ಗ್ರಾ.ಪಂ.ಗಳಲ್ಲೂ ಸಿಗಲಿದೆ “ಆಯುಷ್ಮಾನ್ ಭಾರತ್’ ಕಾರ್ಡ್
ಗ್ರಾಮೀಣ ಜನರಿಗೆ ಸೌಲಭ್ಯ ವಿಸ್ತರಣೆಗೆ ಕ್ರಮ' 10 ರೂ. ಶುಲ್ಕ; ಕೆಲವೇ ದಿನಗಳಲ್ಲಿ ಲಭ್ಯ
Team Udayavani, Dec 19, 2019, 6:20 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಬಡವರಿಗೆ ಆರೋಗ್ಯ ಭದ್ರತೆ ಒದಗಿಸುವ “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆ ಕಾರ್ಡ್ ಇನ್ನು ಮುಂದೆ ಗ್ರಾಮ ಪಂಚಾಯತ್ನಲ್ಲಿಯೂ ಪಡೆಯಬಹುದು.
ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆಯಡಿ ಕಾರ್ಡ್ಗಳನ್ನು ಈಗಾಗಲೇ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆ, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಸೇವಾ ಸಿಂಧು ಸಿಎಸ್ಸಿಗಳಲ್ಲಿ ನೀಡಲಾಗುತ್ತಿದೆ. ಆದರೂ ಗ್ರಾಮೀಣ ಬಡ ಕುಟುಂಬಗಳಿಗೆ ಕಾರ್ಡ್ ವಿತರಣೆ ಪೂರ್ಣ ಮಟ್ಟದಲ್ಲಿ ಆಗಿರಲಿಲ್ಲ. ಗ್ರಾ.ಪಂ.ಗಳಲ್ಲಿ ವಿತರಿಸಿದರೆ ಜನಸಾಮಾನ್ಯರಿಗೆ ಹೆಚ್ಚು ಅನುಕೂಲ ಎಂಬ ಕಾರಣದಿಂದ ಗ್ರಾ.ಪಂ.ಗಳಿಗೆ ಕಾರ್ಡ್ ವಿತರಣೆ ಜವಾಬ್ದಾರಿ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಹಾಜರುಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದಾಗಿದೆ.
ಪಂಚತಂತ್ರ ತಂತ್ರಾಂಶದ ಮೂಲಕ ಈಗಾಗಲೇ ಸಾರ್ವಜನಿಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಹಾಗೂ ಕಂದಾಯ ಇಲಾಖೆಯ ಸೇವೆಗಳನ್ನು ಗ್ರಾ.ಪಂ.ಗಳು ನೀಡುತ್ತಿವೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಇದಕ್ಕೆ ಹೊಸ ಸೇರ್ಪಡೆ.
ವಿತರಣೆ ಹೇಗೆ?
ಗ್ರಾ.ಪಂ.ನ ಬಾಪೂಜಿ ಸೇವಾ ಕೇಂದ್ರಗಳಲ್ಲಿ “ಆರೋಗ್ಯ ಕರ್ನಾಟಕ’ ವೆಬ್ಸೈಟ್ ಮೂಲಕ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಾಗುತ್ತದೆ. ಎಲ್ಲ ಗ್ರಾ.ಪಂ.ಗಳಿಗೆ ಪ್ರತ್ಯೇಕವಾಗಿ ಲಾಗಿನ್ ಐಡಿ, ಪಾಸ್ವರ್ಡ್ ಒದಗಿಸಲಾಗಿದೆ. ಇ-ಹಾಜರಾತಿಗೆ ಬಳಸಲಾಗುತ್ತಿರುವ ಕಂಪ್ಯೂಟರ್ ಮೂಲಕ ಮಾತ್ರ ಕಾರ್ಡ್ ವಿತರಿಸಲು ಅವಕಾಶವಿದೆ. 10 ರೂ. ಶುಲ್ಕದೊಂದಿಗೆ ಎ4 ಅಳತೆಯ “ಆಯುಷ್ಮಾನ್ ಭಾರತ್’ನ ಮುದ್ರಿತ ಮಾಹಿತಿ ಒದಗಿಸಲಾಗುತ್ತದೆ.
ಅಧಿಕಾರಿಗಳಿಗೆ ತರಬೇತಿ
ಜಿಲ್ಲಾ ಕುಷ್ಠರೋಗ ಅಧಿಕಾರಿಗಳು ಇದಕ್ಕೆ ನೋಡಲ್ ಅಧಿಕಾರಿಗಳಾಗಿದ್ದು, ಎಲ್ಲ ಪಿಡಿಒಗಳು ಮತ್ತು ಡಾಟಾ ಎಂಟ್ರಿ ಆಪರೇಟರ್ಗಳಿಗೆ ತರಬೇತಿ ನೀಡಲಿದ್ದಾರೆ. ಎಲ್ಲ ಗ್ರಾ.ಪಂ. ವ್ಯಾಪ್ತಿಯಲ್ಲಿ ವಾಸ್ತವ್ಯವಿರುವ ಜನಸಾಮಾನ್ಯರಿಗೆ, ನೌಕರರಿಗೆ, ಆಶಾ ಕಾರ್ಯಕರ್ತೆಯರಿಗೆ, ಶಾಲಾ ಮಕ್ಕಳಿಗೆ ಮತ್ತು ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುವವರಿಗೆ ಶಿಬಿರ ಮಾದರಿಯಲ್ಲಿ ಕಾರ್ಡ್ ವಿತರಿಸಲಾಗುತ್ತದೆ.
ಗ್ರಾ.ಪಂ.ನ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆನ್ಲೈನ್ ಸೇವೆಗಳ ಜತೆಗೆ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ. ಗ್ರಾ.ಪಂ. ಅಧಿಕಾರಿಗಳಿಗೆ ಗುರುವಾರದಿಂದ ತರಬೇತಿ ನೀಡಲಾಗುತ್ತದೆ. ಕೆಲವೇ ದಿನಗಳಲ್ಲಿ ಈ ಸೇವೆ ಗ್ರಾ.ಪಂ. ಮಟ್ಟದಲ್ಲಿ ಜನರಿಗೆ ದೊರೆಯಲಿದೆ.
– ಡಾ| ಸೆಲ್ವಮಣಿ ಆರ್., ಸಿಇಒ, ದ.ಕ. ಜಿ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ