್ಯಾರಂಭಿಸಬೇಕಿತ್ತು; ಇನ್ನೆರಡು ತಿಂಗಳಲ್ಲಿ ನಿರೀಕ್ಷಿತ

Team Udayavani, Nov 28, 2019, 5:42 AM IST

aa-44

ಮಂಗಳೂರು: ವರ್ಷದ ಹಿಂದೆಯೇ ಸೇವಾರಂಭ ಮಾಡಬೇಕಿದ್ದ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ಆಯುಷ್‌ ಆಸ್ಪತ್ರೆ ಇನ್ನೂ ಕಾರ್ಯನಿರ್ವಹಿಸಲು ಆರಂಭಿಸಿಲ್ಲ. ಕಟ್ಟಡ ನಿರ್ಮಾಣದಲ್ಲಿ ಆದ ವಿಳಂಬಗತಿಯೇ ಸೇವೆ ಅಲಭ್ಯವಾಗಲು ಕಾರಣ.

ಜಿಲ್ಲಾ ಸರಕಾರಿ ವೆನಲಾಕ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 10 ಕೋ.ರೂ. ವೆಚ್ಚದಲ್ಲಿ 50 ಹಾಸಿಗೆ ಸಾಮರ್ಥ್ಯದ ಆಯುಷ್‌ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಕಟ್ಟಡದ ಶೇ. 70ರಷ್ಟು ನಿರ್ಮಾಣ ಕಾಮಗಾರಿ ಕಳೆದ ವರ್ಷದ ನವೆಂಬರ್‌ಗೆ ಮುಗಿದಿತ್ತು. 2019ರ ಜನವರಿ ವೇಳೆಗೆ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ ಎಂದು ಆಯುಷ್‌ ಅಧಿಕಾರಿಗಳು ತಿಳಿಸಿದ್ದರು. ಆದರೆ 2020ರ ಜನವರಿಗೆ ಇನ್ನೆರಡೇ ತಿಂಗಳಿದ್ದು, ವರ್ಷ ಕಳೆದರೂ ಆಸ್ಪತ್ರೆಯ ಸೇವೆ ಜನರಿಗೆ ಲಭ್ಯವಾಗಿಲ್ಲ.

ಯು.ಟಿ. ಖಾದರ್‌ ಆರೋಗ್ಯ ಸಚಿವರಾಗಿದ್ದಾಗ ಆಯುಷ್‌ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ್ದರು. 2018ರ ಮಾರ್ಚ್‌ನಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಬಳಿಕದ ಎಂಟೇ ತಿಂಗಳಲ್ಲಿ ಶೇ. 70ರಷ್ಟು ನಿರ್ಮಾಣ ಕಾಮಗಾರಿ ಮುಗಿದಿತ್ತಾದರೂ ಅನಂತರ ಕಾಮಗಾರಿ ಕುಂಟುತ್ತ ಸಾಗಿದೆ. ಪ್ರಸ್ತುತ ಕಟ್ಟಡ ಪೂರ್ಣಗೊಂಡಿದ್ದು, ಅಂತಿಮ ಹಂತದ ಕೆಲಸ ಶೇ. 5ರಷ್ಟು ಬಾಕಿ ಇದೆ. ಮುಂದಿನ ಎರಡು ತಿಂಗಳೊಳಗೆ ಇದೂ ಪೂರ್ಣಗೊಳ್ಳಬಹುದು ಎನ್ನುತ್ತಾರೆ ಆಯುಷ್‌ ಅಧಿಕಾರಿಗಳು. ಇದು ನಿಜವಾಗಬಹುದೇ ಎನ್ನುವುದನ್ನು ಕಾದು ನೋಡಬೇಕಿದೆ.

ಒಂದೇ ಸೂರಿನಡಿ ಐದು ವಿಭಾಗ
ನ್ಯಾಚುರೋಪಥಿ, ಹೋಮಿ ಯೋಪಥಿ, ಆಯುರ್ವೇದ, ಯುನಾನಿ ಮತ್ತು ಯೋಗ ವಿಭಾಗಗಳು ಒಂದೇ ಸೂರಿನಡಿ ಈ ಆಸ್ಪತ್ರೆಯಲ್ಲಿ ಲಭ್ಯವಾಗಲಿವೆ. ಈ ಐದೂ ವಿಭಾಗಗಳನ್ನು ಒಂದೇ ಕಡೆ ಹೊಂದಿರುವ ದೇಶದ ಮೊದಲ ಆಸ್ಪತ್ರೆ ಇದಾಗಲಿದೆ ಎಂದು ಆಯುಷ್‌ ಅಧಿಕಾರಿ ಡಾ| ಇಕ್ಬಾಲ್‌ ತಿಳಿಸಿದ್ದಾರೆ. ಮಹಿಳಾ ವಾರ್ಡ್‌, ಮಹಿಳಾ ವಿಶೇಷ ಕೊಠಡಿ, ಪುರುಷರ ವಾರ್ಡ್‌, ಪುರುಷರ ವಿಶೇಷ ಕೊಠಡಿ, ಡಯಟ್‌ ಕಿಚನ್‌, ಪಂಚಕರ್ಮ ಚಿಕಿತ್ಸೆ, ವಿವಿಧ ಥೆರಪಿಗಳು, ನ್ಯೂಟ್ರಿಷನ್‌ ಸೆಂಟರ್‌, ಥೆರಪಿ ಲ್ಯಾಬ್‌, ಎಲ್ಲ ರೀತಿಯ ಆಯುರ್ವೇದ ಚಿಕಿತ್ಸೆಗಳು ಇಲ್ಲಿ ಲಭ್ಯವಿರಲಿವೆ.

ಕಳೆದ ಜನವರಿಯಲ್ಲಿ ಆಸ್ಪತ್ರೆ ಕಟ್ಟಡವನ್ನು ಹಸ್ತಾಂತರಿಸುವುದಾಗಿ ಎಂಜಿನಿಯರ್‌ಗಳು ಹೇಳಿದ್ದರು. ಆದರೆ ಮರಳು ಸಮಸ್ಯೆ ಮತ್ತಿತರ ಕಾರಣಗಳಿಂದಾಗಿ ಕಟ್ಟಡ ಕಾಮಗಾರಿ ವಿಳಂಬವಾಯಿತು. ಈಗ ಶೇ. 100ರಷ್ಟು ಕಾಮಗಾರಿ ಮುಗಿದಿದ್ದು, ಕೆಲವೊಂದು ಅಂತಿಮ ಹಂತದ ಕೆಲಸಗಳು ಬಾಕಿ ಇದೆ. ಅನಂತರ ಸರಕಾರದಿಂದ ತಾಂತ್ರಿಕ ಅನುಮೋದನೆ ದೊರೆತ ಬಳಿಕ ಕಟ್ಟಡ ಸೇವಾರಂಭ ಮಾಡಲಿದೆ. ಈ ಜನವರಿ ವೇಳೆಗೆ ಕಟ್ಟಡದ ಎಲ್ಲ ಕೆಲಸ ಮುಗಿಯುವ ನಿರೀಕ್ಷೆ ಇದೆ.
– ಡಾ| ಇಕ್ಬಾಲ್‌, ಜಿಲ್ಲಾ ಆಯುಷ್‌ ಅಧಿಕಾರಿ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.