Bantwal: ಬಿಸಿರೋಡಿನ ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ; ದಟ್ಟ ಹೊಗೆ
Team Udayavani, Apr 6, 2023, 3:28 PM IST
ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು. ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು.
ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.
ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು.
ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.
ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು