ಸ್ವಂತ ಮಕ್ಕಳನ್ನು ಕೆರೆಗೆ ತಳ್ಳಿದ್ದ ಬ್ಯಾಂಕ್‌ ಮ್ಯಾನೇಜರ್‌


Team Udayavani, Sep 23, 2017, 2:55 PM IST

23-Ptr-1.jpg

ಪುತ್ತೂರು : ಏಳು ವರ್ಷಗಳ ಹಿಂದೆ ಪಾಣಾಜೆ ಗ್ರಾಮದ ಅರ್ಧ ಮೂಲೆಯಲ್ಲಿ ತನ್ನಿಬ್ಬರು ಮಕ್ಕಳನ್ನು, ತುಮಕೂರಿನಲ್ಲಿ ನಾದಿನಿ, ಅತ್ತೆಯನ್ನು ಪುತ್ತೂರು ಮೂಲದ ಬ್ಯಾಂಕ್‌ ಮ್ಯಾನೇಜರ್‌ ಹತ್ಯೆ ಮಾಡಿದ ಪ್ರಕರಣ ಇಡೀ ಜಿಲ್ಲೆಯನ್ನೇ ತಲ್ಲಣಗೊಳಿಸಿತ್ತು. ಸ್ವಂತ ಮಕ್ಕಳನ್ನು ಕೊಂದ ಪ್ರಕರಣಕ್ಕೆ ಆರೋಪಿಗೆ ಪುತ್ತೂರು ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಪುತ್ತೂರಿನಲ್ಲಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಯಾದ ಬಳಿಕ ವಿಧಿಸಿದ ಪ್ರಥಮ ಮರಣದಂಡನೆ ಶಿಕ್ಷೆಯೂ ಇದಾಗಿತ್ತು. ಈ ತೀರ್ಪನ್ನು ಈಗ ಹೈಕೋರ್ಟ್‌ ಎತ್ತಿ ಹಿಡಿದಿದೆ.

ರಾಷ್ಟ್ರೀಕೃತ ಬ್ಯಾಂಕ್‌ ಒಂದರಲ್ಲಿ ತುಮಕೂರು ಜಿಲ್ಲೆಯ ಸೋಲಾಪುರ ಶಾಖೆಯಲ್ಲಿ ಮ್ಯಾನೇಜರ್‌ ಆಗಿದ್ದ ರಮೇಶ್‌ ನಾಯ್ಕ ತನ್ನ ಪತ್ನಿಯ ಸೋದರಿ ಸವಿತಾಳ ಮೇಲೆ ಕಣ್ಣಿಟ್ಟಿದ್ದ. ಆಕೆ ಪ್ರೇಮ ವಿವಾಹ ಮಾಡಿಕೊಳ್ಳಲು ಮುಂದಾದಾಗ ಸಿಟ್ಟಿಗೆದ್ದು ತುಮಕೂರಿನಲ್ಲಿದ್ದ ಆಕೆ ಮತ್ತು ಅತ್ತೆ ಸರಸ್ವತಿ ಅವರನ್ನೂ 2010ರ ಜೂನ್‌ 14ರಂದು ಕೊಲೆ ಮಾಡಿದ್ದ. 

2 ದಿನಗಳ ಅನಂತರ ಮಂಗಳೂರಿಗೆ ಬಂದು ತನ್ನಿಬ್ಬರು ಮಕ್ಕಳಾದ ಭುವನ್‌ ರಾಜ್‌ (10) ಮತ್ತು ಕೃತ್ತಿಕಾ (4)ರನ್ನು ಪಾಣಾಜೆಯ ಅರ್ಧಮೂಲೆಯಲ್ಲಿ ಕೆರೆಗೆ ತಳ್ಳಿ ಹತ್ಯೆ ಮಾಡಿದ್ದ.

ರಮೇಶ ನಾಯ್ಕ ಮೂಲತಃ ಪಾಣಾಜೆಯ ಅರ್ಧಮೂಲೆಯವನು. ಆತನಿಗೆ ಪುತ್ತೂರಿನಿಂದ ವಿವಾಹವಾಗಿತ್ತು. ಪತಿ-ಪತ್ನಿ ಇಬ್ಬರೂ ಬೇರೆ ಬೇರೆ ಬ್ಯಾಂಕ್‌ಗಳಲ್ಲಿ ಉದ್ಯೋಗದಲ್ಲಿದ್ದರು. ರಮೇಶ ನಾಯ್ಕ ಸೋಲಾಪುರದಲ್ಲಿ ಮ್ಯಾನೇಜರ್‌ ಆಗಿದ್ದ. ತುಮಕೂರಿನಲ್ಲಿ ತನ್ನ ಅತ್ತೆ, ನಾದಿನಿ ಸವಿತಾ ಅವರ ಮನೆಯಲ್ಲಿ ವಾಸ ಮಾಡುತ್ತಿದ್ದ. ರಮೇಶ್‌ ನಾಯ್ಕನ ಮಡದಿ ಸುಂದರಿ ಮಂಗಳೂರಿನಲ್ಲಿ ಬ್ಯಾಂಕ್‌ ಉದ್ಯೋಗಿಯಾಗಿದ್ದರಿಂದ ಆಕೆ, ಇಬ್ಬರು ಮಕ್ಕಳೊಂದಿಗೆ ಮಂಗಳೂರಿನಲ್ಲೇ ವಾಸವಿದ್ದರು.

ನಾದಿನಿ ಮೇಲಿನ ಮೋಹ
ನಾದಿನಿ ಸವಿತಾಳನ್ನು ಇಷ್ಟ ಪಟ್ಟಿದ್ದ ಆರೋಪಿ ರಮೇಶ ನಾಯ್ಕ, ಆಕೆ ತನ್ನ ಸಹೋದ್ಯೋಗಿ ಮೋಹನ್‌ ಎಂಬಾ ತನನ್ನು ಪ್ರೀತಿಸಿ ಮದುವೆ ಯಾಗಲು ಸಿದ್ಧಳಾದಾಗ ಆಕ್ಷೇಪಿಸಿದ್ದ. ಆದರೆ ಮನೆಯವರು ಸೊಪ್ಪು ಹಾಕದ ಕಾರಣ ಕುಪಿತಗೊಂಡ ರಮೇಶ್‌, ತುಮಕೂರಿಗೆ ತೆರಳಿ ಸವಿತಾಳನ್ನು ಕೊಲೆ ಮಾಡಿ, ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದಿದ್ದ. ತಡೆಯಲು ಬಂದ ಅತ್ತೆ ಸರಸ್ವತಿ ಅವರನ್ನೂ ಹತ್ಯೆ ಮಾಡಿದ್ದ.

ಮಕ್ಕಳನ್ನು ಕೆರೆಗೆ ತಳ್ಳಿದ್ದ
ತುಮಕೂರಿನಿಂದ ಪರಾರಿಯಾಗಿ ಮಂಗಳೂರಿಗೆ ಬಂದ ರಮೇಶ್‌, ಮಧ್ಯಾಹ್ನ ಶಾಲೆ ಬಿಟ್ಟು ಬಂದ ಭುವನ್‌ರಾಜ್‌ (10) ಮತ್ತು ಮನೆಯಲ್ಲಿದ್ದ ಕೃತ್ತಿಕಾ (4) ಅವರನ್ನು ಐಸ್‌ ಕ್ರೀಂ ಕೊಡಿಸುವುದಾಗಿ ಹೇಳಿ ಬಾಡಿಗೆ ಕಾರಲ್ಲಿ ಪಾಣಾಜೆಗೆ ಕರೆ ತಂದಿದ್ದ. ಅಲ್ಲಿಗೆ ಬರುವಾಗ ಸಂಜೆ ಆಗಿತ್ತು. ಅರ್ಧಮೂಲೆಯಲ್ಲಿ ತಾನು ಈ ಹಿಂದೆ ಮಾರಾಟ ಮಾಡಿದ್ದ ಜಮೀನಿನ ಪಕ್ಕದ ತೋಟಕ್ಕೆ ಮಕ್ಕಳನ್ನು ಕರೆದೊಯ್ದು ಕೆರೆಗೆ ಅವರನ್ನು ತಳ್ಳಿ ಹತ್ಯೆ ಮಾಡಿದ್ದ. ಬಳಿಕ ಪುತ್ತೂರಿನ ವಸತಿಗೃಹವೊಂದರಲ್ಲಿ ಬಿಡಾರ ಹೂಡಿದ್ದ.

ಸಂಪರ್ಕಕಕ್ಕೆ ಸಿಗಲಿಲ್ಲ
ತುಮಕೂರಿನಲ್ಲಿ ತನ್ನ ತಂಗಿ ಅಥವಾ ತಾಯಿ ಸಂಪರ್ಕಕ್ಕೆ ಸಿಗದ ಕಾರಣ ಗಾಬರಿಗೊಂಡ ಸುಂದರಿ ಅವರಿಗೆ, ತಮ್ಮ ಪತಿ ರಮೇಶ್‌, ತುಮಕೂರಿಗೆ ಬಂದಿದ್ದ ಸುದ್ದಿ ತಿಳಿಯುತ್ತದೆ. ಆಕೆ ಮಂಗಳೂರಿನ ಮನೆಗೆ ಬಂದಾಗ, ಮಕ್ಕಳನ್ನೂ ಕರೆದು ಕೊಂಡು ಹೋಗಿದ್ದಾನೆ ಎಂಬುದು ಗೊತ್ತಾಗುತ್ತದೆ. ಆತನ ಮೊಬೈಲ್‌ಗೆ ಕರೆ ಮಾಡಿದರೆ, ಅದು ಸ್ವಿಚ್ಡ್ ಆಫ್‌ ಆಗಿತ್ತು. ಆಮೇಲೆ ಬಾಡಿಗೆ ಕಾರಿನ ಚಾಲಕನನ್ನು ಸಂಪರ್ಕಿಸಿದಾಗ ರಮೇಶ ನಾಯ್ಕ ಅರ್ಧಮೂಲೆಗೆ ಬಂದ ಸಂಗತಿ ಬೆಳಕಿಗೆ ಬಂದಿತ್ತು. ಇದೇ ವೇಳೆ ರಮೇಶ್‌ ನಾಯ್ಕನಿಂದ, ಆತನ ಪತ್ನಿಯ ಮೊಬೈಲ್‌ಗೆ, ‘ನಾವೆಲ್ಲ ಒಂದು ಕಡೆ ಸ್ವರ್ಗ ಸೇರಿದ್ದೇವೆ. ನೀನು ನೀರು ಇರುವ ಬಾವಿಯನ್ನು ನೋಡಿ ಹಾರು’ ಎಂಬ ಸೂಚನೆಯಿರುವ ಸಂದೇಶ ಕಳುಹಿಸುತ್ತಾನೆ.

ಆರೋಪಿ ಬಂಧನ
ಈ ವೇಳೆಗಾಗಲೇ ಮಾಹಿತಿ ಸಿಕ್ಕಿ ಗ್ರಾಮಾಂತರ ಠಾಣೆಯ ಆಗಿನ ಸಿಪಿಐ ಬಿ.ಕೆ. ಮಂಜಯ್ಯ ಮತ್ತು ತಂಡ ಆರೋಪಿಯನ್ನು ವಸತಿಗೃಹದಲ್ಲಿ ಬಂಧಿಸಿತು. ವಿಚಾರಣೆ ನಡೆದು, ಅತ್ತೆ ಹಾಗೂ ನಾದಿನಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ತುಮಕೂರು ನ್ಯಾಯಾಲಯ 2012ರಲ್ಲಿ ಆರೋಪಿ ರಮೇಶ ನಾಯ್ಕಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸ್ವಂತ ಮಕ್ಕಳನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ 2013ರಲ್ಲಿ ಪುತ್ತೂರು ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ, ತೀರ್ಪು ನೀಡಿತ್ತು.

ಮೊದಲ ಗಲ್ಲು ಪ್ರಕರಣ
ದ.ಕ. ಜಿಲ್ಲೆಯ ಇತಿಹಾಸದಲ್ಲಿ ಈ ಮರಣ ದಂಡನೆ ಮೂರನೆಯದ್ದಾಗಿತ್ತು. ರಿಪ್ಪರ್‌ ಚಂದ್ರನಿಗೆ ನೀಡಲಾದ ಮರಣದಂಡನೆ ಮೊದಲನೆ ಯದ್ದು. ವಾಮಂಜೂರಿನಲ್ಲಿ ಸಂಬಂಧಿಕರು ನಾಲ್ವರನ್ನು ಹತ್ಯೆ ಮಾಡಿದ ಉಪ್ಪಿನಂಗಡಿ ಪೆರಿಯಡ್ಕದ ಪ್ರವೀಣ ಸಫಲ್ಯಗೆ ಮರಣ ದಂಡನೆಯನ್ನು ಜಿಲ್ಲಾ ನ್ಯಾಯಾಲಯ ವಿಧಿಸಿತ್ತು. ಪುತ್ತೂರು ನ್ಯಾಯಾಲಯದ 101 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಇದೀಗ ಹೈಕೋರ್ಟ್‌ ಈ ತೀರ್ಪನ್ನು ಎತ್ತಿ ಹಿಡಿದಿದೆ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.