Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು


Team Udayavani, May 5, 2024, 9:16 PM IST

1-wewwqewq

ಬಂಟ್ವಾಳ: ಕಾಲು ಜಾರಿ ನೇತ್ರಾವತಿ ನದಿಗೆ ಬಿದ್ದ ಉಳ್ಳಾಲ ಮೂಲದ ಇಬ್ಬರು ಬಾಲಕಿಯರು ತಾಯಿ ಹಾಗೂ ಮನೆಮಂದಿಯ ಕಣ್ಣೆದುರೇ ಮುಳುಗಿ ಮೃತಪಟ್ಟ ದಾರುಣ ಘಟನೆ ರವಿವಾರ ಸಂಜೆ ನಾವೂರು ಗ್ರಾಮದ ನೀರಕಟ್ಟೆಯಲ್ಲಿ ಸಂಭವಿಸಿದೆ.

ಉಳ್ಳಾಲ ಬನ್ನಿಕೊಟ್ಯ ದರ್ಗಾ ರೋಡ್‌ ನಿವಾಸಿ ಇಲಿಯಾಸ್‌ ಅವರ ಪುತ್ರಿ ಮರಿಯಮ್‌ ನಾಫಿಯಾ (14) ಹಾಗೂ ಕೋಣಾಜೆ ಅಸೈಗೋಳಿ ನಿವಾಸಿ ಮೊಹಮ್ಮದ್‌ ಅನ್ಸಾರ್‌ ಅವರ ಪುತ್ರಿ ಆಶುರಾ (11) ಮೃತಪಟ್ಟವರು.

ಶಾಲೆಗೆ ರಜೆಯ ಹಿನ್ನೆಲೆಯಲ್ಲಿ ಮನೆ ಮಂದಿ ನಾವೂರಿನ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದು, ರವಿವಾರ ಸಂಜೆ 5ರ ಸುಮಾರಿಗೆ ಮನೆ ಮಂದಿ ಎಲ್ಲರೂ ನೇತ್ರಾವತಿ ನದಿ ಕಿನಾರೆಗೆ ವಿಹಾರಕ್ಕಾಗಿ ತೆರಳಿದ್ದರು ಎನ್ನಲಾಗಿದೆ.

ಆಗ ಎಲ್ಲರೂ ನೀರಿನಲ್ಲಿ ಆಟ ವಾಡುತ್ತಿದ್ದು, ಇಬ್ಬರು ಬಾಲಕಿಯರು ಮುಂದೆ ಹೋಗಿ ಆಕಸ್ಮಿಕವಾಗಿ ನೀರಿನ ಆಳಕ್ಕೆ ಬಿದ್ದಿದ್ದಾರೆ. ಆದರೆ ಜತೆಗಿದ್ದ ಮನೆ ಮಂದಿಯಲ್ಲಿ ಯಾರಿಗೂ ಈಜಲು ಬಾರದೆ ಅವರನ್ನು ರಕ್ಷಿಸುವುದಕ್ಕೆ ಸಾಧ್ಯವಾಗದೆ ಬೊಬ್ಬೆ ಹಾಕಿದರು. ಮಕ್ಕಳು ಮನೆಮಂದಿಯ ಕಣ್ಣೆದುರೇ ನೀರಿನಲ್ಲಿ ಮುಳುಗಿದ್ದು, ರಕ್ಷಣೆಗಾಗಿ ಕೈ ಸನ್ನೆ ಮಾಡಿದರೂ ರಕ್ಷಿಸಲು ಸಾಧ್ಯವಾಗದ ಕರುಣಾಜನಕ ಸ್ಥಿತಿ ಅವರದಾಗಿತ್ತು.

ಬಳಿಕ ಸ್ಥಳೀಯ ಯುವಕರು ಆಗಮಿಸಿ ಮಕ್ಕಳನ್ನು ಮೇಲಕ್ಕೆತ್ತಿದ್ದು, ಅದಾಗಲೇ ಇಬ್ಬರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮೃತ ಬಾಲಕಿ ನಾಸಿಯಾ ಅವರ ತಂದೆ ಇಲಿಯಾಸ್‌ ಅವರು ಹಿಂದೆ ನಾವೂರಿನ ಮೈಂದಾಳದಲ್ಲೇ ನೆಲೆಸಿದ್ದು, ಕಳೆದ ಕೆಲವು ವರ್ಷಗಳಿಂದ ಅವರು ಉಳ್ಳಾಲದಲ್ಲಿ ವಾಸ್ತವ್ಯವಿದ್ದರು. ಮೃತ ಬಾಲಕಿಯರಿಬ್ಬರು ಸಂಬಂಧಿ ಗಳಾಗಿದ್ದು, ನಾಸಿಯಳು ಮೃತ ಆಶುರಾಳ ತಂದೆಯ ಅಕ್ಕನ ಮಗಳು.

ಮೃತದೇಹಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಉಳ್ಳಾಲದಿಂದ ಸಂಬಂಧಪಟ್ಟವರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಸಂದರ್ಭ ಆಸ್ಪತ್ರೆಯ ಬಳಿ ಹೆಚ್ಚಿನ ಮಂದಿ ಜಮಾಯಿಸಿದ್ದರು. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಾಯಕಾರಿ ಹೊಂಡಗಳು
ಪ್ರಸ್ತುತ ಬೇಸಗೆಯಲ್ಲಿ ನದಿಯಲ್ಲಿ ಬಹುತೇಕ ಭಾಗ ನೀರಿಲ್ಲದೇ ಇದ್ದರೂ ಕೆಲವೆಡೆ ನೀರಿರುವ ಪ್ರದೇಶವು ಹೆಚ್ಚು ಆಳದಿಂದ ಕೂಡಿರುತ್ತದೆ. ಅಲ್ಲಿ ನೀರಿಗಿಳಿಯುವುದು ಬಹಳ ಅಪಾಯಕಾರಿ. ಪ್ರಸ್ತುತ ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿರುವ ನೀರಕಟ್ಟೆ ಪ್ರದೇಶ ಕೂಡ ಹೆಚ್ಚು ಆಳದಿಂದ ಕೂಡಿದ ಪ್ರದೇಶವಾಗಿದ್ದು, ಇದು ಅಣೆಕಟ್ಟಿನ ಹಿನ್ನೀರು ಕೂಡ ಇಲ್ಲದ ಪ್ರದೇಶವಾಗಿದೆ.

2024ರಲ್ಲಿ 6 ಮಂದಿ ಸಾವು
ಬಂಟ್ವಾಳ ಭಾಗದಲ್ಲಿ ನೇತ್ರಾವತಿ ನದಿಯ ನೀರಿಗಿಳಿದು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, 2024ರಲ್ಲಿ ಒಟ್ಟು 6 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಳೆದ ಜನವರಿ 18ರಂದು ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನದಿ ಕಿನಾರೆಗೆ ಆಟವಾಡಲು ಹೋಗಿ ಬಾಲಕ ಪ್ರಜ್ವಲ್‌ ನಾಯಕ್‌ (14) ಮೃತಪಟ್ಟಿದ್ದರು. ಮಾ. 18ರಂದು ಶಂಭೂರಿನಲ್ಲಿ ಸ್ನೇಹಿತರ ಜತೆ ಈಜಲು ಬಂದ ಬೆಳ್ತಂಗಡಿಯ ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಶ್ವ (30) ಮೃತಪಟ್ಟಿದ್ದರು. ಮಾ. 31ರಂದು ನರಿಕೊಂಬು ಗ್ರಾಮದ ಪೊಯಿತ್ತಾಜೆಯಲ್ಲಿ ಈಜಲು ತೆರಳಿದ ಬಿಕ್ರೋಡಿ ನಿವಾಸಿ ಅನುಷ್‌(20) ಮೃತಪಟ್ಟಿದ್ದರು. ಎ. 20ರಂದು ಕಡೇಶ್ವಾಲ್ಯದ ನೆಚ್ಚಬೆಟ್ಟುನಲ್ಲಿ ಈಜಲು ತೆರಳಿದ್ದ ಬಾಲಕ ಸುಹೈಲ್‌(13) ಮೃತಪಟ್ಟಿದ್ದರು. ಪ್ರಸ್ತುತ ಇಬ್ಬರು ಹೆಣ್ಣು ಮಕ್ಕಳು ಸೇರಿ ಈ ವರ್ಷ ಈ ತನಕ ಒಟ್ಟು 6 ಮಂದಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಂತಾಗಿದೆ.

ಟಾಪ್ ನ್ಯೂಸ್

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

tejaswi surya

Hate speech case: ತೇಜಸ್ವಿ ಸೂರ್ಯ ಮನವಿ ತಿರಸ್ಕರಿಸಿದ ಸುಪ್ರೀಂ

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.