ಕಾಮಗಾರಿ ಶೀಘ್ರ ಪುನರಾರಂಭಿಸದಿದ್ದರೆ ಹೋರಾಟ: ರಮಾನಾಥ ರೈ


Team Udayavani, Nov 28, 2018, 3:45 AM IST

ramanath-rai-2-650.jpg

ಮಂಗಳೂರು: ಮಂಗಳೂರು- ಬೆಂಗಳೂರು ನಡುವಣ ಪ್ರಮುಖ ಸಂಪರ್ಕ ರಸ್ತೆಯಾಗಿರುವ ರಾ. ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‌ – ಅಡ್ಡಹೊಳೆ ರಸ್ತೆಯ ಉನ್ನತೀಕರಣ ಕಾಮಗಾರಿಯನ್ನು ಕೂಡಲೇ ಪುನರಾರಂಭಿಸಬೇಕು ಇಲ್ಲದಿದ್ದರೆ ಅಡ್ಡಹೊಳೆಯಿಂದ ಮಂಗಳೂರುವರೆಗೆ ಪಾದಯಾತ್ರೆಯೊಂದಿಗೆ ಹೋರಾಟ ಆರಂಭಿಸಲಾಗುವುದು ಎಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎ ಸರಕಾರವಿದ್ದಾಗ ಬಿ.ಸಿ.ರೋಡ್‌ – ಅಡ್ಡಹೊಳೆ ರಸ್ತೆಯನ್ನು ವಿಸ್ತರಿಸಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿತ್ತು. ಭೂಸ್ವಾಧೀನ ಸೇರಿದಂತೆ ಪೂರಕ ಪ್ರಕ್ರಿಯೆಗಳನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸಲಾಗಿತ್ತು. ಯೋಜನೆ ವ್ಯಾಪ್ತಿಯ ಸುಮಾರು 36 ಹೆಕ್ಟೇರ್‌ ಜಮೀನಿನಲ್ಲಿ ಮರಗಳನ್ನು ಕಡಿಯಲು ಕೇಂದ್ರ ಹಾಗೂ ರಾಜ್ಯ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಅನುಮತಿ ದೊರಕಿತ್ತು. ಎಲ್‌ ಆ್ಯಂಡ್‌ ಟಿ ಕಂಪೆನಿ ಗುತ್ತಿಗೆ ವಹಿಸಿಕೊಂಡು ಕಾಮಗಾರಿ ಆರಂಭಿಸಿತ್ತು. ಆದರೆ ಕಂಪೆನಿಗೆ ಹಣ ಪಾವತಿಯಾಗದ ಕಾರಣ ಕಾಮಗಾರಿ ಸ್ಥಗಿತಗೊಂಡಿದೆ. ಇನ್ನು ಮರು ಟೆಂಡರ್‌ ಕರೆಯಬೇಕಾಗಿದೆ ಎಂದರು.

ಕಾಮಗಾರಿ ಸ್ಥಗಿತದಿಂದ ಸಂಚಾರಕ್ಕೆ ಸಮಸ್ಯೆಯಾಗಿದೆ. ಜಿಲ್ಲೆಯ ಅಭಿವೃದ್ಧಿಗೂ ತೊಡಕಾಗಿದೆ. ಸಮಸ್ಯೆ ಪರಿಹರಿಸಬೇಕಾದವರು ರಾ. ಹೆದ್ದಾರಿ ಪ್ರಾಧಿಕಾರ ಹಾಗೂ ಚುನಾಯಿತ ಜನಪ್ರತಿನಿಧಿಗಳು. ಅದುದರಿಂದ ಸಂಸದರು ಕೂಡಲೇ ಕಾರ್ಯೋನ್ಮುಖರಾಗಿ ಕಾಮಗಾರಿ ಮರು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮರು ಆರಂಭಕ್ಕೆ ಕೆಲವು ದಿನಗಳ ಕಾಲಾವಕಾಶ ನೀಡುತ್ತೇವೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪಾದಯಾತ್ರೆ ಮೂಲಕ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ವಿಧಾನಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌, ಮುಖಂಡರಾದ ಇಬ್ರಾಹಿಂ ಕೋಡಿಜಾಲ್‌, ಶಶಿಧರ ಹೆಗ್ಡೆ, ಮಮತಾ ಗಟ್ಟಿ, ಸದಾಶಿವ ಉಳ್ಳಾಲ, ಪೃಥ್ವಿರಾಜ್‌, ನವೀನ್‌ ಡಿ’ಸೋಜಾ, ಅಪ್ಪಿ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ, ಐಟಿ ಘಟಕದ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

ಸುಳ್ಳು ಮಾಹಿತಿ
ಪಂಪ್‌ವೆಲ್‌ನಲ್ಲಿ ಫ್ಲೈಓವರ್‌ ಕಾಮಗಾರಿ, ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ವಿಳಂಬಕ್ಕೆ ರಾಜ್ಯ ಸರಕಾರ ಕಾರಣ ಎಂದು ಆರೋಪಿಸಲಾಗುತ್ತಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿ ಜನರನ್ನು ಹಾದಿ ತಪ್ಪಿಸುವ ಕಾರ್ಯ ಜನಪ್ರತಿನಿಧಿಗಳು ಮಾಡುತ್ತಿರುವುದು ನೋವಿನ ವಿಚಾರ. 
– ಬಿ. ರಮಾನಾಥ ರೈ, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.