ಬಂಟ್ವಾಳ: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕ ಪೊಲೀಸ್ ವಶಕ್ಕೆ
Team Udayavani, Dec 11, 2022, 3:15 PM IST
ಬಂಟ್ವಾಳ: ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಡಿ.5 ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ತಲಪಾಡಿ ಎಂಬಲ್ಲಿ ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು.
ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ಚಾಲಕ ಪುರುಷೋತ್ತಮ ಹಾಗೂ ಪ್ರಯಾಣಿಕರಾಗಿದ್ದ ಹೃತಿಕ ಎಂಬರಿಗೆ ಗಾಯವಾಗಿತ್ತು. ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಿಕ್ಷಾ ಪಲ್ಟಿಯಾದ ಆರಂಭದಲ್ಲಿ ಘಟನೆಗೆ ಕಾರಣವೇನು ಎಂಬುದು ಅಸ್ಪಷ್ಟವಾಗಿತ್ತು. ಬಳಿಕ ಗಾಯಳುಗಳು ನೀಡಿದ ಮಾಹಿತಿಯಂತೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಬಗ್ಗೆ ಮಾಹಿತಿ ಲಭ್ಯವಾಯಿತು.
ಕೂಡಲೇ ಕಾರ್ಯಪ್ರವೃತ್ತರಾದ ಟ್ರಾಫಿಕ್ ಪೊಲೀಸರು ಸ್ಥಳೀಯ ಸಿ.ಸಿ.ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದಾಗ ಕಾರಿನ ನಂಬರ್ ಲಭ್ಯವಾಯಿತು. ಕಾರು ಅಪಘಾತಗೊಳಿಸಿದ ಬಳಿಕ ತಪ್ಪಿಸುವ ಸಲುವಾಗಿ ಬೇರೆ ಬೇರೆ ರಸ್ತೆಗಳ ಮೂಲಕ ಸಂಚಾರಿಸಿದ ಬಗ್ಗೆ ಪೊಲೀಸರಿಗೆ ಸಾಕ್ಷಿ ಲಭ್ಯವಾಗಿತ್ತು.
ಸಿಸಿ ಕ್ಯಾಮರಾದ ಕಣ್ಗಾವಲಿನಿಂದ ತಪ್ಪಿಸುವ ಸಲುವಾಗಿ ಬಿಸಿರೋಡಿನ ಮೊಡಂಕಾಪು ಹಾಗೂ ಇತರ ಕಡೆಗಳಲ್ಲಿ ಸುತ್ತಾಡಿ ಬಳಿಕ ಶಾಂತಿ ಅಂಗಡಿ ಮನೆಗೆ ತೆರಳಿದ ಬಗ್ಗೆ ಮಾಹಿತಿ ಆಧರಿಸಿ ಬಳಿಕ ಸುಮಾರು ದಿನದ ಬಳಿಕ ಆರೋಪಿ ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣದ ತನಿಖಾಧಿಕಾರಿಯಾದ ರಾಜು ಹಾಗೂ ತನಿಖಾ ಸಹಾಯಕ ನಾಗೇಶ್ ಕೆ.ಸಿ. ಅವರು ಅರೋಪಿ ಹಾಗೂ ಕಾರನ್ನು ಪತ್ತೆ ಹಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ