ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಕರೆ ಮಾಡಿ ಸುಳ್ಯದ ವ್ಯಕ್ತಿಯೊಬ್ಬರಿಗೆ 40,998 ರೂ. ಪಂಗನಾಮ
Team Udayavani, Apr 21, 2021, 2:57 PM IST
ಸುಳ್ಯ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಓಟಿಪಿ ಪಡೆದು ವ್ಯಕ್ತಿಯೊಬ್ಬರಿಗೆ 40 ಸಾವಿರ ರೂ. ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಾಲ್ಸೂರಿನಲ್ಲಿ ನಡೆದಿದೆ.
ಸುಳ್ಯ ಕೆನರಾ ಬ್ಯಾಂಕಿನ ಮ್ಯಾನೇಜರ್ ಮಾತನಾಡುತ್ತಿದ್ದೇನೆ ಎಂದು ದೂರವಾಣಿ ಮುಖೇನ ಕರೆ ಮಾಡಿ ನಂಬಿಸಿ ನಿಮ್ಮ ದೂರವಾಣಿ ಸಂಖ್ಯೆಗೆ ಒಂದು ಓಟಿಪಿ ನಂಬರ್ ಬರಲಿದ್ದು ಅದನ್ನು ಕೂಡಲೇ ನನಗೆ ನೀಡಬೇಕೆಂದು ತಿಳಿಸಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ವಿಟ್ಲ ಪಟ್ಟಣ ಪಂಚಾಯತ್: ನೂತನ ಅಧ್ಯಕ್ಷರಾಗಿ ಚಂದ್ರಕಾಂತಿ ಶೆಟ್ಟಿ
ಇವರ ದೂರವಾಣಿ ಸಂಖ್ಯೆಗೆ ಓಟಿಪಿ ನಂಬರ್ ಬಂದಿದದ್ದು ಅದನ್ನು ಅವರು ಕರೆ ಮಾಡಿದ ವ್ಯಕ್ತಿಗೆ ನೀಡಿದ್ದಾರೆ. ಪ್ರಥಮ ಬಾರಿಗೆ 30000 ರೂಪಾಯಿ, ಎರಡನೆಯ ಬಾರಿಗೆ 9999 ರೂ, ಮೂರನೆಯ ಬಾರಿಗೆ 999 ರೂ ಸೇರಿದಂತೆ ಒಟ್ಟು 40,998 ರೂಪಾಯಿಯನ್ನು ಈ ವ್ಯಕ್ತಿ ಕಳೆದುಕೊಂಡಿದ್ದಾರೆ. ತಾನು ಮೋಸ ಹೋಗಿದ್ದೇನೆಂದು ಅರಿತ ಅವರು ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್