ಬಂಟ್ವಾಳ: ಶ್ರೀಗಂಧ ಮರ ಕಡಿದು ಮಾರಾಟ ಹಾಗೂ ‘ಉಡ’ ಭಕ್ಷಣೆಗೆ ಯತ್ನ: ಆರೋಪಿಗಳ ಬಂಧನ
Team Udayavani, Jun 25, 2021, 12:34 PM IST
ಬಂಟ್ವಾಳ: ರಕ್ಷಿತಾ ಅರಣ್ಯವೊಂದರಿಂದ ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಳವು ಮಾಡಿ ಕಡಿದು ಬಳಿಕ ಮಾರಾಟ ಮಾಡಲು ಯತ್ನಿಸಿದ ವೇಳೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ಚಾಳ ವಲಯ ಆರಣ್ಯಾಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಾತೂರು ನಿವಾಸಿ ಇಬ್ರಾಹಿಂ, ಹಾಗೂ ಇರಾ ಗ್ರಾಮದ ಮೊಯಿದ್ದೀನ್ ಬಂಧಿತ ಆರೋಪಿಗಳು. ಕಾರ್ಯಚರಣೆ ವೇಳೆ ಸಿದ್ದೀಕ್ ಹಾಗೂ ಸಿದ್ದೀಕ್ ಯಾನೆ ಕೊರಂಗು ಸಿದ್ದೀಕ್ ಎಂಬ ಇಬ್ಬರು ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಬ ರಕ್ಷಿತಾ ಅರಣ್ಯದಿಂದ ಆರೋಪಿಗಳು ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಡಿದು ತುಂಡು ಮಾಡಿ ಮಾರಟ ಮಾಡಲು ತಯಾರಿ ನಡೆಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಮಿಂಚಿನ ಕಾರ್ಯಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂದಾಜು ಮೂರು ಲಕ್ಷ ಮೌಲ್ಯದ ಗಂಧದ ಮರದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸ್ಥಳಕ್ಕೆ ಬೇಟಿ ನೀಡಿದ ಸಂಧರ್ಭದಲ್ಲಿ ಆರೋಪಿಗಳು ಕಾಡು ಪ್ರಾಣಿಯಾದ ಉಡವೊಂದನ್ನು ಹಿಡಿದು ಪದಾರ್ಥ ಮಾಡಲು ತಯಾರಿ ನಡೆಸುತ್ತಿದ್ದು, ಅ ಪ್ರಾಣಿಯನ್ನು ಕೂಡ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಸ್ಪಷ್ಟವಾದ ಮಾಹಿತಿ ತನಿಖೆಯ ಬಳಿಕ ತಿಳಿಯಬೇಕಾಗಿದೆ.
ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!
ಆರೋಪಿಗಳ ಬಂಧಿಸಿದ ಅರಣ್ಯಾಧಿಕಾರಿಗಳು ವಿಚಾರಣೆ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಅವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಯಶೋಧರ, ಪ್ರೀತಮ್ ಎಸ್, ಬಸಪ್ಪ ಹಲಗಾರ್, ಅರಣ್ಯ ರಕ್ಷಕರಾದ ಜಿತೇಶ್, ಶೋಭಿತ್, ದಯಾನಂದ, ರವಿ, ರೇಖಾ, ಅರಣ್ಯ ವೀಕ್ಷಕರಾದ ಪ್ರವೀಣ್, ಚಾಲಕರಾದ ಜಯರಾಮ್ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!