ಕಾಯಕಲ್ಪಕ್ಕೆ  ಕಾಯುತ್ತಿದೆ ಬಜ-ಬಲಯೂರು ರಸ್ತೆ 


Team Udayavani, Mar 30, 2018, 10:37 AM IST

30-March-4.jpg

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾ.ಪಂ. ವ್ಯಾಪ್ತಿಯ ದೇವಶ್ಯಮೂಡೂರು ಗ್ರಾಮದ ಬಜ- ಬಲಯೂರು ಕೂಡುರಸ್ತೆ ಅವಗಣನೆಗೆ ಒಳಗಾಗಿದೆ.

ಕಳೆದ ಹಲವಾರು ವರ್ಷಗಳಿಂದ ಈ ರಸ್ತೆಗೆ ಮರುಡಾಮರು ಹಾಕಿಲ್ಲವೆಂದು ಸಾರ್ವಜನಿಕರ ಆರೋಪವಾಗಿದೆ. ಈ ರಸ್ತೆ
ತೀರಾ ಹದಗೆಟ್ಟಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಡಾಮರು ಕಿತ್ತುಹೋಗಿ ಜಲ್ಲಿಕಲ್ಲುಗಳು ರಸ್ತೆಯಲ್ಲಿ ತುಂಬಿ ವಾಹನ ಸಂಚಾರಕ್ಕೆ ತೊಂದರೆಯುಂಟು ಮಾಡುತ್ತಿದೆ.

ಮಾರ್ಗ ಬದಲಾಯಿಸಿದ ಬಸ್‌ಗಳು
ದೈವಸ್ಥಳದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಪೆರಿಯಪಾದೆ, ಬಜ, ಮಾವಿನಕಟ್ಟೆ, ಸರಪಾಡಿ ಕಡೆಯವರು ಆರೋಗ್ಯ ಕೇಂದ್ರಕ್ಕೆ ಹೋಗಬೇಕಾದರೆ ಈ ರಸ್ತೆಯಲ್ಲಿಯೇ ತೆರಳಬೇಕು. ಶಾಲಾ ವಿದ್ಯಾರ್ಥಿಗಳೂ ಇದರಲ್ಲಿ ಸಾಗುತ್ತಾರೆ.

ರಸ್ತೆ ಹದಗೆಟ್ಟಿದ್ದರಿಂದ ಬಿ.ಸಿ. ರೋಡ್‌ನಿಂದ ಕಕ್ಯಪದವುಗೆ ಸಾಗುತ್ತಿದ್ದ ಬಸ್‌ಗಳು ಈ ರಸ್ತೆಯನ್ನು ಬಿಟ್ಟು ಅಲ್ಲಿಪಾದೆಯಿಂದ ಕುಂಟಾಲಪಲ್ಕೆ ರಸ್ತೆಯಲ್ಲಿ ಸಾಗುತ್ತವೆ ಎನ್ನುತ್ತಾರೆ ಸ್ಥಳೀಯರು. ಆಟೋ ರಿಕ್ಷಾ ಗಳಂತೂ ಇಲ್ಲಿ ಸಂಚರಿಸುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಮತ್ತಷ್ಟು ಅನಾನುಕೂಲವಾಗಿದೆ. ಈಗಂತೂ ಚುನಾವಣೆ ಬಂದಿದೆ. ತಮ್ಮ ಬೇಡಿಕೆ ಯಾವಾಗ ಈಡೇರುವುದೆಂದು ಜನತೆ ಕಾಯುತ್ತಿದ್ದಾರೆ. ಸಂಬಂಧಿತರು ರಸ್ತೆ ಅಭಿವೃದ್ಧಿ ನಡೆಸುವಂತೆ ಜನತೆಯ ಆಗ್ರಹವಾಗಿದೆ.

ನಿರ್ಲಕ್ಷ್ಯಗೊಂಡ ಬಹುಪಯೋಗಿ ರಸ್ತೆ 
ಬಜದಲ್ಲಿರುವ ಸರಪಾಡಿ ಗ್ರಾ.ಪಂ. ಕಚೇರಿಯ ಸನಿಹದಿಂದ ಈ ರಸ್ತೆ ಆರಂಭಗೊಳ್ಳುತ್ತದೆ. ಸುಮಾರು ಒಂದೂವರೆ ಕಿ.ಮೀ. ದೂರದ ಈ ರಸ್ತೆ ಬಹುಪಯೋಗಿ ರಸ್ತೆಯಾಗಿದೆ. ಸರಪಾಡಿ ಗ್ರಾ.ಪಂ. ಸರಪಾಡಿ ಮತ್ತು ದೇವಸ್ಯಮೂಡೂರು ಗ್ರಾಮಗಳನ್ನೊಳಗೊಂಡಿದ್ದು, ಬಜದಲ್ಲಿ ಗ್ರಾ.ಪಂ. ಕಚೇರಿ ಇದೆ. ದೇವಶ್ಯಮೂಡೂರು ಗ್ರಾಮಕ್ಕೆ ಸಂಬಂಧಿಸಿ ದೈವಸ್ಥಳ, ಮುಲ್ಕಾಜೆಮಾಡ, ಕುಂಟಾಲಪಲ್ಕೆ ಕಡೆಯಿಂದ ಗ್ರಾ.ಪಂ. ಕಚೇರಿ ಸಂಪರ್ಕಕ್ಕೆ ಈ ರಸ್ತೆಯನ್ನೇ ಅವಲಂಬಿಸಬೇಕಾಗಿದೆ. ಈ ಭಾಗದದವರಲ್ಲದೆ ಕಕ್ಯಪದವು, ಕಟ್ಟದಪಡ್ಪು ಕಡೆಯಿಂದ ಸರಪಾಡಿಗೆ ಸಂಪರ್ಕರಸ್ತೆಯೂ ಇದಾಗಿದೆ.

ಮನವಿಗೆ ಸ್ಪಂದನೆ ಇಲ್ಲ
ಈ ರಸ್ತೆ ಅಭಿವೃದ್ಧಿಗೊಳಿಸುವಂತೆ ಹಲವಾರು ಬಾರಿ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ರಸ್ತೆ ಅಭಿವೃದ್ಧಿಗೊಂಡಲ್ಲಿ ಸಾರ್ವಜನಿಕರಿಗೆ ಬಹಳ ಸಹಕಾರಿಯಾಗುತ್ತದೆ. 
ಲೀಲಾವತಿ, ಅಧ್ಯಕ್ಷರು
   ಸರಪಾಡಿ ಗ್ರಾ.ಪಂ

 ರತ್ನದೇವ್‌ ಪುಂಜಾಲಕಟ್ಟೆ 

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.