ದಕ್ಷಿಣಕನ್ನಡ ಜಿಲ್ಲೆ : ಬಂಧಿತ ಎಲ್ಲ 14 ಪಿಎಫ್ಐ ಮುಖಂಡರಿಗೆ ಜಾಮೀನು ಮಂಜೂರು
Team Udayavani, Oct 2, 2022, 12:10 PM IST
ಮಂಗಳೂರು : ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ದ.ಕ. ಜಿಲ್ಲೆಯ ಒಟ್ಟು 14 ಮಂದಿ ಪಿಎಫ್ಐ ಮುಖಂಡರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪಿಎಫ್ಐ ನಾಯಕರ ಮನೆ, ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದ ಅನಂತರ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಾದ್ಯಂತ ಪೊಲೀಸರು ಪಿಎಫ್ಐ ಮುಖಂಡರನ್ನು ಬಂಧಿಸಿದ್ದರು. ಅದರಂತೆ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ 10 ಮಂದಿ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ 4 ಮಂದಿ ಪಿಎಫ್ಐ ಮುಖಂಡರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ : ನಕಲಿ ಗಾಂಧಿ ಪರಿವಾರವು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದುರಂತ: ಪ್ರಲ್ಹಾದ್ ಜೋಶಿ