ಬಂಟ್ವಾಳ; ಸಿಡಿಲು ಬಡಿದು ಮಗು ಹಾಗೂ ಇಬ್ಬರು ಮಹಿಳೆಯರು ಬಲಿ
Team Udayavani, Apr 12, 2017, 5:18 PM IST
ಮಂಗಳೂರು: ನೇತ್ರಾವತಿ ನದಿಯಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆಯಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರು ಹಾಗೂ ಮಗು ದಾರುಣವಾಗಿ ಸಾನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಗ್ರಾಮದಲ್ಲಿ ಬುಧವಾರ ನಡೆದಿದೆ.
ತುಮಕೂರು ಮೂಲದ ನಿವಾಸಿಗಳಾದ ಇಬ್ಬರು ಮಹಿಳೆಯರು ಬಟ್ಟೆ ತೊಳೆಯುತ್ತಿದ್ದರು. ಮಗು ಕೂಡಾ ಸಮೀಪದಲ್ಲಿದ್ದು, ಈ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ತುಮಕೂರಿನಿಂದ ಜಕ್ರಿಬೆಟ್ಟುವಿನಲ್ಲಿ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಕೆಲಸಕ್ಕೆ ಬಂದಿರುವುದಾಗಿ ವರದಿ ವಿವರಿಸಿದೆ. ಇಬ್ಬರು ಮಹಿಳೆಯರು(ಜಯಮ್ಮ, ಹನುಮಕ್ಕ) ಹಾಗೂ ಇಬ್ಬರು ಮಕ್ಕಳು ಇದ್ದಿದ್ದು, ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಹೇಳಿದೆ.