ದಕ್ಷಿಣ ಕನ್ನಡದ ರಾಕೇಶ್ ಕೃಷ್ಣ ಸಹಿತ ಇಬ್ಬರಿಗೆ ಬಾಲ ಪುರಸ್ಕಾರ
Team Udayavani, Jan 25, 2021, 7:00 AM IST
ಹೊಸದಿಲ್ಲಿ: ದಕ್ಷಿಣ ಕನ್ನಡದ ರಾಕೇಶ್ಕೃಷ್ಣ ಕೆ. ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಅವರಿಗೆ ಕೇಂದ್ರ ಸರಕಾರದ ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಲಭಿಸಿದೆ.
ಒಟ್ಟು 32 ಮಕ್ಕಳು ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ. ನಾವೀನ್ಯತೆ ವಿಭಾಗದಲ್ಲಿ 9, ಕಲೆ ಮತ್ತು ಸಂಸ್ಕೃತಿಯಲ್ಲಿ 7, ಶೈಕ್ಷಣಿಕ ಸಾಧನೆ ಮತ್ತು ಕ್ರೀಡಾ ವಿಭಾಗಗಳಲ್ಲಿ ತಲಾ 5, ಶೌರ್ಯ ವಿಭಾಗದಲ್ಲಿ 3 ಮತ್ತು ಸಾಮಾಜಿಕ ಸೇವೆ ವಿಭಾಗದಲ್ಲಿ ಒಬ್ಬರಿಗೆ ಪ್ರಶಸ್ತಿ ಲಭಿಸಿದೆ. ಈ ಮಕ್ಕಳ ಜತೆಗೆ ಪ್ರಧಾನಿ ಮೋದಿ ಸೋಮವಾರ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.