ಬಂಟ್ವಾಳ: ಉಗ್ರರಿಗೆ 25 ಕೋ.ರೂ. ವರ್ಗ: ದ.ಕ., ಕಾಸರಗೋಡು ಜಿಲ್ಲೆಯಿಂದ ಹಣ ರವಾನೆ
Team Udayavani, Mar 9, 2023, 7:20 AM IST
ಬಂಟ್ವಾಳ: ಬಿಹಾರದ ಪಟ್ನಾದ ಫುಲ್ವಾರಿ ಶರೀಫ್ನಲ್ಲಿ ನಡೆದ ಭಯೋತ್ಪಾದಕ ಚಟುವಟಿ ಕೆಗೆ ಸಂಬಂಧಿಸಿ ಬಂಟ್ವಾಳದ ನಂದಾವರ, ಪುತ್ತೂರು ಮತ್ತು ಮಂಜೇಶ್ವರದಿಂದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಾ. 5ರಂದು ಬಂಧಿಸಿರುವ ಐವರು ಕೂಡ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗೆ ಸೇರಿದವರು ಮತ್ತು ಅವರು ಭಯೋತ್ಪಾದಕರಿಗೆ 25 ಕೋ.ರೂ. ಹಣವನ್ನು ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.
ಇದೊಂದು ಪಿಎಫ್ಐಯ ಭಯೋತ್ಪಾದಕ ಚಟುವಟಿಕೆಯ ಬಹುರಾಜ್ಯ ಹವಾಲಾ ಸಂಪರ್ಕ ಜಾಲವಾಗಿದ್ದು,
ದ.ಕ. ಹಾಗೂ ಕಾಸರಗೋಡಿನ ಪಿಎಫ್ಐ ಕಾರ್ಯಕರ್ತರು ಭಾಗಿಯಾಗಿ ರುವ ಕುರಿತು ಎನ್ಐಎ ಅಧಿಕಾರಿಗಳು ದಾಖಲೆ ಸಹಿತ ಪತ್ತೆಹಚ್ಚಿದ್ದಾರೆ.
ದೇಶಾದ್ಯಂತ ವಿಶೇಷವಾಗಿ ಕೇರಳ,ಕರ್ನಾಟಕ, ಬಿಹಾರ ಮೊದಲಾದ ರಾಜ್ಯಗಳಲ್ಲಿ ಪಿಎಫ್ಐ ಹವಾಲಾ ದಂಧೆ ನಡೆ
ಸುತ್ತಿದ್ದು, ಫುಲ್ವಾರಿ ಶರೀಫ್ಪ್ರಕರಣದ ತನಿಖೆ ವೇಳೆ ಹವಾಲಾ ಮೂಲಕ ಹಣ ಸಂದಾಯ ಗೊತ್ತಾಗಿತ್ತು.
ನವಾಜ್, ಸಿನಾನ್ಗೆ ಹಣ ಹಂಚುವ ಜವಾಬ್ದಾರಿ
ವಿದೇಶದಿಂದ ಬರುತ್ತಿದ್ದ ಭಾರೀ ಮೊತ್ತದ ಹಣವನ್ನು ಪಿಎಫ್ಐ ಸಂಘಟನೆಯ ಸದಸ್ಯರ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾ ಯಿಸುವ ಜವಾಬ್ದಾರಿಯನ್ನು ನವಾಜ್ ಮತ್ತು ಮಹಮ್ಮದ್ ಸಿನಾನ್ ನಿರ್ವಹಿಸು ತ್ತಿದ್ದರು. ಆದುದರಿಂದ ಹೆಚ್ಚಿನ ಮೊತ್ತ ಇವರ ಮೂಲಕವೇ ವಿವಿಧೆಡೆ ಹೋಗುತ್ತಿತ್ತು; ಇವರೀರ್ವರು ಬೇರೆ ಬೇರೆ ವ್ಯಕ್ತಿಗಳ ಅಕೌಂಟ್ನಿಂದ ಹಣವನ್ನು ವರ್ಗಾಯಿಸುತ್ತಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಬಿಹಾರದ ಫುಲ್ವಾರಿ ಶರೀಫ್ ಹಾಗೂ ಮೋತಿಹಾರಿ ಪ್ರದೇಶಗಳಲ್ಲಿ ಪಿಎಫ್ಐ ಕಾರ್ಯಕರ್ತರು ಗುಪ್ತ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದು, ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಿರ್ದಿಷ್ಟ ಸಮುದಾಯದ ಯುವಕರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಬಂದೂಕು ಹಾಗೂ ಮದ್ದುಗುಂಡುಗಳನ್ನು ಸಜ್ಜುಗೊಳಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಮಾ. 5ರಂದು ಮೂವರನ್ನು ಬಂಧಿಸಲಾಗಿತ್ತು.
ಬಂಧಿತರು ಕೆಲವೊಂದು ಶಂಕಿತ ಭಯೋತ್ಪಾದಕರ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಇಡುತ್ತಿರುವುದು ಬೆಳಕಿಗೆ ಬಂದಿದೆ. ಬಂಧಿತರನ್ನು ಶೀಘ್ರದಲ್ಲಿ ಪಟ್ನಾದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ನಿಷೇಧಿತ ಪಿಎಫ್ಐ ಸಂಘಟನೆಯ ದೇಶೀಯ, ಅಂತಾರಾಷ್ಟ್ರೀಯ ಅಕ್ರಮ ಹಣದ ದಂಧೆಯ ಕುರಿತು ಉನ್ನತ ತನಿಖೆಗೆ ಪ್ರಗತಿಯಲ್ಲಿದೆ ಎಂದು ಎನ್ಐಎ ವಿವರಿಸಿದೆ.
ಬಂಧಿತರು
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಂದಾ ವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸಜೀಪ ಮೂಡದ ಸಫ್ರಾìಜ್ ನವಾಜ್, ಪುತ್ತೂರಿನ ಅಬ್ದುಲ್ ರಫೀಕ್ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇ ಶ್ವರ ಸಮೀಪದ ಕುಂಜ ತ್ತೂರಿನ ಅಬೀದ್ ಸೇರಿ ಒಟ್ಟು ಐವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ