ಬಜಪೆ ಗ್ರಾ.ಪಂ. ಕಟ್ಟಡ : ಸಾಮಾನ್ಯ ಸೇವಾ ಕೇಂದ್ರ ಆರಂಭ


Team Udayavani, Jan 13, 2021, 3:20 AM IST

ಬಜಪೆ ಗ್ರಾ.ಪಂ. ಕಟ್ಟಡ : ಸಾಮಾನ್ಯ ಸೇವಾ ಕೇಂದ್ರ ಆರಂಭ

ಬಜಪೆ: ಬಜಪೆ ಪಟ್ಟಣ ಪಂಚಾಯತ್‌ ಘೋಷಣೆ ಪ್ರಕ್ರಿಯೆ ಜಾರಿಯಲ್ಲಿದ್ದು ಇದೀಗ ಪರಿಸರದ ಜನತೆಗೆ ಮತ್ತೂಂದು ಸುದ್ದಿ ಸಂತಸ ತಂದಿದೆ. ಬಹುಬೇಡಿಕೆಯ ಸಾಮಾನ್ಯ ಸೇವಾ ಕೇಂದ್ರವು ಬಜಪೆ ಗ್ರಾ.ಪಂ. ಕಟ್ಟಡದಲ್ಲಿ ಜ. 15ರಂದು ಶಾಸಕ ಉಮಾನಾಥ ಕೋಟ್ಯಾನ್‌ ಅವರಿಂದ ಉದ್ಘಾಟನೆಗೊಳ್ಳಲಿದೆ. ಇದರಿಂದ ಸ್ಥಳೀಯರಿಗೆ ಅಧಾರ್‌ ನೋಂದಣಿ ಮತ್ತು ತಿದ್ದುಪಡಿಗೆ ಅನುಕೂಲವಾಗಲಿದೆ. ನೋಂದಣಿಗಾಗಿ ಬೇರಡೆ ಅಲೆದಾಡಬೇಕಿದ್ದ ಸಮಸ್ಯೆಗೆ ಪರಿಹಾರ ದೊರೆಯಲಿದೆ.

ಈ ಸಂದರ್ಭ ಪಂಚಾಯತ್‌ ಆಡಳಿತಾಧಿಕಾರಿ ನಾಗರಾಜ್‌ ಎನ್‌.ಬಿ ಹಾಗೂ ಪಿಡಿಒ ಸಾಯೀಶ್‌ ಚೌಟ ಉಪಸ್ಥಿತರಿರಲಿದ್ದಾರೆ. ಬ್ಯಾಂಕ್‌ ಮತ್ತು ಅಂಚೆ ಇಲಾಖೆಗಳಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಬಹಳ ಕಡಿಮೆ ಸಂಖ್ಯೆಯಲ್ಲಿ ನಡೆಯುವ ಕಾರಣ ರಾಜ್ಯದಲ್ಲಿ ಒಟ್ಟು 150 ಗ್ರಾ.ಪಂ.ಗಳಲ್ಲಿ ಪ್ರಾಯೋಗಿಕವಾಗಿ ಸಿಎಸ್‌ಸಿ ಸಹಯೋಗದೊಂದಿಗೆ ಆಧಾರ್‌ ನೋಂದಣಿ ಮತ್ತು ತಿದ್ದುಪಡಿಗೆ ಆಯ್ಕೆ ಮಾಡಲಾಗಿತ್ತು. ಜಿಲ್ಲೆಗೆ ತಲಾ 5 ಗ್ರಾ.ಪಂ.ಗಳಲ್ಲಿ ಅನುಷ್ಠಾನಕ್ಕೆ ಇಲಾಖೆ ನಿರ್ಧರಿಸಿತ್ತು. ಅದರಂತೆ ದ.ಕ. ಜಿಲ್ಲೆಯಲ್ಲಿ ಮಂಗಳೂರು ತಾಲೂಕಿನ ಬಜಪೆ, ಬಂಟ್ವಾಳ ತಾಲೂಕಿನ ಕೊಲಾ°ಡು, ಬೆಳ್ತಂಗಡಿ ತಾಲೂಕಿನ ಉಜಿರೆ, ಸುಳ್ಯ ತಾಲೂಕಿನ ಅಲೆಟ್ಟಿ , ಪುತ್ತೂರು ತಾಲೂಕಿನ ಒಳಮೊಗ್ರು ಪಂಚಾಯತ್‌ಗಳನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲೆಯ ಎರಡನೇ ಪಂಚಾಯತ್‌ :

ಈಗಾಗಲೇ ಪುತ್ತೂರಿನ ಒಳಮೊಗ್ರು ಪಂಚಾಯತ್‌ನಲ್ಲಿ ಸಾಮಾನ್ಯ ಸೇವಾ ಕೇಂದ್ರ ಕಾರ್ಯಾರಂಭಿಸಿದ್ದು ಇದೀಗ ಬಜಪೆ ಗ್ರಾ.ಪಂ.ನಲ್ಲಿ ಶುಕ್ರವಾರ ಕಾರ್ಯಾರಂಭಗೊಳ್ಳಲಿದೆ. ಇದು ಜಿಲ್ಲೆಯ ಎರಡನೇ ಗ್ರಾ.ಪಂ. ಹಾಗೂ ತಾಲೂಕಿನ ಪ್ರಥಮ ಗ್ರಾಮ ಪಂಚಾಯತ್‌ ಇದಾಗಲಿದೆ.

ಬೆಳಗ್ಗೆ 10ರಿಂದ ಸಂಜೆ 5.30ರ ವರೆಗೆ ಈ ಸೇವೆ ಲಭ್ಯವಾಗಿದೆ. ಇಲ್ಲಿ ಹೊಸ ಆಧಾರ್‌ ಮತ್ತು ತಿದ್ದು ಪಡಿ, ಬಯೋಮಿಟ್ರಿಕ್‌ ಅಪ್‌ಡೆಟ್‌, ರೆಟಿನಾ, 5ರಿಂದ 15ವರ್ಷದವರ ತಿದ್ದು ಪಡಿ ಮಾಡಬಹುದಾಗಿದೆ. ಖಾಸಗಿ ಸೇವಾ ಕೇಂದ್ರದಲ್ಲಿ ವಿಳಾಸ, ಜನನ ದಿನಾಂಕ ತಿದ್ದುಪಡಿ ಮಾತ್ರ ಮಾಡಬಹುದಾಗಿತ್ತು.

ಪ್ರತಿ ಆಧಾರ್‌ ನೋಂದಣಿ ಮತ್ತು ಆಧಾರ್‌ ತಿದ್ದು ಪಡಿಗೆ ಸಂಗ್ರಹವಾಗುವ 100 ರೂ. ಗಳಲ್ಲಿ ಸಿಎಸ್‌ಸಿ/ಎಸ್‌ಪಿವಿ ಅವರಿಗೆ 85 ರೂ. ಗ್ರಾ.ಪಂ./ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆಗೆ 15 ರೂ. ನೀಡಬೇಕಾಗುತ್ತದೆ.

ಈಗಾಗಲೇ ಬಜಪೆ ಪಂಚಾಯತ್‌ ಕಟ್ಟಡದಲ್ಲಿ ಸೇವಾ ಕೇಂದ್ರಕ್ಕೆ ಅವಶ್ಯಕತೆ ಇರುವ ಕಟ್ಟಡ, ವಿದ್ಯುತ್‌ ಸಂಪರ್ಕ, ಇಂಟರ್‌ನೆಟ್‌, ಬಯೋಮೆಟ್ರಿಕ್‌, ರೆಟಿನಾ ಕೆಮರಾ ಮುಂತಾದ ಮೂಲಭೂತ ಸೌಕರ್ಯವನ್ನು ಅಳವಡಿಸಲಾಗಿದೆ. ಜತೆಗೆ ಅಂಗವಿಕಲರಿಗೆ ಆವಶ್ಯಕತೆ ಇರುವ ವೀಲ್‌ಚೇರ್‌, ವಯಸ್ಕರಿಗೆ ಬೇಕಾಗುವ ಹ್ಯಾಂಡ್‌ ವಾಕ್‌ ಸಲಕರಣೆಯನ್ನು ಕೂಡ ಪಂಚಾಯತ್‌ ವ್ಯವಸ್ಥೆ ಮಾಡಿದೆ.  ಸಾಯೀಶ್‌ ಚೌಟ,  ಪಿಡಿಒ, ಬಜಪೆ ಗ್ರಾ.ಪಂ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.