ಬಹುಗ್ರಾಮ ಯೋಜನೆಯಿಂದ ಬಹು ಕ್ಷೇತ್ರಗಳಿಗೆ ನೀರು!


Team Udayavani, Oct 7, 2022, 7:17 AM IST

ಬಹುಗ್ರಾಮ ಯೋಜನೆಯಿಂದ ಬಹು ಕ್ಷೇತ್ರಗಳಿಗೆ ನೀರು!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ 15 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಒಟ್ಟು 73.10 ಕೋ.ರೂ.ಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಒಂದೇ ಬಹುಗ್ರಾಮ ಯೋಜನೆ ಯಿಂದ ಮೂರು ಕ್ಷೇತ್ರಗಳ ಗ್ರಾಮೀಣ ಭಾಗಕ್ಕೆ ನೀರು ಸಿಗುತ್ತಿರುವುದು ಇದೇ ಮೊದಲು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಂಗಳೂರು ವಿಭಾಗದಿಂದ ಜಲಜೀವನ್‌ ಮಿಷನ್‌ ಯೋಜನೆ-2215 ಎಂವಿಎಸ್‌ ಮೂಲಕ ಅನು ಷ್ಠಾನಗೊಳ್ಳುವ ಈ ಯೋಜನೆಗೆ ಉಳಾçಬೆಟ್ಟು ಮತ್ತು ಬಂಟ್ವಾಳ ಇತರ 132 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಎಂಬ ಹೆಸರನ್ನು ಇಡಲಾಗಿದೆ.

ಬಂಟ್ವಾಳ ಹಾಗೂ ಮಂಗಳೂರು ಉತ್ತರ ಕ್ಷೇತ್ರಕ್ಕೆ ತಲಾ 26.58 ಕೋ.ರೂ., ಮಂಗಳೂರು ಕ್ಷೇತ್ರಕ್ಕೆ 19.94 ಕೋ.ರೂ. ಮೀಸಲಿಡಲಾಗಿದೆ. 18 ತಿಂಗಳಲ್ಲಿ ಯೋಜನೆ ಪೂರ್ತಿಗೊಳ್ಳಲಿದ್ದು, ಮುಗ್ರೋಡಿ ಕನ್‌ಸ್ಟ್ರಕ್ಷನ್ಸ್‌ ಕಾಮಗಾರಿ ನಿರ್ವಹಿಸಲಿದೆ.

92,174 ಫಲಾನುಭವಿಗಳು
ಯೋಜನೆಯು ಒಟ್ಟು 92,174 ಮಂದಿ ಫಲಾನುಭವಿಗಳನ್ನು ತಲುಪಲಿದ್ದು, ಬಂಟ್ವಾಳದ 51 ಜನವಸತಿ ಪ್ರದೇಶದ 22,708, ಮಂಗಳೂರು ಕ್ಷೇತ್ರದ 34 ಜನವಸತಿ ಪ್ರದೇಶದ 27,751 ಹಾಗೂ ಮಂಗಳೂರು ಉತ್ತರದ 47 ಜನವಸತಿ ಪ್ರದೇಶದ 41,679 ಮಂದಿಗೆ ನೀರನ್ನೊದಗಿಸುವ ಗುರಿ ಹೊಂದಲಾಗಿದೆ.

15 ಗ್ರಾಮಗಳಿಗೆ ಯೋಜನೆ
ಪ್ರಸ್ತುತ ಅನುಷ್ಠಾನಗೊಳ್ಳುತ್ತಿರುವ ಯೋಜನೆ ಯಲ್ಲಿ ಬಂಟ್ವಾಳದ ಕ್ಷೇತ್ರದ 5 ಗ್ರಾ.ಪಂ.ಗಳ ಅಮ್ಮುಂಜೆ, ಬಡಗಬೆಳ್ಳೂರು, ತೆಂಕಬೆಳ್ಳೂರು, ಕರಿಯಂಗಳ, ಕಳ್ಳಿಗೆ ಗ್ರಾಮಗಳು, ಮಂಗಳೂರು ಕ್ಷೇತ್ರದ 3 ಗ್ರಾ.ಪಂ.ಗಳ ಪುದು, ಕೊಡಾ¾ಣ್‌, ಮೇರಮಜಲು, ತುಂಬೆ ಗ್ರಾಮಗಳು, ಮಂಗ ಳೂರು ಉತ್ತರ ಕ್ಷೇತ್ರದ 4 ಗ್ರಾ.ಪಂ.ಗಳ ಅಡ್ಯಾರ್‌, ಅರ್ಕುಳ, ಮಲ್ಲೂರು, ಬೊಂಡಂತಿಲ, ನೀರುಮಾರ್ಗ, ಉಳ್ಳಾಯಿಬೆಟ್ಟು ಹೀಗೆ ಒಟ್ಟು 15 ಗ್ರಾಮ(11 ಗ್ರಾ.ಪಂ.)ಗಳ ಒಟ್ಟು 132 ಜನವಸತಿ ಪ್ರದೇಶಗಳಿಗೆ ನೀರು ತಲುಪಲಿದೆ.

ಬೆಂಜನಪದವಿನಲ್ಲಿ ಮುಖ್ಯ ಟ್ಯಾಂಕ್‌
ಯೋಜನೆಗೆ ಬೇಕಾಗುವ 5.60 ಎಂಎಲ್‌ಡಿ ನೀರನ್ನು ನೇತ್ರಾವತಿ ನದಿಯ ತುಂಬೆ ಮನಪಾ ಅಣೆಕಟ್ಟಿನಿಂದ ರಾಮಲ್‌ಕಟ್ಟೆ ಘಟಕದ ಮೂಲಕ ಮೇಲೆತ್ತಿ ಬೆಂಜನಪದವು ರಾಮನಗರದ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಳ್ಳುವ 5.50 ಲಕ್ಷ ಲೀ. ಸಾಮರ್ಥ್ಯದ ಮೇಜರ್‌ ಬ್ಯಾಲೆನ್ಸಿಂಗ್‌ ಟ್ಯಾಂಕ್‌ (ಎಂಬಿಟಿ)ಗೆ ತುಂಬಿಸಿ ಬಳಿಕ 9 ಝೋನಲ್‌ ಬ್ಯಾಲೆನ್ಸಿಂಗ್‌ ಟ್ಯಾಂಕ್‌(ಝಡ್‌ಬಿಟಿ)ಗಳಿಗೆ ಪೂರೈಸಲಾಗುತ್ತದೆ.

ಯೋಜನೆಯಲ್ಲಿ 3 ಕ್ಷೇತ್ರಗಳ 15 ಗ್ರಾಮದ 132 ಜನವಸತಿ ಪ್ರದೇಶಗಳಿಗೆ ಬೇಕಾದ ಒಟ್ಟು 5.60 ಎಂಎಲ್‌ಡಿ ನೀರನ್ನು ನೇತ್ರಾವತಿ ನದಿಯಿಂದ ರಾಮಲ್‌ಕಟ್ಟೆಯ ನೀರು ಶುದ್ಧೀಕರಣ ಘಟಕದಿಂದ ಪಡೆಯಲಾಗುತ್ತದೆ. ಸಾಕಷ್ಟು ಬಹುಗ್ರಾಮ ನೀರಿನ ಯೋಜನೆಗಳು ಅನುಷ್ಠಾನಗೊಂಡಿದ್ದು, ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳನ್ನು ಒಳಗೊಂಡ ಯೋಜನೆ ಇದೇ ಮೊದಲಾಗಿದೆ.
– ನರೇಂದ್ರಬಾಬು ಕಾರ್ಯಪಾಲಕ ಎಂಜಿನಿಯರ್‌, ಗ್ರಾ.ಕು.ನೀ.ಹಾಗೂ ನೈ.ಇಲಾಖೆ ಮಂಗಳೂರು ವಿಭಾಗ

–  ಕಿರಣ್‌ ಸರಪಾಡಿ

 

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.