ಬಂಟ್ವಾಳ: ಒಣಗಲು ಹಾಕಿದ್ದ ಅಡಿಕೆ ಕಳವು: ಅಡಿಕೆ ಸಹಿತ ಆರೋಪಿ ಸೆರೆ
Team Udayavani, Jan 1, 2023, 11:54 PM IST
ಬಂಟ್ವಾಳ: ಪಾಣೆ ಮಂಗಳೂರಿನ ಬೋಳಂಗಡಿಯಲ್ಲಿ ತೋಟದ ಸಮೀಪದ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವಾದ ಘಟನೆ ಡಿ. 29ರಂದು ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಕಳವಾದ ಅಡಿಕೆ, ಸ್ಕೂಟರ್ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.
ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ಮಂಜುನಾಥ ನಾಗರಾಜ್ ಭೋವಿ (50) ಬಂಧಿತ. ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಅಡಿಕೆ ತೋಟದ ಮಾಲಕ ಐವನ್ ತೋರಸ್ ಪೊಲೀಸರಿಗೆ ದೂರು ನೀಡಿದ್ದು, ತಾನು ಒಣಗಲು ಹಾಕಿದ್ದ ಸುಮಾರು 120 ಕೆ.ಜಿ. ಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಎಸ್ಪಿ ಹಾಗೂ ಎಡಿಶನಲ್ ಎಸ್ಪಿ ನಿರ್ದೇಶನದಂತೆ ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಟ್ ಮಾರ್ಗದರ್ಶನ ದಲ್ಲಿ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು. ಡಿ. 30ರಂದು ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ಕಳವು ಮಾಡಿದ 105 ಕೆ.ಜಿ. ಅಡಿಕೆ, ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ ಠಾಣಾ ವ್ಯಾಪ್ತಿಯಲ್ಲೂ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…