ಬಲ್ಮಠ: ಪಾಠ ನಡೆಯುತ್ತಿರುವಾಗಲೇ ಶಾಲೆ ಮೇಲೆ ಬಿದ್ದ  ಮರ


Team Udayavani, Aug 17, 2018, 10:23 AM IST

17-agust-2.jpg

ಮಹಾನಗರ: ನಗರದ ಬಲ್ಮಠದಲ್ಲಿರುವ ಸರಕಾರಿ ಮಹಿಳಾ ತರಬೇತಿ ಶಿಕ್ಷಕರ ಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬೆಳಗ್ಗೆ ಅಧ್ಯಾಪಕರು ಪಾಠ ಮಾಡುತ್ತಿರುವ ವೇಳೆಯೇ ಕಾಂಪೌಂಡ್‌ ನಲ್ಲಿದ್ದ ಮರವೊಂದು ಶಾಲೆಯ ಮೇಲ್ಫಾವಣಿ ಮೇಲೆ ಉರುಳಿ ಬಿದ್ದಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ.

ಬೆಳಗ್ಗೆ ಸುಮಾರು 10.30ರ ವೇಳೆಗೆ ನಗರದಲ್ಲಿ ಬೀಸಿದ ಜೋರಾದ ಗಾಳಿ- ಮಳೆಗೆ ಕಾಂಪೌಂಡ್‌ ಒಳಗೆಯೇ ಇದ್ದ ಮರ ಮುರಿದು ಶಾಲೆಯ ಛಾವಣಿ ಮೇಲೆ ಬಿದ್ದು ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ತರಗತಿ ಒಳಗೆ ಶಿಕ್ಷಕರು ಪಾಠ ಬೋಧಿಸುತ್ತಿದ್ದರೆ, ಸುಮಾರು 28 ಮಂದಿ ವಿದ್ಯಾರ್ಥಿಗಳು ಕೇಳುತ್ತಿದ್ದರು. ಮರ ಬಿದ್ದ ಶಬ್ದಕ್ಕೆ ಅವರು ಗಾಬರಿಗೊಂಡರು.

ಅಪಾಯದಿಂದ ಪಾರು
ಮರ ಬಿದ್ದ ಪರಿಣಾಮವಾಗಿ ಶಾಲೆಯ ಮೇಲ್ಫಾವಣಿಯ ಕೆಲವು ಹೆಂಚುಗಳು ಸಣ್ಣ ಪ್ರಮಾಣದಲ್ಲಿ ಪುಡಿಯಾಗಿವೆ. ಒಂದು ವೇಳೆ ಮರ ಭಾರೀ ರಭಸದಿಂದ ಉರುಳಿ ಬಿದ್ದಿದ್ದರೆ, ಮೇಲ್ಫಾವಣಿ ಕುಸಿದು ಬಿದ್ದು, ತರಗತಿಯಲ್ಲಿ ಕುಳಿತ್ತಿದ್ದ ವಿದ್ಯಾರ್ಥಿಗಳ ಮೇಲೂ ಹೆಂಚಿನ ಚೂರು ಬಂದು ಬೀಳುವ ಅಪಾಯವಿತ್ತು. ಆದರೆ, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ನಿಧಾನವಾಗಿ ಮರ ಬಿದ್ದ ಕಾರಣ ಹೆಂಚಿಗಷ್ಟೇ ಹಾನಿಯಾಗಿದೆ.

ಮರ ಬಿದ್ದ ಕೂಡಲೇ ಯಾವುದೇ ಅನಾಹುತ ಸಂಭವಿಸಬಾರದು ಎಂಬ ಕಾರಣಕ್ಕೆ ಶಿಕ್ಷಕರು 28 ವಿದ್ಯಾರ್ಥಿಗಳನ್ನು ಹತ್ತಿರದ ಹೈಸ್ಕೂಲ್‌ ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಅಲ್ಲದೆ, ಮಧ್ಯಾಹ್ನದ ವೇಳೆ ಹೆತ್ತವರ ಜತೆ ಮನೆಗೆ ಕಳುಹಿಸಿದ್ದಾರೆ. ಇದಾದ ಬಳಿಕ ಹತ್ತಿರದ ಪೊಲೀಸ್‌ ಸ್ಟೇಶನ್‌ ಮತ್ತು ಮಹಾನಗರ ಪಾಲಿಕೆ ಹೆಲ್ಪ್ಲೈನ್‌ ನಂಬ ರ್‌ ಗೆ ಕರೆಮಾಡಿ ವಿಷಯ ತಿಳಿದ್ದಾರೆ. ಪಾಲಿಕೆ ಅಧಿಕಾರಿಗಳು ಯಂತ್ರದ ಮೂಲಕ ಮರ ತೆರವುಗೊಳಿಸಿದರು. ಪರಿ ಣಾಮ ಬಂಟ್ಸ್‌ ಹಾಸ್ಟೆಲ್‌ನಿಂದ ಜ್ಯೋತಿ ಸರ್ಕಲ್‌ ಮೂಲಕ ತೆರಳುವ ವಾಹನಗಳಲ್ಲಿ ಪರ್ಯಾಯವಾಗಿ ಸಂಚಾರ ಬದಲಾವಣೆ ಮಾಡಲಾಗಿತ್ತು.

ಸ್ಥಳಕ್ಕೆ ಮೇಯರ್‌ ಭೇಟಿ
ಮರ ಬಿದ್ದಂತಹ ಪ್ರದೇಶಕ್ಕೆ ಮೇಯರ್‌ ಭಾಸ್ಕರ್‌ ಕೆ., ಪಾಲಿಕೆ ಮುಖ್ಯಸಚೇತಕ ಶಶಿಧರ್‌ ಹೆಗ್ಡೆ, ಸ್ಥಳೀಯ ಕಾರ್ಪೊರೇಟರ್‌ ವಿನಯರಾಜ್‌, ಸಂಚಾರಿ ಪೊಲೀಸ್‌ ಇಲಾಖೆ ಸಿಬಂದಿ, ಪಾಲಿಕೆ ಎಂಜಿನಿಯರ್‌ ಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮನವಿ ನೀಡಿದ್ದ‌ರೂ ಮರ ತೆರವುಗೊಳಿಸಲಿಲ್ಲ
ಜೋರಾಗಿ ಗಾಳಿ ಬಂದರೆ ಶಾಲೆಯ ಮೇಲ್ಫಾವಣಿ ಮೇಲೆ ಮರ ಬಿದ್ದು ಹಾನಿಯಾಗಬಹುದೆಂಬ ಆತಂಕದಲ್ಲಿ ಶಿಕ್ಷಕ ವರ್ಗದವರು ಇದ್ದರು. ಮುನ್ನೆಚ್ಚರಿಗೆ ಕ್ರಮವಾಗಿ ಮರವನ್ನು ತೆರವುಗೊಳಿಸುವಂತೆ ಶಾಲೆಯ ವತಿಯಿಂದ ಪಾಲಿಕೆಗೆ, ಶಾಸಕರಿಗೆ ಅನೇಕ ಬಾರಿ ಮನವಿ ಮಾಡಲಾಗಿತ್ತು. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಿಸದಿದ್ದ ಕಾರಣ ಈ ಅನಾಹುತ ಸಂಭವಿಸಿದೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.

ಪರಿಶೀಲನೆ ನಡೆಸಿದ್ದೇನೆ 
ಶಾಲೆಯ ಮೇಲೆ ಮರ ಬಿದ್ದ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇನೆ. ಅಲ್ಲೇ ಪಕ್ಕದಲ್ಲಿ ಮತ್ತೊಂದು ಮರದಿಂದಲೂ ಅಪಾಯವಿರುವುದು ಕಾಣಿಸಿದೆ. ಆ ಮರ ಕಡಿಯಲು ಈಗಾಗಲೇ ಅನುಮತಿ ಸಿಕ್ಕಿದೆ. ಆದಷ್ಟು ಬೇಗ ಅದನ್ನು ತೆರವುಗೊಳಿಸಲಾಗುವುದು.
 - ಭಾಸ್ಕರ್‌ ಕೆ., ಮೇಯರ್‌

ಸೋರುತಿದೆ ತರಗತಿಗಳು
ಮರ ಬಿದ್ದಂತಹ ರಭಸಕ್ಕೆ ಗೋಡೆ ಸಣ್ಣ ಪ್ರಮಾಣದಲ್ಲಿ ಬಿರುಕು ಬಿಟ್ಟಿದೆ. ಮಳೆ ನೀರು ತರಗತಿಯ ಒಳಗೆ ಬರಲಾರಂಭಿಸಿದೆ. ಇತ್ತೀಚೆಗೆಯಷ್ಟೇ ಶಾಲೆ ಸಿಕ್ಕಿದ ಸ್ವಲ್ಪ ಅನುದಾನದಲ್ಲಿ ತರಗತಿಗಳ ಮೊದಲ ಹಂತದ ಕಾಮಗಾರಿ ಮಾಡಲಾಗಿದೆ. ಇದಾದ ಕೆಲವೇ ಸಮಯದಲ್ಲಿ ಹೆಂಚು ಮತ್ತು ಗೋಡೆಗೆ ಹಾನಿಯಾಗಿದೆ ಎಂದು ಶಾಲೆಯ ಶಿಕ್ಷಕಿಯೊಬ್ಬರು ‘ಸುದಿನ’ಕ್ಕೆ ತಿಳಿಸಿದ್ದಾರೆ.

ಅದೃಷ್ಟವಶಾತ್‌ ಅನಾಹುತವಾಗಿಲ್ಲ
ಶಾಲೆಯಲ್ಲಿ ಶಿಕ್ಷಕರ ಕೊಠಡಿ ತೆರೆದಿತ್ತು ಎಂದು ಬಾಗಿಲು ಹಾಕಲು ತೆರಳಿದ್ದಾಗ ದೊಡ್ಡ ಶಬ್ದ ಕೇಳಿಸಿತು. ಮರ ಬಿದ್ದದ್ದು
ಕಂಡು ಗಾಬರಿಯಾದೆ. ಕೂಡಲೇ ಪೊಲೀಸ್‌ ಠಾಣೆ, ಪಾಲಿಕೆಗೆ ಕರೆ ಮಾಡಿ ವಿಚಾರ ತಿಳಿಸಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಲಿಲ್ಲ.
– ಸೀತಮ್ಮ ಜೆ., ಮುಖ್ಯ ಶಿಕ್ಷಕಿ

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.