ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ


Team Udayavani, Jan 26, 2021, 4:31 PM IST

ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಬಂಗಾರಪಲ್ಕೆ ಬಡಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದ ಉಜಿರೆಯ ವಿದ್ಯಾರ್ಥಿಯೋರ್ವ ಮಣ್ಣಿನಡಿ ಸಿಲುಕಿದ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ಕಾರ್ಯಾಚರಣೆ ಮುಂದುವರೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಕೃಷ್ಣಯ್ಯ ವಾಸುದೇವ ಶೆಟ್ಟಿ ಅವರ ಪುತ್ರ ಉಜಿರೆ ಎಸ್ ಡಿಎಂ ಕಾಲೇಜು ದ್ವಿತೀಯ ಪದವಿ ವಿದ್ಯಾರ್ಥಿ ಸನತ್ ಶೆಟ್ಟಿ (21) ಮಣ್ಣಿನಡಿ ಸಿಲುಕಿದ್ದು, ತೆರವಿಗೆ ಎಸ್ ಡಿಆರ್ ಎಫ್, ಪೊಲೀಸ್, ಅಗ್ನಿಶಾಮಕದಳ, ಶ್ರೀ.ಕ್ಷೇ.ಧ. ವಿಪತ್ತು ನಿರ್ವಹಣಾ ತಂಡ ಸತತ ಕಾರ್ಯಾಚರಣೆಯಲ್ಲಿ ಹರಸಾಹಸ ಪಟ್ಟಿದೆ.

ಇದನ್ನೂ ಓದಿ:ದೆಹಲಿ: ಹಿಂಸಾರೂಪಕ್ಕೆ ತಿರುಗಿದ ರೈತರ ಪ್ರತಿಭಟನೆ; ಟ್ರ್ಯಾಕ್ಟರ್ ಮಗುಚಿ ಬಿದ್ದು ರೈತ ಸಾವು

ದಿಡುಪೆ ಕಜಕೆಯಿಂದ 12 ಕಿ.ಮೀ ದೂರದಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಂಚಿನಲ್ಲಿರುವ ಜಲಪಾತವಾಗಿದ್ದು, ದುರ್ಗಮ ಹಾದಿಯಲ್ಲಿ ಜೆಸಿಬಿ, ಕ್ರೇನ್ ಸಾಗಲು ಸಾಧ್ಯವಾಗದಿರುವುದರಿಂದ ಸ್ಥಳೀಯರ ಸಹಾಯದಿಂದ ಮಾನವ ಶ್ರಮದಿಂದ ತೆರವುಕಾರ್ಯ ಮುಂದುವರಿದಿದೆ.

15 ಅಡಿ ಆಳದಲ್ಲಿ ಬೃಹದಾಕಾರದ ಕಲ್ಲು, ಬಂಡೆ, ಮಣ್ಣಿನಡಿ ಸನತ್ ಶೆಟ್ಟಿ ಸಿಲುಕಿದ್ದು, ಕಾರ್ಯಾಚರಣೆ ಬಲು ತ್ರಾಸದಾಯಕವಾಗಿದೆ.

ಈತನ ಜತೆಗಿದ್ದ ಸ್ನೇಹಿತರಾದ ಆದಿತ್ಯ ಹಾಗೂ ಸೌರಬ್ ಸಹಿತ ಇತರರು ಪ್ರಾಣಪಾಯದಿಂದ ಪಾರಾಗಿದ್ದು, ಸೌರಬ್ ಗೆ ಸಣ್ಣಪುಟ್ಟ ಗಾಯವಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ, ಭಯೋತ್ಪಾದಕರು‌ : ಬಿ ಸಿ ಪಾಟೀಲ್

ಘಟನೆ ವಿವರ

ಉಜಿರೆ ನಿವಾಸಿಯಾಗಿರುವ ಸನತ್ ಶೆಟ್ಟಿ ಸಹಿತ ಮೂವರು ಕ್ರಿಕೆಟ್ ಪಂದ್ಯಾಟವಾಡಲು ಸಂಸೆಯಲ್ಲಿರುವ ತನ್ನ ಸ್ನೇಹಿತನಾದ ಆದಿತ್ಯ ಮನೆಗೆ ರವಿವಾರ ತೆರಳಿದ್ದರು. ರವಿವಾರ ಅಲ್ಲೇ ತಂಗಿದ್ದು, ಸೋಮವಾರ ಮಧ್ಯಾಹ್ನ ಜಲಪಾತ ವೀಕ್ಷಿಸಿ ಉಜಿರೆ ಮರಳುವವರಿದ್ದರು. ಹಿಂದಿರುಗುವ ವೇಳೆ ಜಲಪಾತದಂಚಿನಲ್ಲಿದ್ದ ಗುಡ್ಡ ಕುಸಿತವಾಗಿ ಸನತ್ ಶೆಟ್ಟಿಮೇಲೆ ಬಿದ್ದಿದೆ.

ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಮಲವಂತಿಗೆ ಗ್ರಾಮಕರಣಿಕ ರಾಘವೇಂದ್ರ, ಸಹಾಯಕ ಮಂಜುನಾಥ್, ಗ್ರಾ.ಪಂ. ಸದಸ್ಯ ಪ್ರಕಾಶ್ ಕುಮಾರ್ ಜೈನ್, ಎ.ಎಸ್.ಐ ತಿಲಕ್, ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು, ಆರ್.ಐ. ಪ್ರತೀಕ್ಷ್, ಎನ್.ಡಿ.ಆರ್.ಎಫ್., ಶ್ರೀಂಗೇರಿ ಅಗ್ನಿಶಾಮಕದಳ ಭೇಟಿ ನೀಡಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.