ಬಜಪೆ: ಸಂಜೀವಿನಿ ಕಟ್ಟಡಕ್ಕೆ ಶಂಕುಸ್ಥಾಪನೆ
Team Udayavani, Dec 15, 2017, 12:42 PM IST
ಬಜಪೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಯೋಜನೆಯಡಿಯಲ್ಲಿ 2017-18ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 13.27 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಬಜಪೆ ಗ್ರಾಮ ಪಂಚಾಯತ್ ಸಮೀಪ ನಿರ್ಮಾಣವಾಗುವ ಸಂಜೀವಿನಿ ಕಟ್ಟಡಕ್ಕೆ ಶಾಸಕ ಕೆ. ಅಭಯಚಂದ್ರ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಮಂಗಳೂರು ತಾಲೂಕು ವ್ಯಾಪ್ತಿಯ 10 ಗ್ರಾಮ ಪಂಚಾಯತ್ ಗೆ ಈ ಯೋಜನೆಯಡಿಯಲ್ಲಿ ಅವಕಾಶ ಬಂದಿದ್ದು, ಅದರಲ್ಲಿ ಈಗಾಗಲೇ 5 ಗ್ರಾಮ ಪಂಚಾಯತ್ಗಳು ಕಾಮಗಾರಿಯನ್ನು ಕೈಗಿತ್ತಿಕೊಂಡಿದೆ. ಈ ಕಟ್ಟಡವು ಸ್ತ್ರೀ ಶಕ್ತಿ ಗುಂಪುಗಳಿಗೆ ಸಭೆ, ಉತ್ಪನ್ನ ಮಾರಾಟ, ಪಂಚಾಯತ್ ಕಚೇರಿ ಮತ್ತು ಗೋದಾಮಿಗೆ ಉಪಯೋಗವಾಗಲಿದೆ.
ಬಜಪೆ ಗ್ರಾ.ಪಂ. ಅಧ್ಯಕ್ಷೆ ರೋಜಿ ಮಥಾಯಸ್, ಕರಾವಳಿ ಪ್ರಾಧಿಕಾರಿ ಸದಸ್ಯ ಸಾಹುಲ್ ಹಮೀದ್, ಗ್ರಾ.ಪಂ. ಉಪಾಧ್ಯಕ್ಷ ಮಹಮದ್ ಶರೀಫ್, ಸದಸ್ಯರಾದ ಸುರೇಂದ್ರ ಪೆರ್ಗಡೆ, ನಝೀರ್, ಮಾಜಿ ಸದಸ್ಯ ಮಹಮ್ಮದ್ ಅಶ್ರಫ್, ಮಹಮದ್ ಹನೀಫ್, ಮಹಮದ್ ಸಿದ್ದಿಕ್ ಉಪಸ್ಥಿತರಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ