Bantwal; ಮಟ್ಕಾ ಅಡ್ಡೆಗೆ ದಾಳಿ: ಮೂವರ ಬಂಧನ
Team Udayavani, Aug 31, 2023, 11:59 PM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಸೆನ್ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರು ಪರಾರಿಯಾಗಿದ್ದಾರೆ.
ಮಂಜೇಶ್ವರ ಹೊಸಂಗಡಿ ನಿವಾಸಿ ಶ್ರೀಧರ ಎಂ.ಎಸ್., ಅಮ್ಮುಂಜೆಯ ಥಾಮಸ್ ಹಾಗೂ ನೀರುಮಾರ್ಗದ ಜಾಕೀರ್ ಹುಸೈನ್ ಬಂಧಿತರು. ದಾಳಿಯ ವೇಳೆ ಆರೋಪಿಗಳ ಜತೆಗೆ ದಂಧೆಗೆ ಬಳಸಲಾದ ಪುಸ್ತಕಗಳು, 250 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ ಪಡೆದ ಸೆನ್ ಪೊಲೀಸ್ ಠಾಣೆಯ ಪಿಎಸ್ಐ ನೇತೃತ್ವದ ತಂಡ ದಾಳಿ ನಡೆಸಿದೆ.