“ಬ್ಯಾಂಕ್‌ ವಿಲೀನದಿಂದ ಅಭಿವೃದ್ಧಿಗೆ ಹೊಡೆತ’


Team Udayavani, Feb 8, 2020, 5:50 AM IST

0702MLR76

ಮಂಗಳೂರು: ಬ್ಯಾಂಕ್‌ ವಿಲೀನದಿಂದಾಗಿ ಕರಾವಳಿಯ ಅಭಿವೃದ್ಧಿಗೆ ಹೊಡೆತ ಬೀಳುವ ಸಾಧ್ಯತೆ ಇದ್ದು, ಕೇಂದ್ರ ಸರಕಾರ ಈ ನಿಲುವಿನ ಬಗ್ಗೆ ವಿಮರ್ಶೆ ಮಾಡಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಕರಾವಳಿಯ ಬ್ಯಾಂಕ್‌ಗಳನ್ನು ಉಳಿಸಿ ಹೋರಾಟ ಸಮಿತಿಯ ವತಿಯಿಂದ ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಸಿಬಿಒಒ ಸಭಾಂಗಣದಲ್ಲಿ ಶುಕ್ರವಾರ ನಡೆದ ಲೋಗೊ ಮತ್ತು ಕರಪತ್ರ ಅನಾವರಣ ಸಭೆಯಲ್ಲಿ ಅವರು ಮಾತನಾಡಿದರು.

ಬ್ಯಾಂಕ್‌ ವಿಲೀನದಿಂದಾಗಿ ಕರಾವಳಿಯಲ್ಲಿ ಉದ್ಯೋಗಾವಕಾಶ ಕುಸಿಯಬಹುದು. ಕರಾವಳಿಯಲ್ಲಿ ಹುಟ್ಟಿದ ಬ್ಯಾಂಕ್‌ಗಳು ಸಮಾಜದ ಬೆಳವಣಿಗೆಗೆ ಕೊಡುಗೆ ನೀಡಿವೆ. ಉದ್ಯೋಗ ಸೃಷ್ಟಿಯ ಜತೆಗೆ ಜನರ ಜೀವನ ಮಟ್ಟ ಸುಧಾರಿಸಿದೆ. ಬ್ಯಾಂಕ್‌ ವಿಲೀನವು ಕರಾವಳಿಯ ಭೌಗೋಳಿಕ ಪ್ರದೇಶಕ್ಕೆ ತಕ್ಕುದಲ್ಲ ಎಂದು ತಿಳಿಸಿದರು.

ಅಸ್ತಿತ್ವ ನಾಶ ಭೀತಿ
ಅಖೀಲ ಭಾರತ ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟದ ಮಾಜಿ ಜಂಟಿ ಕಾರ್ಯದರ್ಶಿ ಟಿ.ಆರ್‌. ಭಟ್‌ ಮಾತನಾಡಿ, ಮತ್ಸೋÂದ್ಯಮ, ಬೋಟ್‌ ಉದ್ಯಮ ಪ್ರಗತಿಗೆ ಕರಾವಳಿ ಮೂಲದ ಬ್ಯಾಂಕ್‌ಗಳು ಕಾರಣ. ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಕಾರಣವಾದ ಕರಾವಳಿಯ ಬ್ಯಾಂಕ್‌ಗಳು ಇದೀಗ ತಮ್ಮ ಅಸ್ತಿತ್ವ ಕಳೆದುಕೊಳ್ಳುತ್ತಿವೆ. ಬ್ಯಾಂಕ್‌ ದೊಡ್ಡದಾದಷ್ಟು ಅದರ ದಕ್ಷತೆ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತಿದ್ದು, ಇದು ಸುಳ್ಳು. ಹೀಗಾಗಿದ್ದರೆ ಸ್ಟೇಟ್‌ ಬ್ಯಾಂಕ್‌ ಯಾಕೆ ನಷ್ಟದ ಹಾದಿಯಲ್ಲಿದೆ ಎಂದು ಪ್ರಶ್ನಿಸಿದರು.

ಕರಾವಳಿ ಬ್ಯಾಂಕ್‌ಗಳ ಉಳಿಸಿ ಹೋರಾಟ ಸಮಿತಿಯ ಸಂಚಾಲಕ ದಿನೇಶ್‌ ಹೆಗ್ಡೆ ಉಳೆಪಾಡಿ ಮಾತನಾಡಿ, ಕರಾವಳಿ ಬ್ಯಾಂಕ್‌ಗಳ ತೊಟ್ಟಿಲು. ದೇಶದ ಆರ್ಥಿಕತೆಗೆ ಬಹಳಷ್ಟು ಕೊಡುಗೆ ನೀಡಿದೆ. ವಿಲೀನದ ಬಗ್ಗೆ ಯಾವುದೇ ಬ್ಯಾಂಕ್‌ ನಿರ್ಧಾರ ಕೈಗೊಂಡರೆ ಸಾಲುವುದಿಲ್ಲ. ಕ್ಯಾಬಿನೆಟ್‌ನಲ್ಲಿ ನಿರ್ಧಾರವಾಗಿ ಬಳಿಕ ನೋಟಿಫಿಕೇಶನ್‌ ಆಗಬೇಕು. ಆದರೆ ಇನ್ನೂ ಆಗಿಲ್ಲ ಎಂದರು.

ಹೋರಾಟದ ಎಚ್ಚರಿಕೆ
ನರಸಿಂಹನ್‌ ಕಮಿಟಿಯಲ್ಲಿ ಬ್ಯಾಂಕ್‌ ವಿಲೀನದ ಪ್ರಸ್ತಾವವಿದ್ದು, ಬ್ಯಾಂಕ್‌ ನಷ್ಟಕ್ಕೆ ತಲುಪಿದರೆ ಅದರ ಪುನಶ್ಚೇತನಕ್ಕೆ ಪೂರಕ್ಕೆ ವಾತಾವರಣ ಕಲ್ಪಿಸಬೇಕು ಎಂದಿದೆ. ಬದಲಾಗಿ ವಿಲೀನ ಮಾಡಬೇಕೆಂದಿಲ್ಲ. ಮುಂದಿನ ದಿನಗಳಲ್ಲಿ ಕರಾವಳಿಯ ತಾಲೂಕು, ಹೋಬಳಿ ಮಟ್ಟದಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತೇವೆ ಎಂದು ವಿವರಿಸಿದರು.

ಲಾಂಛನವನ್ನು ಶ್ರೀ ವಿಶ್ವಪ್ರಸನ್ನತೀರ್ಥರು ಅನಾವರಣ ಗೊಳಿಸಿದರು. ಪ್ರತಿಭಟನೆಯ ಕರಪತ್ರವನ್ನು ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ವಿಜಯ್‌ ವಿಕ್ಟರ್‌ ಲೋಬೊ ಬಿಡುಗಡೆಗೊಳಿಸಿದರು. ಮನವಿ ಪತ್ರವನ್ನು ಟಿ.ಆರ್‌. ಭಟ್‌, ಪ್ರತಿಭಟನೆಯ ಸ್ಟಿಕ್ಕರ್‌ ಅನ್ನು ಮಾಜಿ ಸಚಿವ ಸುಬ್ಬಯ್ಯ ಸುಬ್ಬಯ್ಯ ಶೆಟ್ಟಿ ಬಿಡುಗಡೆಗೊಳಿಸಿದರು.ಕಾರ್ಮಿಕ ಮುಖಂಡ ಮುನೀರ್‌ ಕಾಟಿಪಳ್ಳ ಸ್ವಾಗತಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.