ಬಜಕೂಡ್ಲು: ಜಲಸಂರಕ್ಷಣಾ ಅಭಿಯಾನ ಆರಂಭ


Team Udayavani, Jul 4, 2019, 5:32 AM IST

bajakoodlu

ಪೆರ್ಲ: ಕುಡಿಯುವ ನೀರಿಗಾಗಿ ಜನತೆ ಪಡುತ್ತಿರುವ ಪರದಾಟ ಭವಿಷ್ಯದಲ್ಲಿ ಕಡಿಮೆ ಮಾಡುವ ನಿಟ್ಟಿನಲ್ಲಿ ಜಲಸಂರಕ್ಷಣೆ-ಜನಜಾಗೃತಿ ಕಾರ್ಯಕ್ರಮದಲ್ಲಿ ಜನರನ್ನು ಒಟ್ಟು ಸೇರಿಸುವ ನಿಟ್ಟಿನಲ್ಲಿ ಪೆರ್ಲ ಸನಿಹದ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಆರ್ಟ್ಸ್ ಮತ್ತು ನ್ಪೋರ್ಟ್ಸ್ ಕ್ಲಬ್‌ ಈ ಒಂದು ಜಲ ಅಭಿಯಾನ ಆರಂಭಿಸಿದೆ.

ಮಳೆನೀರು ಸಂರಕ್ಷಣೆ, ನೀರಿಂಗಿಸುವಿಕೆ, ಹೆಚ್ಚು ಸಸಿ ಗಳನ್ನು ನೆಡಲು ಜನರನ್ನು ಪ್ರಚೋದಿಸುವುದು ಇವೇ ಮುಂತಾದ ಕಾರ್ಯಗಳನ್ನು ಆಂದೋಲನದಲ್ಲಿ ಅಳವಡಿಸಿ ಕೊಳ್ಳಲಾಗಿದೆ. ಎಣ್ಮಕಜೆ ಪಂಚಾಯತ್‌ ವ್ಯಾಪ್ತಿಯಲ್ಲಿ ಹೆಚ್ಚು ಜಲಸಮೃದ್ಧಿಗೆ ಹೆಸರಾಗಿರುವ ಪಡ್ರೆ ಬಯಲು ಮತ್ತು ಬಜಕೂಡ್ಲು ಬಯಲಿನಲ್ಲಿ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಾಡಿರುವುದು ಇಲ್ಲಿನ ಜನರನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಈಗಾಗಲೇ ಪಡ್ರೆ ಪ್ರದೇಶದಲ್ಲಿ ಜಲತಜ್ಞ, ಅಂಕಣಕಾರ ಶ್ರೀಪಡ್ರೆ ಅವರ ಮಾರ್ಗದರ್ಶನದಲ್ಲಿ ನೂರಾರು ಮಂದಿ ಯುವಕರು ಜಲಸಂರಕ್ಷಣೆ ಬಗ್ಗೆ ಜನರನ್ನು ಜಾಗೃತಿಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಬನ್ನಿ ನೀರಿಂಗಿಸೋಣ, ಭವಿಷ್ಯದ ಜೀವನ ಸುಂದರವಾಗಿಸೋಣ’

ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಆರ್ಟ್ಸ್ ಮತ್ತು ನ್ಪೋರ್ಟ್ಸ್ ಕ್ಲಬ್‌ ವತಿಯಿಂದ ರವಿವಾರ ಈ ರೀತಿಯ ಅಭಿ ಯಾನ ಆರಂಭಿಸಲಾಗಿದೆ. ಕ್ಲಬ್‌ ಅಧ್ಯಕ್ಷ ದಾಮೋದರ್‌ ಬಜಕೂಡ್ಲು ಅವರ ನೇತೃತ್ವ ದಲ್ಲಿ ‘ಬನ್ನಿ ನೀರಿಂಗಿಸೋಣ, ಭವಿಷ್ಯದ ಜೀವನ ಸುಂದರವಾಗಿಸೋಣ’ ಎಂಬ ಘೋಷಣೆಯೊಂದಿಗೆ ಮನೆ ಮನೆಗೆ ತೆರಳಿ ಜಲಸಂರಕ್ಷಣಾ ಕಾರ್ಯದಲ್ಲಿ ಕೈಜೋಡಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ವರ್ಷ ಪೂರ್ತಿ ಹರಿಯುತ್ತಿದ್ದ ಬಜಕೂಡ್ಲು ತೋಡು ಕಳೆದ ಕೆಲವು ವರ್ಷಗಳಿಂದ ಫೆಬ್ರವರಿ ತಿಂಗಳಲ್ಲೇ ಬತ್ತಿ ಬರಡಾಗುತ್ತಿರುವ ಬಗ್ಗೆ ಚಿಂತನೆ ನಡೆಸುವಂತೆ ಹಾಗೂ ಮನೆ ವಠಾರದಲ್ಲಿ ಬೀಳುವ ಮಳೆನೀರನ್ನು ಭೂಮಿಗೆ ಇಂಗಿಸುವ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು.

ಕ್ಲಬ್ಬಿನ ಯೋಜನೆ : ಜಲ ಸಂರಕ್ಷಣಾ ಕಾರ್ಯದಲ್ಲಿ ಊರಿನ ಜನರನ್ನು ತೊಡಗಿಸಿಕೊಳ್ಳಲು ಕ್ಲಬ್‌ ಅಭಿಯಾನ ಹಮ್ಮಿಕೊಂಡಿದೆ. ಮಳೆ ನೀರನ್ನು ಆಯಾ ಪ್ರದೇಶದಲ್ಲಿ ಭೂಮಿಗೆ ಇಂಗುವಂತೆ ಮಾಡಲು ಇಂಗುಗುಂಡಿಗಳ ನಿರ್ಮಾಣ, ಪಾಳುಬಾವಿ, ಉಪಯೋಗಶೂನ್ಯ ಕೊಳವೆಬಾವಿಗಳಿಗೆ ಜಲ ಮರುಪೂರಣ, ವ್ಯಾಪಕ ಸಸಿ ನೆಡುವಿಕೆ ಜತೆಗೆ ತಜ್ಞರಿಂದ ಮಾಹಿತಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ಲಬ್‌ ಯೋಜನೆಯಿರಿಸಿಕೊಂಡಿದೆ.

ಜಲಸಂರಕ್ಷಣಾ ಜಾಗೃತಿ ಕಾರ್ಯದಲ್ಲಿ ಕೈ ಜೋಡಿಸುವಂತೆ ನಾಗರಿಕರಲ್ಲಿ ಕ್ಲಬ್‌ ಸದಸ್ಯರು ಮನವಿ ಮಾಡಿಕೊಂಡರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.