ಕರಾವಳಿಯಾದ್ಯಂತ ಸಂಭ್ರಮದ ಬಕ್ರೀದ್‌ ಆಚರಣೆ


Team Udayavani, Aug 23, 2018, 3:25 AM IST

bakrid-udupi-22-8.jpg

ಮಂಗಳೂರು/ಉಡುಪಿ/ಕಾಸರಗೋಡು: ಪ್ರವಾದಿ ಇಬ್ರಾಹಿಂ ಅವರ ತ್ಯಾಗ, ಬಲಿದಾನದ ದ್ಯೋತಕವಾಗಿ ಬಕ್ರೀದ್‌ (ಈದುಲ್‌ ಅಝ್ಹಾ) ಹಬ್ಬವನ್ನು ಸಂಭ್ರಮ, ಸಡಗರದಿಂದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಬುಧವಾರ ಆಚರಿಸಲಾಯಿತು. ತ್ರಿವಳಿ ಜಿಲ್ಲೆಗಳ ಎಲ್ಲ ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಜ್‌, ಧರ್ಮ ಗುರುಗಳಿಂದ ಈದ್‌ ಸಂದೇಶ ಮತ್ತು ಪ್ರವಚನ, ಪರಸ್ಪರ ಈದ್‌ ಶುಭಾಶಯ ವಿನಿಮಯ ನಡೆಯಿತು.

ಮಂಗಳೂರಿನ ಬಾವುಟಗುಡ್ಡೆಯ ಈದ್ಗಾದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಹಬ್ಬದ ವಿಶೇಷ ಪ್ರಾರ್ಥನೆ ಹಾಗೂ ಖುತ್ಬಾ ಪ್ರವಚನ ನೀಡಿ ‘ಏಕದೇವ ವಿಶ್ವಾಸದ ಸಮಾಜ ಸ್ಥಾಪನೆಗಾಗಿ ಪ್ರವಾದಿ ಇಬ್ರಾಹಿಂ ಅವರು ಇಡೀ ಜೀವನವನ್ನೇ ಮುಡಿಪಾಗಿರಿಸಿ, ಹಲವಾರು ಸವಾಲು, ಸ್ವಪರೀಕ್ಷೆಗಳನ್ನು ಎದುರಿಸಿ, ತ್ಯಾಗ, ಬಲಿದಾನ ಮಾಡಿದ್ದರು. ಅವರ ಜೀವನ ಎಲ್ಲರಿಗೂ ಮಾದರಿಯಾಗಬೇಕು’ ಎಂದು ಹೇಳಿದರು.

ಝೀನತ್‌ ಬಕ್ಷ್ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ  ವೈ. ಅಬ್ದುಲ್ಲಾ ಕುಂಞಿ ಅವರು ಈದ್‌ ಸಂದೇಶದಲ್ಲಿ, ತ್ಯಾಗ, ಬಲಿದಾನ ಮತ್ತು ವಾಗ್ಧಾನದ ಮನೋಭಾವ ಗಟ್ಟಿಗೊಳಿಸಲು ನಮಗೆ ಬಕ್ರೀದ್‌ ಪ್ರೇರಣೆ ನೀಡುತ್ತದೆ. ನೆರೆಯ ಕೊಡಗು ಮತ್ತು ಕೇರಳದ ಜನರು ಸಂಕಷ್ಟದಲ್ಲಿದ್ದು, ಅವರಿಗೆ ನೆರವಾಗುವ ಮೂಲಕ ನಿಜಾರ್ಥದಲ್ಲಿ ಹಬ್ಬ ಆಚರಿಸಬೇಕಾದುದು ನಮ್ಮ ಕರ್ತವ್ಯ ಎಂದರು.

ನಗರಾಡಳಿತ ಮತ್ತು ವಸತಿ ಸಚಿವ ಯು.ಟಿ. ಖಾದರ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಹಾನಗರ ಪಾಲಿಕೆಯ ಆಯುಕ್ತ ಮೊಹಮ್ಮದ್‌ ನಝೀರ್‌, ಡಿಸಿಪಿ ಹನುಮಂತರಾಯ ಮೊದಲಾದವರು ಶುಭ ಹಾರೈಸಿದರು. ಕುದ್ರೋಳಿ ಜಾಮಿಯಾ ಮಸೀದಿಯಲ್ಲಿ ಧರ್ಮಗುರು ಮುಫ್ತಿ ಮನ್ನಾನ್‌ ಸಾಹೇಬ್‌ ನೇತೃತ್ವದಲ್ಲಿ ನಮಾಜ್‌ ಮತ್ತು ಪ್ರವಚನ ನಡೆಯಿತು.

ಉಡುಪಿ: ಈದ್‌ ಸಂದೇಶ

ಉಡುಪಿಯ ಜಾಮಿಯಾ ಮಸೀದಿ ಸಹಿತ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ನಮಾಜ್‌ ನಡೆದ ಬಳಿಕ ಈದ್‌ ಸಂದೇಶವನ್ನು ಸಾರಲಾಯಿತು. ಮೂಳೂರು ಜಿಲ್ಲಾ ಮಸೀದಿಗೆ ಖಾಝಿ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್‌ ಅವರು ಮಂಗಳವಾರ ಸಂಜೆ ಭೇಟಿ ನೀಡಿದರು.

ಮುಸ್ಲಿಮರು ಬೆಳಗ್ಗೆ ಸಿಹಿ ತಿಂಡಿ ಸ್ವೀಕರಿಸಿ, ಹೊಸ ಉಡುಪು ಧರಿಸಿ ವಿಶೇಷ ಪ್ರಾರ್ಥನೆಗಾಗಿ ಮಸೀದಿ ಮತ್ತು ಈದ್ಗಾಕ್ಕೆ ತೆರಳಿದರು. ಧರ್ಮಗುರುಗಳ ಪ್ರಾರ್ಥನೆ, ಪ್ರವಚನ ನಡೆದ ಬಳಿಕ ಎಲ್ಲರೂ ಪರಸ್ಪರ ಹಸ್ತ ಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ಹಂಚಿಕೊಂಡರು. ಕೆಲವರು ಬಡವರಿಗೆ ದಾನ, ಧರ್ಮ ಮಾಡಿ ನೆರವಾದರು. ಮನೆಯವರು, ನೆರೆಹೊರೆಯವರು, ಗೆಳೆಯರು, ಸಂಬಂಧಿಕರು ಸೇರಿದಂತೆ ಪ್ರತಿಯೊಬ್ಬರೂ ಹಬ್ಬದ ಶುಭಾಶಯ ಹೇಳಿದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.