ಪ್ರಧಾನಿ ಆಗಮನ ಹಿನ್ನೆಲೆ: ಸ್ವಚ್ಛಗೊಳ್ಳುತ್ತಿರುವ ಎನ್ಎಚ್-66
Team Udayavani, Aug 25, 2022, 11:44 AM IST
ಪಣಂಬೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ. 2ರಂದು ಪಣಂಬೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ರಸ್ತೆಗಳ ದುರಸ್ತಿ ಹಾಗೂ ಸ್ವಚ್ಛತೆಗೆ ಹೆದ್ದಾರಿ ಇಲಾಖೆ ಮುಂದಾಗಿದೆ. ಕಳೆದ ಎರಡು ತಿಂಗಳುಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಹೆದ್ದಾರಿ 66ರ ಕೂಳೂರು, ಪಣಂಬೂರು, ಬೈಕಂಪಾಡಿ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೊಂಡ, ಡಿವೈಡರ್ಗಳಲ್ಲಿ ಹುಲ್ಲು ಬೆಳೆದಿದ್ದು, ಸ್ವಚ್ಛತೆ ಕಾರ್ಯ ಆರಂಭಿಸಲಾಗಿದೆ.
ಬುಧವಾರ ಕೂಳೂರಿನಿಂದ ಪಣಂಬೂರು ಹೆದ್ದಾರಿ ಮಧ್ಯೆ ಇರುವ ಡಿವೈಡರ್ಗಳ ಹುಲ್ಲು ತೆಗೆಯುವ ಕೆಲಸ ಆರಂಭಿಸಲಾಗಿದೆ. ಜೇಸಿಬಿ ಮೂಲಕ ಹೆದ್ದಾರಿ ಬದಿ ಸಂಗ್ರಹವಾಗಿರುವ ಕೆಸರು ಮಣ್ಣು ತೆಗೆಯಲಾಗುತ್ತಿದೆ. ಎನ್ಎಂಪಿಎ ಮುಂಭಾಗ ಕೆಟ್ಟು ಹೋದ ರಸ್ತೆ ಹಾಗೂ ಇಕ್ಕೆಲಗಳಲ್ಲೂ ಸುಂದರಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಬುಧವಾರ ಬೆಳಗ್ಗಿನಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಹಿನ್ನಡೆಯಾಗಿದೆ. ಒಂದು ವಾರದೊಳಗಾಗಿ ರಸ್ತೆಯ ದುರಸ್ತಿ ನಡೆಸಲು ಸಮಯವಕಾಶವಿದ್ದರೂ ಮಳೆಯ ನಡುವೆ ಕಾಮಗಾರಿ ನಡೆಸುವುದು ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ. ಗುತ್ತಿಗೆ ಪಡೆದ ಕಂಪೆನಿ ಹೆದ್ದಾರಿ ಬೀದಿ ದೀಪ, ಡಿವೈಡರ್ ಸ್ವಚ್ಛತೆ ಕಾರ್ಯವನ್ನು ಮಾಡುವ ಗುತ್ತಿಗೆ ಪಡೆದಿದ್ದರೂ ಹಲವೆಡೆ ಬೀದಿ ದೀಪದ ದುರಸ್ತಿ ನಡೆಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ