ಕೋಮು ಸಾಮರಸ್ಯಕ್ಕೆ  ವಿದ್ಯಾರ್ಥಿಗಳಿಂದ ‘ಬಣ್ಣ’


Team Udayavani, May 24, 2018, 10:23 AM IST

24-may-2.jpg

ಉಳ್ಳಾಲ: ಧರ್ಮದ ಹೆಸರಿನಲ್ಲಿ ಅಲ್ಲಲ್ಲಿ ಸಾಮರಸ್ಯ ಕದಡುವ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಇನ್ನೊಂದೆಡೆ ರಾಜಕೀಯವಾಗಿಯೂ ಧರ್ಮಗಳು ಬೆರೆತು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸ್ಥಳೀಯ ಯುವಕರ ತಂಡದೊಂದಿಗೆ ಸೇರಿಕೊಂಡು ಯುವ ಸಮುದಾಯದಲ್ಲಿ ಕೋಮು ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ಕಿರು ಚಿತ್ರವೊಂದನ್ನು ನಿರ್ಮಿಸಿದ್ದು, ಸೋಮೇಶ್ವರ ಪಿಲಾರ್‌ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಾಗೃತಿಗಾಗಿ ‘ಬಣ್ಣ’ ಹಚ್ಚಿದ್ದಾರೆ.

‘ಸ್ಟೋರಿ ಬೋರ್ಡ್‌ ಕ್ರಿಯೇಷನ್ಸ್‌’ ಅನ್ನುವ ಲಾಂಛನದಡಿ ‘ಬಣ್ಣ’ ಅನ್ನುವ ಕಿರುಚಿತ್ರವನ್ನು ರಚಿಸಿ ಶಾಲಾ ಆರಂಭದಲ್ಲೇ ಜಾಗೃತಿ ಮೂಡಿಸಲು ಮುಂದಾಗಿದೆ. ಸೋಮೇಶ್ವರ ಪಿಲಾರು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಜತೆಗೂಡಿಸಿ ಶಾಲಾ ವಠಾರದಲ್ಲೇ ಕಿರುಚಿತ್ರವನ್ನು ರಚಿಸಿದೆ. ಆರು ನಿಮಿಷಗಳ ಕಿರುಚಿತ್ರ ರಚನೆಗೆ ತಂಡ ಐದು ದಿನಗಳವರೆಗೆ ದುಡಿದಿದೆ. ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಮತ್ತು ಸಿಬಂದಿಯನ್ನು ಒಳಗೊಂಡ ತಂಡ ಕಿರುಚಿತ್ರದಲ್ಲಿ ಭಾಗಿಯಾಗಿದೆ.

ತೇಜೇಶ್‌ ಗಟ್ಟಿ ಚಿತ್ರಕಥೆ ಬರೆದಿದ್ದು, ಚಿತ್ರದಲ್ಲಿ ಸರಕಾರಿ ಶಾಲೆಯ ಅಕ್ಷತಾ ಸಾಲ್ಯಾನ್‌, ಪ್ರದ್ವಿನ್‌, ಪದ್ಮನಾಭ, ಧನುಷ್‌, ಪುನೀತ್‌ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ವಾಹಿನಿ ಪತ್ರಕರ್ತ ತೇಜೇಶ್‌ ಗಟ್ಟಿ ಚಿತ್ರಕ್ಕೆ ಕಥೆ ಬರೆದಿದ್ದು, ಕೌಶಿಕ್‌ ಕೆ.ಎಸ್‌. ಸಂಭಾಷಣೆಯ ಜತೆಗೆ ನಿರ್ದೇಶನವನ್ನು ಮಾಡಿದ್ದಾರೆ.

ಚಂದ್ರು ಭಾನಾಪುರ್‌ ನಿರ್ದೇಶನದಲ್ಲಿ ಸಹಾಯ ಮಾಡಿದ್ದಾರೆ. ನಿಖೀಲ್‌ ರಾವ್‌ ಕುಂಪಲ ಛಾಯಾಗ್ರಹಣದಲ್ಲಿ ಸಂಪೂರ್ಣ ಚಿತ್ರ ಮೂಡಿಬಂದಿದೆ. ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಅಬೂಬಕ್ಕರ್‌ ಸಿದ್ದೀಕ್‌ ಹೊತ್ತಿದ್ದು, ನಿತೀಶ್‌ ಪಿ. ಬೈಂದೂರ್‌ ಸ್ಥಿರ ಛಾಯಗ್ರಾಹಕರಾಗಿ ಚಿತ್ರದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆಯೂ ಕಿರುಚಿತ್ರ ನಿರ್ಮಿಸಿ ಯೂಟ್ಯೂಬ್‌ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಈ ತಂಡದ ನೂತನ ಕಿರುಚಿತ್ರ ‘ಬಣ್ಣ’ ಮೇ 24ರಂದು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.