ಬಹು ನಿರೀಕ್ಷಿತ ಬಿ.ಸಿ. ರೋಡ್‌-ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ

ಮಳೆಗಾಲಕ್ಕೆ ಮುನ್ನ ಒಂದು ಹಂತ ಪೂರೈಸಲು ಇಲಾಖೆ ಸಿದ್ಧತೆ

Team Udayavani, May 22, 2019, 12:07 PM IST

bc

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಗೊಳ್ಳು ತ್ತಿರುವ
ಬಿ.ಸಿ. ರೋಡ್‌ – ಪುಂಜಾಲ ಕಟ್ಟೆ ರಸ್ತೆ ಕಾಮಗಾರಿಯನ್ನು ಮಳೆಗಾಲದಲ್ಲಿ ಸಮಸ್ಯೆಯಾಗದಂತೆ ಒಂದು ಹಂತಕ್ಕೆ ತರುವ ಪ್ರಯತ್ನವನ್ನು ರಾ. ಹೆ. ಇಲಾಖೆ ಸಮರೋಪಾದಿಯಲ್ಲಿ ನಡೆಸುತ್ತಿದೆ.

ಬಿ.ಸಿ. ರೋಡ್‌-ಕಡೂರು ರಸ್ತೆಯು ರಾ.ಹೆ.ಯಾಗಿ ಮೇಲ್ದರ್ಜೆಗೇರಿದ ಬಳಿಕ ಬಿ.ಸಿ.ರೋಡ್‌-ಪುಂಜಾಲ ಕಟ್ಟೆ ರಸ್ತೆ ಅಭಿವೃದ್ಧಿ ಕಾರ್ಯವನ್ನು ರಾ.ಹೆ. ಇಲಾಖೆ ಕೈಗೆತ್ತಿ ಕೊಂಡಿತ್ತು. ಇಲ್ಲಿ ಮಣ್ಣು ಅಗೆದಿರುವ ಪ್ರದೇಶಗಳನ್ನು ಹಾಗೇ ಬಿಟ್ಟಲ್ಲಿ ಮಳೆ ಗಾಲದಲ್ಲಿ ಸಂಚಾರ ಕಡಿತ ಅಪಾಯ ಇದ್ದು, ಕಾಮಗಾರಿ ಭರದಿಂದ ಸಾಗುತ್ತಿದೆ. ಒಟ್ಟು 159 ಕೋ.ರೂ. ವೆಚ್ಚದಲ್ಲಿ 19.85 ಕಿ.ಮೀ. ಉದ್ದದ ರಸ್ತೆ ಕಾಮಗಾರಿ ಮುಗಿಸುವುದಕ್ಕೆ 18 ತಿಂಗಳ ಅವಧಿ ನೀಡಲಾಗಿದ್ದು, ಮುಂದಿನ ವರ್ಷ ಪೂರ್ಣಗೊಳ್ಳುತ್ತದೆ.

ಪ್ರಸ್ತುತ ಬಿ.ಸಿ. ರೋಡ್‌ ಮತ್ತು ಪುಂಜಾಲಕಟ್ಟೆ ಎರಡೂ ಕಡೆಗಳಿಂದ ಕಾಮಗಾರಿ ನಡೆಯುತ್ತಿದೆ. ಅಗೆದಿ ರುವ ಬಹುತೇಕ ಪ್ರದೇಶದಲ್ಲಿ ಈಗಾ ಗಲೇ ಡಾಮರು ಹಾಕಲಾಗಿದೆ. ಬಂಟ್ವಾಳ ಅಜೆಕಲ-ಬೈಪಾಸ್‌ ಬಳಿ ಸೇತುವೆ ನಿರ್ಮಾಣ ಬಹು ತೇಕ ಪೂರ್ಣಗೊಂಡಿದೆ. ಪುಂಜಾಲಕಟ್ಟೆ ಭಾಗದಲ್ಲೂ ಅಗೆದಿರುವ ಹೆದ್ದಾರಿಗೆ ಒಂದು ಹಂತದ ಡಾಮರು ಹಾಕಿ ಮಳೆಗಾಲದಲ್ಲಿ ತೊಂದರೆಯಾಗದಂತೆ ಮಾಡುವತ್ತ ಇಲಾಖೆ ಕಾರ್ಯ ಪ್ರವೃತ್ತವಾಗಿದೆ.
ಒಟ್ಟು 159 ಕೋ.ರೂ.ಗಳ ಅನುದಾನದಲ್ಲಿ ರಸ್ತೆ ಕಾಮಗಾರಿಗೆ 100 ಕೋ.ರೂ. ವ್ಯಯವಾಗಲಿದೆ. ಇನ್ನುಳಿದ ಅನುದಾನವು ಭೂಸ್ವಾಧೀನ, ಮರಗಳ ತೆರವು, ವಿದ್ಯುತ್‌ ಕಂಬಗಳ ಸ್ಥಳಾಂತರ ಇತ್ಯಾದಿಗೆ. ಹೆದ್ದಾರಿಯ ಮಣಿಹಳ್ಳದಲ್ಲಿ ಸೇತುವೆ ಕೆಲಸ ನಡೆಯುತ್ತಿದ್ದು, ಅಲ್ಲಿ ಮನೆಗಳ ತೆರವು, ಭೂಸ್ವಾಧೀನ ಪ್ರಕ್ರಿಯೆಯೂ ನಡೆಯಬೇಕಿದೆ.

5 ಕಿ.ಮೀ. ಹೆದ್ದಾರಿ ಪೂರ್ಣ ಪುಂಜಾಲಕಟ್ಟೆಯಿಂದ ಮಧ್ವದ ವರೆಗೆ ಸುಮಾರು 5 ಕಿ.ಮೀ. ಉದ್ದಕ್ಕೆ ರಸ್ತೆ ಅಗೆಯಲಾಗಿದ್ದು, ಮಣ್ಣು-ಜಲ್ಲಿ ತುಂಬಿಸಿ ಒಂದು ಹಂತದ ಡಾಮರು ಹಾಸುವಿಕೆಯನ್ನು ಇಲಾಖೆ ಮಳೆ ಗಾಲಕ್ಕೆ ಮುನ್ನ ಮುಗಿಸಲಿದೆ. ಇನ್ನುಳಿದ ಕೆಲಸ ಮಳೆಗಾಲ ಕಳೆದ ಮೇಲೆ ನಡೆಯಲಿದೆ. ಬಿ.ಸಿ.ರೋಡಿನಿಂದ ಸುಮಾರು 4 ಕಿ.ಮೀ. ವರೆಗೆ ಚತುಷ್ಪಥ ಕಾಂಕ್ರೀಟ್‌ ರಸ್ತೆ ನಿರ್ಮಾಣವಾಗಲಿದೆ. ಮಳೆಗಾಲಕ್ಕೆ ಮುನ್ನ ಅಗಲಗೊಳಿಸಿ, ಮಳೆಗಾಲ ಮುಗಿದ ತತ್‌ಕ್ಷಣ ಕಾಂಕ್ರೀಟ್‌ ಹಾಕುವ ಯೋಜನೆ ಇಲಾಖೆಯ ಮುಂದಿದೆ.

4 ಸೇತುವೆ, 60 ಮೋರಿಗಳು
ಒಟ್ಟು ನಾಲ್ಕು ಸೇತುವೆಗಳು ನಿರ್ಮಾಣವಾಗಲಿದ್ದು, ಇದರಲ್ಲಿ ಬಂಟ್ವಾಳ ಬೈಪಾಸ್‌ ಬಳಿಯದು ಬಹುತೇಕ ಪೂರ್ಣಗೊಂಡಿದೆ. ಉಳಿದ ಮೂರನ್ನು ಮಳೆಗಾಲದಲ್ಲೇ ನೀರಿನ ಮಟ್ಟ ಗಮನಿಸಿ ಮುಂದುವರಿಸುವ ಆಲೋಚನೆ ಇದೆ ಎಂದು ಅಧಿಕಾರಿ ಗಳು ಹೇಳಿದ್ದಾರೆ. 65 ಮೋರಿಗಳ ಪೈಕಿ ಸುಮಾರು 30ರ ಕಾಮಗಾರಿ ಮಳೆಗಾಲ ಆರಂಭಕ್ಕೆ ಮುನ್ನ ನಡೆಯಲಿದೆ. ಉಳಿದವುಗಳ ಕೆಲಸ ಮಳೆಗಾಲದಲ್ಲೇ ಆಗಲಿದೆ. ಮಳೆಗಾಲ ಮುಗಿದ ತತ್‌ಕ್ಷಣ ಅವುಗಳಿಗೆ ಮಣ್ಣು-ಜಲ್ಲಿ ತುಂಬಿಸಿ ಡಾಮರು ಹಾಕಲಾಗುತ್ತದೆ.

5 ಕಿ.ಮೀ. ಕಾಮಗಾರಿ ಪೂರ್ಣ
ಹೆದ್ದಾರಿ ಕಾಮಗಾರಿ ಮುಂದಿನ ವರ್ಷ ಪೂರ್ಣಗೊಳ್ಳಲಿದ್ದು, ಪ್ರಸ್ತುತ ಆರಂಭಗೊಂಡಿರುವ ಪ್ರದೇಶದಲ್ಲಿ ಮಳೆಗಾಲಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಿದ್ದೇವೆ. ಪುಂಜಾಲಕಟ್ಟೆಯಿಂದ ಸುಮಾರು 5 ಕಿ.ಮೀ.ಗಳ ಕೆಲಸ ಈಗ ಮುಗಿಸಿ, ಮಳೆಗಾಲ ಕಳೆದ ಮೇಲೆ ಇನ್ನುಳಿದ ರಸ್ತೆ ಅಗೆಯಲಿದ್ದೇವೆ. ಸೇತುವೆ, ಮೋರಿಗಳ ಕಾಮಗಾರಿ ಮಳೆಗಾಲದಲ್ಲಿಯೂ ನಡೆಯಲಿದೆ.
ರಮೇಶ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ರಾ.ಹೆ. ಉಪವಿಭಾಗ, ಮಂಗಳೂರು

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.