ಬಂಟ್ವಾಳ: ಸರಕಾರಿ ಕಟ್ಟಡಗಳಲ್ಲಿ ಸೋಲಾರ್‌ ಘಟಕ

ಸಮಗ್ರ ಇಂಧನ ಅಭಿವೃದ್ಧಿ ಯೋಜನೆ

Team Udayavani, Oct 5, 2019, 4:56 AM IST

z-12

ಬಿ.ಸಿ. ರೋಡ್‌ನ‌ ಮಿನಿ ವಿಧಾನಸೌಧದ ಛಾವಣಿಯಲ್ಲಿ ಅನುಷ್ಠಾನಗೊಳಿಸಲಾದ ಸೋಲಾರ್‌ ಘಟಕ.

ಬಂಟ್ವಾಳ: ವಿದ್ಯುತ್‌ ಸ್ವಾವಲಂಬನೆ ದೃಷ್ಟಿಯಿಂದ ಸರಕಾರ ಬೇರೆ ಬೇರೆ ಮೂಲಗಳ ಮೂಲಕ ವಿದ್ಯುತ್‌ ಉತ್ಪಾದನೆಗೆ ಕ್ರಮ ಕೈಗೊಳ್ಳುತ್ತಿದ್ದು, ಕೇಂದ್ರ ಸರಕಾರದ ಸಮಗ್ರ ಇಂಧನ ಅಭಿವೃದ್ಧಿ ಯೋಜನೆ (ಐಪಿಡಿಎಸ್‌)ಯ ಮೂಲಕ ಬಂಟ್ವಾಳ ತಾ|ನಲ್ಲಿ ಒಟ್ಟು 88.80 ಲಕ್ಷ ರೂ. ವೆಚ್ಚದಲ್ಲಿ 6 ಸರಕಾರಿ ಕಟ್ಟಡಗಳಲ್ಲಿ ಸೋಲಾರ್‌ ಘಟಕಗಳನ್ನು ಅನುಷ್ಠಾನಗೊಳಿಸಿ ಕಾರ್ಯಾರಂಭಗೊಳಿಸಲಾಗಿದೆ.

ಸಮಗ್ರ ಇಂಧನ ಅಭಿವೃದ್ಧಿ ಯೋಜನೆ ಮೂಲಕ ಮಂಜೂರಾದ ಸೋಲಾರ್‌ ಘಟಕಗಳನ್ನು ಮೆಸ್ಕಾಂ ನೋಡಲ್‌ ಏಜೆನ್ಸಿಯಾಗಿ ಅನುಷ್ಠಾನಗೊಳಿಸುವ ಕಾರ್ಯ ಮಾಡುತ್ತಿದ್ದು, ಈ ಘಟಕಗಳಲ್ಲಿ ತಯಾರಾದ ವಿದ್ಯುತ್‌ ನೇರವಾಗಿ ಮೆಸ್ಕಾಂನ ಗ್ರಿಡ್‌ಗಳಿಗೆ ಪೂರೈಕೆಯಾಗುತ್ತದೆ.

ಮೆಸ್ಕಾಂನ ಬಂಟ್ವಾಳ ವಿಭಾಗ ವ್ಯಾಪ್ತಿಗೆ ಬಂಟ್ವಾಳ, ಬೆಳ್ತಂಗಡಿ ತಾ|ಗಳು ಒಳಪಡುತ್ತಿದ್ದು, ಈ ವಿಭಾಗಕ್ಕೆ ಐಪಿಡಿಎಸ್‌ ಮೂಲಕ ಒಟ್ಟು 142.80 ಲಕ್ಷ ರೂ. ವೆಚ್ಚದಲ್ಲಿ 8 ಸೋಲಾರ್‌ ಘಟಕಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇದರಲ್ಲಿ 54 ಲಕ್ಷ ರೂ. ವೆಚ್ಚದಲ್ಲಿ ಬೆಳ್ತಂಗಡಿಯಲ್ಲಿ 2 ಘಟಕಗಳನ್ನು ಅನುಷ್ಠಾನಗೊಳಿಸಲಾಗಿದೆ. ಬಂಟ್ವಾಳದ 6 ಘಟಕಗಳು 88.80 ಲಕ್ಷ ರೂ.ಗಳಲ್ಲಿ ಅನುಷ್ಠಾನಗೊಂಡಿವೆ. ಈಗಾ ಗಲೇ ಎಲ್ಲ ಘಟಕಗಳ ಸಿಂಕ್ರೋ ನೈಝ್ ಕಾರ್ಯ ಪೂರ್ತಿಗೊಂಡಿದೆ.

ಬಂಟ್ವಾಳದಲ್ಲಿ 6 ಘಟಕಗಳು
ಬಂಟ್ವಾಳದಲ್ಲಿ ಮೆಸ್ಕಾಂನ ಬಂಟ್ವಾಳ-1 ಮತ್ತು 2ರ ಉಪವಿಭಾಗದ ಮೂಲಕ ಒಟ್ಟು 6 ಸೋಲಾರ್‌ ಘಟಕ ಗಳನ್ನು ಅನುಷ್ಠಾನಗೊಳಿಸಲಾಗಿದೆ. ಬಂಟ್ವಾಳ-1ರ ವ್ಯಾಪ್ತಿಯಲ್ಲಿ ಬಿ.ಸಿ. ರೋಡ್‌ನ‌ಲ್ಲಿರುವ ತಾ.ಪಂ. ಕಚೇರಿ ಕಟ್ಟಡದಲ್ಲಿ 24.32 ಕೆಡಬ್ಲ್ಯುಎಚ್‌( ಕಿಲೋ ವ್ಯಾಟ್‌/ಹವರ್‌) ಸಾಮರ್ಥ್ಯದ ಘಟಕವನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಪೂರ್ತಿಗೊಳಿಸಲಾಗಿದೆ.

ಬಂಟ್ವಾಳ-2ರ ವ್ಯಾಪ್ತಿಯ ಬಂಟ್ವಾಳ ಸರಕಾರಿ ಆಸ್ಪತ್ರೆ ಕಟ್ಟಡದಲ್ಲಿ 33.28 ಕೆಡಬ್ಲ್ಯುಎಚ್‌ ಸಾಮರ್ಥ್ಯದ ಘಟಕವು ಕಳೆದ ಮಾರ್ಚ್‌ ಅಂತ್ಯಕ್ಕೆ ಕಾರ್ಯಾರಂಭ ಗೊಂಡಿದೆ. ಬಂಟ್ವಾಳ ನಿರೀಕ್ಷಣ ಮಂದಿ ರದ ಕಟ್ಟಡದಲ್ಲಿ 23.68 ಕೆಡಬ್ಲ್ಯುಎಚ್‌ ಸಾಮರ್ಥ್ಯದ ಘಟಕ ಕಳೆದ ವರ್ಷ ನವೆಂಬರ್‌ನಲ್ಲಿ ಅನುಷ್ಠಾನಗೊಂಡಿದೆ.

ಬಂಟ್ವಾಳ-1ರ ವ್ಯಾಪ್ತಿಯ ಬಿ.ಸಿ. ರೋಡ್‌ನ‌ ಕೋರ್ಟ್‌ ಕಟ್ಟಡದಲ್ಲಿ 30 ಕೆಡಬ್ಲ್ಯುಎಚ್‌ ಸಾಮರ್ಥ್ಯದ ಘಟಕ ಕಳೆದ ವರ್ಷ ಡಿಸೆಂಬರ್‌, 10.22 ಕೆಡಬ್ಲ್ಯುಎಚ್‌ ಸಾಮರ್ಥ್ಯದ ಘಟಕ ಕಳೆದ ವರ್ಷ ನವೆಂಬರ್‌ನಲ್ಲಿ ಕಾರ್ಯಾರಂಭಗೊಂಡಿದೆ. ಬಿ.ಸಿ. ರೋಡ್‌ನ‌ ಮಿನಿ ವಿಧಾನಸೌಧದಲ್ಲಿ ಕೊನೆಯದಾಗಿ ಕಳೆದ ಜುಲೈ ಅಂತ್ಯಕ್ಕೆ 10.24 ಕೆಡಬ್ಲ್ಯುಎಚ್‌ ಸಾಮರ್ಥ್ಯದ ಘಟಕವು ಕಾರ್ಯಾರಂಭಗೊಂಡಿದೆ.

ಹೈಬ್ರಿಡ್‌ ಸಿಸ್ಟಂಗೆ ಬೇಡಿಕೆ
ಸರಕಾರಿ ಕಟ್ಟಡಗಳಲ್ಲಿ ಸೋಲಾರ್‌ ಘಟಕಗಳು ಕಾರ್ಯಾರಂಭಗೊಂಡಿದ್ದರೂ ವಿದ್ಯುತ್‌ ಸಂಪರ್ಕ ಕಡಿತಗೊಂಡಾಗ ಸೋಲಾರ್‌ ಸಂಪರ್ಕವೂ ಕಡಿತಗೊಳ್ಳುತ್ತದೆ. ಅಂದರೆ ಈ ಯೋಜನೆಯ ಘಟಕಗಳಲ್ಲಿ ಅದೇ ರೀತಿಯ ವ್ಯವಸ್ಥೆ ಇರುತ್ತದೆ. ಪ್ರಮುಖವಾಗಿ ಮಿನಿ ವಿಧಾನಸೌಧದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಲೂ ಕಾರ್ಯಾಚರಿಸುವ ಬ್ಯಾಟರಿ ಸೌಕರ್ಯ ಇರುವ ಹೈಬ್ರಿಡ್‌ ವ್ಯವಸ್ಥೆಗೆ ಬೇಡಿಕೆ ಇದೆ.

ವಿದ್ಯುತ್‌ ಪೂರೈಕೆ ಕಡಿತಗೊಂಡಾಗ ಜನರೇಟರ್‌ ಅನಿವಾರ್ಯ ವಾಗಿದ್ದು, ಅದಕ್ಕೆ ಡೀಸೆಲ್‌ ಹಾಕುವ ಬದಲು ಸೋಲಾರ್‌ ವ್ಯವಸ್ಥೆ ಇದ್ದರೆ ಅನುಕೂಲ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಯೋಜನೆಯಲ್ಲಿ ಆ ರೀತಿ ಮಾಡುವುದಕ್ಕೆ ಅವಕಾಶವಿಲ್ಲ. ಬ್ಯಾಟರಿ ಅಳವಡಿಸಿ ಪ್ರಯತ್ನಿಸಬಹುದು ಎಂದು ಮೆಸ್ಕಾಂ ಅಧಿಕಾರಿಗಳು ಅಭಿಪ್ರಾಯಿಸಿದ್ದಾರೆ.

ಮೆಸ್ಕಾಂ ಗ್ರಿಡ್‌ಗೆ ಪೂರೈಕೆ
ಬಂಟ್ವಾಳ ವಿಭಾಗ ವ್ಯಾಪ್ತಿ ಯಲ್ಲಿ ಒಟ್ಟು 142.80 ಲಕ್ಷ ರೂ. ವೆಚ್ಚದಲ್ಲಿ 8 ಸೋಲಾರ್‌ ಘಟಕಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದರಲ್ಲಿ 6 ಘಟಕಗಳು ಬಂಟ್ವಾಳ ತಾ|ನ ಸರಕಾರಿ ಕಟ್ಟಡಗಳ ಛಾವಣಿಗಳಲ್ಲಿ ಅನುಷ್ಠಾನಗೊಳಿಸಿದ್ದು, ಕಾರ್ಯಾರಂಭ ಗೊಂಡಿವೆ. ಇಲ್ಲಿನ ವಿದ್ಯುತ್‌ ಮೆಸ್ಕಾಂ ಗ್ರಿಡ್‌ಗೆ ಪೂರೈಕೆಯಾಗುತ್ತದೆ.
 - ರಾಮಚಂದ್ರ
ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ಮೆಸ್ಕಾಂ ಬಂಟ್ವಾಳ ವಿಭಾಗ

  ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.