ಬಂಟ್ವಾಳ : ಒಂಟಿ ಮಹಿಳೆಯ ಮನೆಯಿಂದ ಪಾತ್ರೆಗಳ ಕಳವು
Team Udayavani, Jun 26, 2022, 11:58 PM IST
ಬಂಟ್ವಾಳ: ಒಂಟಿ ಮಹಿಳೆ ವಾಸವಿದ್ದ ಮನೆಯೊಂದರ ಹೊರಗಡೆ ತೊಳೆದು ಒಣಗಲು ಇಟ್ಟಿದ್ದ ಪಾತ್ರೆಗಳನ್ನು ಕಳ್ಳರು ಎಗರಿಸಿದ ಘಟನೆ ಜೂ. 25ರಂದು ಮಣಿನಾಲ್ಕೂರು ಗ್ರಾಮದ ಅಗರಗಂಡಿ ಬಳಿಯ ಹಂಡೀರಿನಲ್ಲಿ ನಡೆದಿದೆ.
ಹಂಡೀರು ನಿವಾಸಿ ಮುತ್ತು ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿರುವ ಅವರು ಮನೆಯ ಸಮೀಪದಲ್ಲೇ ಇರುವ ಮಗಳ ಮನೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಸ್ನಾನ ಮಾಡಲು ಉಪಯೋಗಿಸುವ ದೊಡ್ಡ ಹಂಡೆ, ಅಡುಗೆಯ 3 ಪಾತ್ರೆಗಳು, 2 ಫೈಬರ್ ಕುರ್ಚಿಗಳನ್ನು ಕಳವು ಮಾಡಲಾಗಿದ್ದು, ಅದರ ಮೌಲ್ಯ ಒಟ್ಟು 3,500 ರೂ. ಎಂದು ಅಂದಾಜಿಸಲಾಗಿದೆ.
ಘಟನೆಯ ಕುರಿತು ಮುತ್ತು ಅವರ ಅಳಿಯ ಅಗರಗಂಡಿ ನಿವಾಸಿ ಪದ್ಮನಾಭ ನಾಯ್ಕ ಅವರು ದೂರು ನೀಡಿದ್ದು, ಜೂ. 25ರ ಬೆಳಗ್ಗೆ 10ರ ಸುಮಾರಿಗೆ ಅವರ ಪತ್ನಿ ತಾಯಿ ಮನೆಗೆ ತೆರಳಿ ಪಾತ್ರೆಗಳನ್ನು ತೊಳೆದು ಮನೆಯ ಹೊರಗಡೆ ಇಟ್ಟಿದ್ದು, ಬಳಿಕ ತಾಯಿಯೊಂದಿಗೆ ತಮ್ಮ ಮನೆಗೆ ಆಗಮಿಸಿದ್ದರು. ಸಂಜೆ 5ರ ಸುಮಾರಿಗೆ ಪಾತ್ರೆಗಳನ್ನು ಒಳಗಡೆ ಇಡಲು ತೆರಳಿದಾಗ ಪಾತ್ರೆಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಪಿಎಸ್ಐ ಸಂಜೀವ ಹಾಗೂ ಸಿಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದಲ್ಲಿ ಹೆಚ್ಚಿದ ಕಳ್ಳತನ
ಕಳೆದ ಹಲವು ಸಮಯಗಳಿಂದ ಮಣಿನಾಲ್ಕೂರು ಗ್ರಾಮದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಇದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. ಜತೆಗೆ ಪ್ರತೀ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ ಕಳ್ಳರ ಕುರಿತು ಸಾರ್ವಜನಿಕ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ಅಂತಹ ಆರೋಪಿಗಳ ಕುರಿತು ನಾವು ಎಚ್ಚರಿಕೆಯಿಂದ ಇರಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು