ಪ್ರಾಮಾಣಿಕತೆ ಮೆರದು 13 ಸಾವಿರ ಹಣವಿದ್ದ ಪರ್ಸ್ ಮರಳಿಸಿದ ಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನ
Team Udayavani, Feb 18, 2020, 11:04 AM IST
ಬಜಪೆ: ಇಲ್ಲಿನ ಶಾಲೆಯ ಮಕ್ಕಳಿಬ್ಬರು ತಮಗೆ ದಾರಿಯಲ್ಲಿ ದೊರೆತ 13 ಸಾವಿರ ಹಣ ಮತ್ತು ದಾಖಲೆಗಳನ್ನು ಹೊಂದಿದ್ದ ಪರ್ಸೊಂದನ್ನು ವಾರೀಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಜಪೆಯ ಪಾಪ್ಯುಲರ್ ಶಾಲೆಯ ವಿದ್ಯಾರ್ಥಿಗಳಾದ ಎಂಟನೇ ತರಗತಿ ವಿದ್ಯಾರ್ಥಿ ನಿಶಾಂತ್ ಶೆಟ್ಟಿ ಮತ್ತು ಆರನೇ ತರಗತಿ ವಿದ್ಯಾರ್ಥಿ ಚೇತನ್ ಬಿ ಅಮೀನ್ ತಮಗೆ ಸಿಕ್ಕಿದ ಹಣವನ್ನು ಸರಿಯಾದ ವಾರೀಸುದಾರರಿಗೆ ತಲುಪಿಸಿದವರು.
ಇವರಿಬ್ಬರಿಗೆ ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಪರ್ಸ್ ಸಿಕ್ಕಿತ್ತು. ಪರಿಶೀಲಿಸಿದಾಗ ಅದರಲ್ಲಿ 13 ಸಾವಿರ ಹಣ ಮತ್ತು ಅಮೂಲ್ಯ ದಾಖಲೆ ಪತ್ರಗಳಿದ್ದವು. ವಿದ್ಯಾರ್ಥಿಗಳು ಶಾಲಾ ಮುಖ್ಯ ಶಿಕ್ಷಕರ ಮುಖೇನ ಆ ಪರ್ಸನ್ನು ವಾರೀಸುದಾರರಾದ ಮೊಹಮ್ಮದ್ ರವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಈ ನಿಟ್ಟಿನಲ್ಲಿ ಶಾಲೆಯ ಪ್ರಾರ್ಥನಾ ಸಮಯದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸಿರಾಜ್ ಹುಸೇನ್ ರ ನೇತೃತ್ವದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪರ್ಸಿನ ವಾರೀಸುದಾರರಾದ ಮೊಹಮ್ಮದ್, ಊರಿನ ಗಣ್ಯರಾದ ಅಶ್ರಫ್ ಮದನಿ, ಬಿ.ಎಂ. ಮುಸ್ತಫ, ಶಾಲಾ ಮುಖ್ಯೋಪಧ್ಯಾಯಿನಿ ಸಹನಾ, ಶಾಲಾ ಶಿಕ್ಷಕಿಯರು ಮತ್ತು ಸಿಬಂದಿ ವರ್ಗದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ