ಬಂಟ್ವಾಳ: ಅಜಿಲಮೊಗರಿನಲ್ಲಿ ಮಕ್ಕಳ ಕಿಡ್ನ್ಯಾಪ್ ಯತ್ನ.?
ಬಂಟ್ವಾಳ ಪೊಲೀಸರಿಂದ ತನಿಖೆ; ಕಾರಿನಲ್ಲಿ ಬಂದ ವ್ಯಕ್ತಿಯಿಂದ ಕಿಡ್ನ್ಯಾಪ್ ಯತ್ನ
Team Udayavani, Dec 14, 2022, 12:16 PM IST
ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.
ಡಿ. 14 ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಅಂಗಿಯನ್ನು ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ.
ಘಟನೆಯ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ಪೊಲೀಸರು ಘಟನೆಯ ಸತ್ಯಾಸತ್ಯತೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.