ಬಂಟ್ವಾಳ:ಈಜಲು ತೆರಳಿದ್ದ ಬಾಲಕರಿಬ್ಬರು ನೀರು ಪಾಲು
Team Udayavani, Jan 28, 2018, 1:51 PM IST
ಬಂಟ್ವಾಳ:ಇಲ್ಲಿನ ತುಂಬೆ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ದಾರುಣ ಘಟನೆ ಭಾನುವಾರ ನಡೆದಿದೆ.
ಮೃತ ದುರ್ದುವಿಗಳು ಮಾರಿಪಳ್ಳದ ಸವಾದ್ ಮತ್ತು ರಮ್ಲಾನ್ ಎಂದು ತಿಳಿದು ಬಂದಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವಗಳನ್ನು ಮೇಲಕ್ಕೆತ್ತಲು ಕಾರ್ಯಾಚರಣೆ ನಡೆಸಲಾಗುತ್ತಿದೆ.