‘ಬಹುಮತ ಬಾರದಿದ್ದರೆ ವಿಪಕ್ಷವಾಗಿ ಕೂರಲು ಸಿದ್ಧ’


Team Udayavani, Aug 29, 2018, 11:53 AM IST

29-agust-8.jpg

ಬಂಟ್ವಾಳ : ಪುರಸಭೆಯ ಚುನಾವಣೆಯಲ್ಲಿ ಬಹುಮತ ಬಾರದಿದ್ದರೆ ಆಡಳಿತಕ್ಕಾಗಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್‌- ಮತ್ತು ಬಿಜೆಪಿ ಪ್ರತಿನಿಧಿಗಳು ಹೇಳಿದ್ದಾರೆ. ಸಂದರ್ಭ ಬಂದಾಗ ಮಾತುಕತೆ ಮೂಲಕ ಆಡಳಿತಕ್ಕಾಗಿ ಪ್ರಯತ್ನ ನಡೆಸುವುದಾಗಿ ಎಸ್‌ಡಿಪಿಐ ಪ್ರತಿನಿಧಿ ಹೇಳಿದ್ದು, ನಮ್ಮ ಅಭ್ಯರ್ಥಿ ಆಯ್ಕೆಯಾದಾಗ ಸಂದರ್ಭ ನೋಡಿ ಮುಂದಿನ ಹೆಜ್ಜೆ ಇಡು ವರು ಎಂದು ಜೆಡಿಎಸ್‌ ಪ್ರತಿನಿಧಿ ಹೇಳಿಕೊಂಡಿದ್ದಾರೆ.

ಅವರು ಆ. 27ರಂದು ಬಿ.ಸಿ. ರೋಡ್‌ ನಲ್ಲಿ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ತಮ್ಮ ಪಕ್ಷದ ನಿಲುವನ್ನು ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ನಮ್ಮದೇ ಪಕ್ಷ ಬಹುಮತ ಬರುವುದಾಗಿ ಪ್ರತಿಪಾದಿಸಿದರು.

ಉತ್ತಮ ಆಡಳಿತ ನೀಡಿದೆ
ಕಳೆದ ಅವಧಿಯಲ್ಲಿ ಪುರಸಭೆಯಲ್ಲಿ ಕಾಂಗ್ರೆಸ್‌ ಆಡಳಿತವಿತ್ತು. ಉತ್ತಮ ಆಡಳಿತ ನೀಡಿದೆ. ಮಾಜಿ ಸಚಿವರ ಸಹಕಾರದಲ್ಲಿ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಆಗಿದೆ. ಕೋಟಿಯ ಮೊತ್ತದಲ್ಲಿ ಪುರಸಭಾ ವ್ಯಾಪ್ತಿಯಲ್ಲಿ ಪ್ರಗತಿ ಸಾಧಿಸಿದೆ. ಮುಂದಿನ ಆಡಳಿತದಲ್ಲಿ ಇನ್ನಷ್ಟು ಕೆಲಸ ಮಾಡಲು ಈಗಾಗಲೇ ತನ್ನ ಪ್ರಣಾಳಿಕೆಯಲ್ಲಿ ಯೋಜನೆ ಪ್ರಕಟಿಸಿದೆ ಎಂದು ಕಾಂಗ್ರೆಸ್‌ ಪ್ರತಿನಿಧಿಸಿದ ಪುರಸಭಾ ಮಾಜಿ ಅಧ್ಯಕ್ಷ, ಹಾಲಿ ಅಭ್ಯರ್ಥಿ ಪಿ. ರಾಮಕೃಷ್ಣ ಆಳ್ವ ಪಕ್ಷದ ಪರವಾದ ತನ್ನ ನಿಲುವನ್ನು ಪ್ರಕಟಿಸಿದರು.

ಬೀದಿಬದಿ ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ನನ್ನ ಆಡಳಿತ ಅವಧಿಯಲ್ಲಿ ಜಾಗ ಗುರುತಿಸಲಾಗಿದ್ದು, ಚುನಾವಣಾ ಘೋಷಣೆ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಗತಿ ಸಾಧ್ಯವಾಗಿಲ್ಲ. ತ್ಯಾಜ್ಯ ವಿಲೇವಾರಿಗಾಗಿ ಪೈರೋಲಿಸಿಸ್‌ ಯಂತ್ರ ಅಳವಡಿಸಿ ಸಮಗ್ರ ತ್ಯಾಜ್ಯ ವಿಲೇವಾರಿ ನಡೆಸುವುದಕ್ಕೆ ಯೋಜನೆ ರೂಪಿಸಿದೆ. ಆಡಳಿತಕ್ಕೆ ಬಂದಾಗ ಬಂಟ್ವಾಳ ಪೇಟೆ ವಿಸ್ತರಣೆ ವ್ಯವಸ್ಥೆ ಮಾಡಿಯೇ ಸಿದ್ಧ ಎಂದರು.

ಕಾಂಗ್ರೆಸ್‌ ವಿಫಲ
ಬಿಜೆಪಿ ಪ್ರತಿನಿಧಿಸಿದ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ ಮಾತನಾಡಿ, ಕಳೆದ ಅವಧಿಯಲ್ಲಿ ಕಾಂಗ್ರೆಸ್‌ ಭ್ರಷ್ಟಾಚಾರ, ಜನ ವಿರೋಧಿ, ಕಳಪೆ ಆಡಳಿತ ನೀಡಿದೆ. ಬ್ರೋಕರ್‌ ವ್ಯವಹಾರಗಳಿಂದ ವ್ಯವಸ್ಥೆ ಲೋಪ ಎದುರಿಸಿತ್ತು ಎಂದು ಆರೋಪಿಸಿದರು. ಅನುದಾನದಲ್ಲಿ ನಿರ್ದಿಷ್ಟ ಮೊತ್ತವು ಕೇಂದ್ರದಿಂದ ಮಂಜೂರಾದದ್ದು ಎಂದು ಲಿಖಿತ ದಾಖಲೆ ನೀಡಿದರು. 56 ಲಕ್ಷ ರೂ. ವೆಚ್ಚದ ಲೆಕ್ಕಪತ್ರ ಇನ್ನೂ ಸಿಕ್ಕಿಲ್ಲ ಎನ್ನುವುದು ಕಳೆದ ಅವಧಿಯ ಕಾಂಗ್ರೆಸ್‌ ಆಡಳಿತದ ವೈಫಲ್ಯಕ್ಕೆ ಹಿಡಿದ ಕನ್ನಡಿ. ಮಫತ್‌ಲಾಲ್‌ 75 ಸೆಂಟ್ಸ್‌ ಜಮೀನು ಎಲ್ಲಿ ಹೋಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಸ ಸಂಗ್ರಹಣೆಯಲ್ಲಿ ಮನೆಮನೆಯಿಂದ ಸಂಗ್ರಹವಾಗಿರುವ ಮೊತ್ತ ಎಷ್ಟು ಎಂಬುದು ಇನ್ನೂ ತಿಳಿದಿಲ್ಲ. ಇದನ್ನು ಆಡಳಿತ ಪಕ್ಷದ ಸದಸ್ಯರೇ ಲಿಖಿತವಾಗಿ ಪುರಸಭೆಗೆ ದಾಖಲೆ ಸಹಿತ ನೀಡಿದ್ದಾರೆ ಎಂದು ಸಂವಾದ ಸಂದರ್ಭ ಎದುರಿಟ್ಟರು. ಬಿಜೆಪಿ ಆಡಳಿತಕ್ಕೆ ಬಂದು ಬಂಟ್ವಾಳವನ್ನು ಭ್ರಷ್ಟಾಚಾರಮುಕ್ತ ಹಾಗೂ ಪಾರದರ್ಶಕ ಆಡಳಿತ ನಡೆಸುವುದು ನಮ್ಮ ಸಂಕಲ್ಪವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದಾಗಿ ತಿಳಿಸಿದರು. ವಾರದ ಸಂತೆ ನಡೆಸುವುದು, ಬೀದಿಬದಿ ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದರು.

ಗುರುತಿಸಿಕೊಳ್ಳುವ ಸಾಧನೆ ಮಾಡಿಲ್ಲ
ಎಸ್‌ಡಿಪಿಐ ಪ್ರತಿನಿಧಿಸಿದ, ಹಾಲಿ ಅಭ್ಯರ್ಥಿ ಮೊನೀಶ್‌ ಅಲಿ ಮಾತನಾಡಿ, ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆ, ಆಡಳಿತ ವ್ಯವಸ್ಥೆಯಲ್ಲಿ ಪುರಸಭೆಯ ಆಡಳಿತ ಗುರುತಿಸಿಕೊಳ್ಳುವ ಸಾಧನೆ ಮಾಡಿಲ್ಲ. ಈ ಸಲ ಮತದಾರರು ಎಸ್‌ಡಿಪಿಐಗೆ ಒಮ್ಮೆ ಅಧಿಕಾರ ನೀಡಿ. ಜನಸ್ನೇಹಿ, ಜನರಿಗೆ ಮನಮುಟ್ಟುವ ಜನಪರ ಆಡಳಿತ ನೀಡುತ್ತೇವೆ ಎಂದರು.

ಪುರಸಭೆಯಿಂದ ಮನೆ, ಮಳಿಗೆಗಳಿಂದಲೇ ತ್ಯಾಜ್ಯವನ್ನು ಸಮರ್ಪಕವಾಗಿ ತೆಗೆದುಕೊಂಡು ಹೋಗುವ ವ್ಯವಸ್ಥೆ ನಿರ್ಮಾಣ ಆಗಿಲ್ಲ. ಎಸ್‌ಡಿಪಿಐ ಅಧಿಕಾರಕ್ಕೆ ಬಂದಾಗ ತಮ್ಮ ಆಡಳಿತ ಅವದಿಯಲ್ಲಿ ಕಸ ವಿಲೇವಾರಿಯನ್ನು ಸುಸಜ್ಜಿತಗೊಳಿಸುವುದಕ್ಕೆ ಆದ್ಯತೆ ನೀಡುವುದು. ಕಂಚಿನಡ್ಕಪದವು ತ್ಯಾಜ್ಯ ಸಂಗ್ರಹಣ ಕೇಂದ್ರವನ್ನು ಮಾತುಕತೆ ಮೂಲಕ ಪುನರ್‌ಚಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಎರಡನೇ ಸುತ್ತಿನಲ್ಲಿ ಕಾಂಗ್ರೆಸ್‌ ಪ್ರತಿನಿಧಿಯವರು ಬಿ.ಸಿ. ರೋಡ್‌ ರಾ.ಹೆ. ಸರ್ವಿಸ್‌ ರಸ್ತೆಯ ಕಾಮಗಾರಿಯಿಂದ ಸಾರ್ವಜನಿಕವಾಗಿ ಆಗಿರುವ ಅವ್ಯವಸ್ಥೆಯ ಬಗ್ಗೆ ಪ್ರಸ್ತಾವಿಸಿದರು. ಬಿಜೆಪಿ ಪ್ರತಿನಿಧಿ ಪ್ರತಿ ಉತ್ತರ ನೀಡಿ ಹೆದ್ದಾರಿ ಇಲಾಖೆಯು ಸದ್ರಿ ರಸ್ತೆಯ ಬಗ್ಗೆ ಲಿಖಿತವಾಗಿ ನೀಡಿದ ವಿವರದಲ್ಲಿ ಇಲ್ಲಿನ ಪೈಪ್‌ಲೈನ್‌ ಒಡೆಯುವ ಮೂಲಕ ರಸ್ತೆ ನಿರ್ವಹಣೆ ಕಷ್ಟವಾಗಿದೆ. ಕಳಪೆ ಕಾಮಗಾರಿ ಇದಕ್ಕೆ ಕಾರಣ, ಪುರಸಭೆಯೇ ಅದನ್ನು ನಿರ್ವಹಿಸಬೇಕು ಎಂದು ಸ್ಪಷ್ಟವಾಗಿ ಮೂರು ಸಲ ಪತ್ರದಲ್ಲಿ ಆಡಳಿತಕ್ಕೆ ತಿಳಿಸಿದೆ. ಅದರ ಬಗ್ಗೆ ತಿಳಿದೂ ಅದನ್ನು ಮುಚ್ಚುಮರೆ ಮಾಡುವುದು ಯಾಕೆ ಎಂದು ಪ್ರಶ್ನಿಸಿದರು. ಇದೇ ಹಂತದಲ್ಲಿ ವಿಷಯಾಂತರ ಆಗುವ ಮೂಲಕ ಪ್ರಮುಖ ವಿಚಾರವೇ ನೇಪಥ್ಯತೆ ಸರಿಯಿತು. ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಸಮನ್ವಯಕಾರರಾಗಿ ನಿರೂಪಿಸಿದರು. ಕಾರ್ಯದರ್ಶಿ ಮುಹಮ್ಮದ್‌ ಆಲಿ ವಂದಿಸಿದರು.

ಫ‌ಲಿತಾಂಶ ಬಳಿಕ ನಿರ್ಧಾರ
ಜೆಡಿಎಸ್‌ ಪ್ರತಿನಿಧಿಸಿದ ಹಾಲಿ ಅಭ್ಯರ್ಥಿ ಹಾರೂನ್‌ ರಶೀದ್‌ ಮಾತನಾಡಿ, ನಾವು ಐದು ಮಂದಿಯನ್ನು ಕಣಕ್ಕೆ ಇಳಿಸಿದ್ದೇವೆ. ಫಲಿತಾಂಶ ಬಂದ ಅನಂತರ ನಿರ್ಧಾರವನ್ನು ಪಕ್ಷದ ಮಟ್ಟದಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.