ಅರ್ಧಕ್ಕೆ ನಿಂತ ಕಾಮಗಾರಿ: ರಸ್ತೆ ಬದಿ ತಗ್ಗು -ಗುಡ್ಡ ಕುಸಿತದ ಭೀತಿ


Team Udayavani, May 22, 2019, 11:58 AM IST

ira

ಮಂಗಳೂರು: ಮಂಗಳೂರಿನಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ. ರೋಡ್‌-ಅಡ್ಡಹೊಳೆ ನಡುವಣ ಚತುಷ್ಪಥ ಕಾಂಕ್ರೀಟ್‌ ಕಾಮಗಾರಿ ಕೆಲವೇ ದಿನಗಳಲ್ಲಿ ಎದುರಾಗುವ ಮಳೆಗಾಲದಲ್ಲಿ ಸಮಸ್ಯೆಗೆ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ. ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿದ್ದು, ಮಳೆ ನೀರು ರಸ್ತೆಯ ಅಕ್ಕಪಕ್ಕದ ಭಾರೀ ತಗ್ಗು ಸ್ಥಳಗಳಲ್ಲಿ ನಿಲ್ಲುವುದು, ಗುಡ್ಡ ಕುಸಿತದ ಅಪಾಯ ನಿಶ್ಚಿತ ಎಂಬಂತಿದೆ.

ಬಿ.ಸಿ.ರೋಡ್‌ನಿಂದ ಕಲ್ಲಡ್ಕ, ಉಪ್ಪಿನಂಗಡಿಯಾಗಿ ಅಡ್ಡಹೊಳೆ ವರೆಗೆ ಚತುಷ್ಪಥ ರಸ್ತೆ ನಿರ್ಮಾಣವನ್ನು ಕಳೆದ ವರ್ಷ ಎಲ್‌ ಆ್ಯಂಡ್‌ ಟಿ ಕಂಪೆನಿ ಆರಂಭಿಸಿತ್ತು. ನೇರ ಹೆದ್ದಾರಿ ನಿರ್ಮಿಸುವುದಕ್ಕಾಗಿ ಗುಡ್ಡಗಳನ್ನು ಅಗೆಯಲಾಗಿದೆ, ತಗ್ಗು ಸ್ಥಳಗಳಿಗೆ ಮಣ್ಣು ತುಂಬಲಾಗಿದೆ, ಕೆಲವೆಡೆ ರಸ್ತೆಯ ಪಕ್ಕದಲ್ಲಿ ಮಣ್ಣು ಅಗೆದು ತಗ್ಗಾಗಿಸಲಾಗಿದೆ. ಅರೆಬರೆ ಕೆಲಸಗಳಷ್ಟೇ ಆಗಿರುವುದರಿಂದ ರಸ್ತೆಯುದ್ದಕ್ಕೂ ಮೋರಿಗಳು, ತೋಡುಗಳಲ್ಲಿ ಮಣ್ಣು ತುಂಬಿದೆ. ಮಳೆ ಬಂದರೆ ರಸ್ತೆ ಮೇಲೆ ನೀರು ನಿಲ್ಲುವುದು ಖಚಿತ.

ಸದ್ಯ ಮೆಲ್ಕಾರ್‌ನಿಂದ ಮಾಣಿವರೆಗೆ ದೊಡ್ಡ ಸಮಸ್ಯೆ ಇಲ್ಲ. ಆ ಬಳಿಕ ಬುಡೋಳಿ, ಗಡಿಯಾರ, ಪೆರ್ನೆ, ಉಪ್ಪಿನಂಗಡಿ ಸೇರಿದಂತೆ ಹಲವು ಭಾಗ ಗಳಲ್ಲಿ ಅಪಾಯ ಸಾಧ್ಯತೆ ಇದೆ. ನಿರ್ದಿಷ್ಟವಾಗಿ ನೀರಕಟ್ಟೆಯಿಂದ ಅಡ್ಡಹೊಳೆ ವರೆಗೆ ಅಪೂರ್ಣ ಕಾಮಗಾರಿಯಿಂದ ಸಂಚಾರಕ್ಕೆ ಸಂಚಕಾರ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಪೆರಿಯಶಾಂತಿ ಬಳಿ ಕಳೆದ ಬಾರಿ ಮಳೆಗೆ ಗುಡ್ಡ ಜರಿದು ಸಂಚಾರ ಬಂದ್‌ ಆಗಿತ್ತು. ಈ ಬಾರಿಯೂ ಅಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ.

ಗುಡ್ಡಗಳೇ ಅಪಾಯಕಾರಿ
ಈಗ ಇರುವ ರಸ್ತೆಯ ಅಕ್ಕಪಕ್ಕದಲ್ಲಿ ಹೊಸ ರಸ್ತೆಗಾಗಿ ಕೆಲವೆಡೆ ತಗ್ಗು ತೆಗೆದಿದ್ದು, ಕಳೆದ ಮಳೆಗಾಲದಲ್ಲೂ ಮಳೆ ನೀರು ನಿಂತು ಸಮಸ್ಯೆಯಾಗಿತ್ತು. ಇಂತಹ ತಗ್ಗು ಪ್ರದೇಶಗಳು ಈಗಲೂ ಹಾಗೆಯೇ ಇವೆ. ಮಣ್ಣನ್ನು ರಸ್ತೆ ಪಕ್ಕದ ತೋಟಗಳ ಬದಿಗೆ ಹಾಕಿದ್ದು, ಅದು ಕೊಚ್ಚಿಹೋಗಿ ತೋಟಗಳನ್ನು ಆವರಿಸುವ ಅಪಾಯವೂ ಇದೆ. ಗುಡ್ಡಗಳನ್ನು ಅವೈಜ್ಞಾನಿಕವಾಗಿ ಲಂಬವಾಗಿ ಕತ್ತರಿಸಿದ್ದರಿಂದ ಭೂಕುಸಿತ ಉಂಟಾಗಿತ್ತು.

63 ಕಿ.ಮೀ. ಉದ್ದದ ರಸ್ತೆ
ಒಟ್ಟು 821 ಕೋಟಿ ರೂ. ವೆಚ್ಚದಲ್ಲಿ ಬಿ.ಸಿ. ರೋಡ್‌ – ಅಡ್ಡಹೊಳೆ ಮಧ್ಯೆ 63 ಕಿ.ಮೀ. ಕಾಂಕ್ರೀಟ್‌ ಹೆದ್ದಾರಿ ನಿರ್ಮಿಸಲು ಎಲ್‌ ಆ್ಯಂಡ್‌ ಟಿ ಸಂಸ್ಥೆಗೆ ಗುತ್ತಿಗೆ ವಹಿಸಲಾಗಿತ್ತು. 2017ರ ಮಾ.28ಕ್ಕೆ ಕಾಮಗಾರಿ ಆರಂಭಿಸಿದ್ದು, ಪೂರ್ಣ ಗೊಳಿಸಲು ಎರಡೂವರೆ ವರ್ಷಗಳ ಅವಧಿ ನೀಡಲಾಗಿತ್ತು. ಸದ್ಯ ಮಳೆಗಾಲಕ್ಕಾಗಿ ಪೂರಕ ಕಾಮಗಾರಿ ನಡೆಯುತ್ತಿದೆ.

ಅಪಾಯಕಾರಿ ಸ್ಥಿತಿ
ಬಿ.ಸಿ. ರೋಡ್‌-ಅಡ್ಡಹೊಳೆ ರಸ್ತೆ ಕಾಮಗಾರಿಯಲ್ಲಿ ಅರೆಬರೆ ಕೆಲಸಗಳಷ್ಟೇ ಆಗಿರುವುದರಿಂದ ಈ ಬಾರಿಯೂ ಮಳೆಗಾಲದಲ್ಲಿ ಪ್ರಯಾಣಿಕರಿಗೆ ಮತ್ತು ಸ್ಥಳೀಯರಿಗೆ ಆತಂಕ ಎದುರಾಗಿದೆ. ಗುಡ್ಡಗಳು ಕುಸಿಯುವ ಅಪಾಯವಿದೆ. ರಸ್ತೆ ಬದಿಯಲ್ಲಿ ಹೊಂಡಗಳಿದ್ದು, ಪ್ರಯಾಣಿಕರಿಗೆ ಸಮಸ್ಯೆಯಾಗಬಹುದು.
 ಕಿಶೋರ್‌ ಶಿರಾಡಿ, ಹೋರಾಟಗಾರರು.

ನಿರ್ವಹಣಾ ಕಾಮಗಾರಿಗೆ ಸೂಚನೆ
ಬಿ.ಸಿ.ರೋಡ್‌-ಅಡ್ಡಹೊಳೆ ರಸ್ತೆ ಕಾಮಗಾರಿಯ ಹಿನ್ನೆಲೆಯಲ್ಲಿ ಮಳೆಗಾಲಕ್ಕೆ ಮುನ್ನ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಈ ಬಗ್ಗೆ ಪರಿಶೀಲಿಸಲಾಗುವುದು.
 - ಲಿಂಗೇಗೌಡ, ಯೋಜನಾ ನಿರ್ದೇಶಕರು, ರಾ.ಹೆ.ಪ್ರಾಧಿಕಾರ

ದಿನೇಶ್‌ ಇರಾ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.