ಬಂಟ್ವಾಳ : ಶೆಡ್‌ ಮೇಲೆ ಕುಸಿದ ಗುಡ್ಡ : ಓರ್ವ ಸಾವು,ಮೂವರ ರಕ್ಷಣೆ


Team Udayavani, Jul 6, 2022, 10:23 PM IST

ಭಾರಿ ಮಳೆಗೆ ಮನೆಯ ಮೇಲೆ ಕುಸಿದ ಗುಡ್ಡ : ಓರ್ವನ ರಕ್ಷಣೆ, ಮೂವರಿಗಾಗಿ ಶೋಧ

ಬಂಟ್ವಾಳ: ಬಂಟ್ವಾಳ: ರಬ್ಬರ್‌ ಟ್ಯಾಪಿಂಗ್‌ ಕೆಲಸ ನಿರ್ವಹಿಸುವ ಕೇರಳ ಮೂಲದ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್‌ ಮೇಲೆ ಗುಡ್ಡ ಜರಿದು ಬಿದ್ದು ಓರ್ವ ಮೃತಪಟ್ಟು, ಮಣ್ಣಿನಡಿ ಸಿಲುಕಿಕೊಂಡಿದ್ದ ಮೂವರನ್ನು ರಕ್ಷಿಸಿದ ಘಟನೆ ಬುಧವಾರ ಸಂಜೆ 7ರ ಸುಮಾರಿಗೆ ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಸಂಭವಿಸಿದೆ. ಬಿಜು (46) ಮೃತಪಟ್ಟವರು.

ಪಂಜಿಕಲ್ಲಿನ ಸ್ಥಳೀಯ ಕೃಷಿಕರ ಮೂರ್ನಾಲ್ಕು ರಬ್ಬರ್‌ ತೋಟಗಳ ಟ್ಯಾಪಿಂಗ್‌ ಮಾಡುವ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಐವರು ಕಾರ್ಮಿಕರು ಮುಕ್ಕುಡ ನಿವಾಸಿ ಹೆನ್ರಿ ಕಾರ್ಲೊ ಅವರ ಶೆಡ್‌ನ‌ಲ್ಲಿ ಉಳಿದುಕೊಳ್ಳುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಮಲಗಿಕೊಂಡು ಮಾತುಕತೆಯಲ್ಲಿ ತೊಡಗಿದ್ದಾಗ ಏಕಾಏಕಿ ರಬ್ಬರ್‌ ಮರಗಳಿದ್ದ ಇಡೀ ಗುಡ್ಡವೇ ಶೆಡ್‌ ಮೇಲೆ ಬಿದ್ದಿತು. ಗುಡ್ಡ ಕುಸಿಯುವ ಶಬ್ದ ಕೇಳುತ್ತಿದ್ದಂತೆ ಅಖೀಲ್‌ ಅವರು ಹೊರಗೆ ಓಡಿ ಬಂದು ಅಪಾಯದಿಂದ ಪಾರಾದರು. ಉಳಿದವರು ಮಣ್ಣಿನಲ್ಲಿ ಸಿಲುಕಿಕೊಂಡರು.

ಜೋನ್‌ ಅವರನ್ನು ರಕ್ಷಿಸಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ, ಗಂಭೀರ ಗಾಯಗೊಂಡಿರುವ ಬಾಬು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಡ್ಡ ಕುಸಿಯುವ ವೇಳೆ ಓರ್ವ ಕಾರ್ಮಿಕ ಶೌಚಾಲಯದಲ್ಲಿದ್ದು, ತಡರಾತ್ರಿ ವರೆಗೆ ರಕ್ಷಣೆ ಸಾಧ್ಯವಾಗಿಲ್ಲ. ಶೆಡ್‌ ಹೊರಗೆ ನಿಲ್ಲಿಸಲಾಗಿದ್ದ ಕಾರು ಸೇರಿದಂತೆ ಇತ್ತರ ಸೊತ್ತುಗಳು ಜಖಂಗೊಂಡಿವೆ. ಹೆನ್ರಿ ಅವರ ಮನೆಯೂ ಶೆಡ್‌ ಇರುವ ಅಂಗಳದಲ್ಲೇ ಇದ್ದು ಘಟನೆಯಲ್ಲಿ ಮನೆಗೆ ಹಾನಿಯಾಗಿಲ್ಲ.

ಇದನ್ನೂ ಓದಿ : ಮುದ್ದೇಬಿಹಾಳ: ಶಿಕ್ಷಕನ ಮೇಲೆ ವಿದ್ಯಾರ್ಥಿನಿಯ ಪೋಷಕರಿಂದ ಗಂಭೀರ ಹಲ್ಲೆ : ಪ್ರಕರಣ ದಾಖಲು

ನಿರಂತರವಾಗಿ ಮೂರು ತಾಸಿಗೂ ಅಧಿಕ ಸಮಯ ಜೆಸಿಬಿ ಯಂತ್ರ ಬಳಸಿ ರಕ್ಷಣೆ ಕಾರ್ಯ ನಡೆಯಿತು. ಅಗ್ನಿಶಾಮಕ ಠಾಣೆಯವರು ಕೂಡ ಸಾಥ್‌ ನೀಡಿದ್ದರು.


ಶಾಸಕರ ಸೂಚನೆ
ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್ ಉಳಿಪ್ಪಾಡಿಗುತ್ತು ಘಟನೆಯ ಕುರಿತು ಮಾಹಿತಿ ಪಡೆದು ದ.ಕ. ಜಿಲ್ಲಾಧಿಕಾರಿ, ಸಹಾಯಕ ಕಮೀಷನರ್‌, ತಹಶೀಲ್ದಾರ್‌ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕಾರ್ಮಿಕರ ರಕ್ಷಣೆಗೆ ಸೂಚನೆ ನೀಡಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಎಸ್‌ಪಿ ಹೃಷಿಕೇಶ್‌ ಸೋನಾವಣೆ, ಮಂಗಳೂರು ಎಸಿ ಮದನಮೋಹನ್‌, ತಹಶೀಲ್ದಾರ್‌ ಡಾ| ಸ್ಮಿತಾ ರಾಮು, ಗ್ರಾಮಾಂತರ ಪೊಲೀಸ್‌ ಠಾಣಾ ಇನ್‌ಸ್ಪೆಕ್ಟರ್‌ ಟಿ.ಡಿ. ನಾಗರಾಜ್‌, ಪಿಎಸ್‌ಐ ಹರೀಶ್‌ ಕೆ.ಎ., ಪಂಜಿಕಲ್ಲು ಗ್ರಾ.ಪಂ. ಅಧ್ಯಕ್ಷ ಸಂಜೀವ ಪೂಜಾರಿ, ಪಿಡಿಒ ವಿದ್ಯಾಶ್ರೀ, ಗ್ರಾಮಕರಣಿಕ ಕುಮಾರ್‌, ಶಾಸಕರ ಆಪ್ತಸಹಾಯಕ ಶಿವಾನಂದ್‌, ಗ್ರಾ.ಪಂ. ಸದಸ್ಯರು, ಸ್ಥಳೀಯ ಮುಂದಾಳುಗಳು ಭೇಟಿ ನೀಡಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.