ಬಂಟ್ವಾಳ : ಬೆಳ್ಳಂಬೆಳಗ್ಗೆ ಬೋಳಂತೂರಿನ ವ್ಯಕ್ತಿಯ ಮನೆ ಮೇಲೆ ಪೊಲೀಸರ ದಾಳಿ, ದಾಖಲೆ ಪರಿಶೀಲನೆ
Team Udayavani, Sep 22, 2022, 8:54 AM IST
ಬಂಟ್ವಾಳ: ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೋಲೀಸರ ತಂಡ ಗುರುವಾರ ಬೆಳಂಬೆಳಗ್ಗೆ ಬೊಳಂತೂರಿನ ವ್ಯಕ್ತಿಯೋರ್ವನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.
ಬೊಳಂತೂರು ನಿವಾಸಿ ಮಹಮ್ಮದ್ ಕುಂಟ್ಟಿ ಅವರ ಪುತ್ರ ಮಹಮ್ಮದ್ ತಪ್ಸೀರ್ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೋಲೀಸ್ ದಾಳಿ ನಡೆಸಿದೆ. ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದೆ ಎಂಬ ವಿಚಾರವನ್ನು ಪೋಲೀಸರು ಬಹಿರಂಗ ಪಡಿಸಿಲ್ಲ. ವಿಚಾರಣೆಯ ದೃಷ್ಟಿಯಿಂದ ಗೌಪ್ಯತೆ ಕಾಪಾಡಲು ರಾಜ್ಯ ಪೋಲೀಸರ ನಿರ್ದೇಶನದಂತೆ ಅವರು ಮಾಹಿತಿ ನೀಡುತ್ತಿಲ್ಲ ಎಂಬ ವಿಚಾರ ಲಭ್ಯವಾಗಿದೆ.
ರಾಜ್ಯದ ಪ್ರಕರಣವೊಂದಕ್ಕೆ ಹಲವು ವಿಚಾರಗಳನ್ನು ಕುರಿತು ಈ ದಾಳಿ ನಡೆದಿದ್ದು, ತಬ್ಸೀರ್ ಅವರಿಗೆ ಸೇರಿದ ಎರಡು ಮನೆಗಳಿಗೆ ಅಂದರೆ ಒಂದು ಹಳೆಯ ಮನೆ ಹಾಗೂ ಹೊಸ ಮನೆಗಳಿಗೆ ದಾಳಿ ನಡೆಸಿ ಅ ಪ್ರಕರಣಕ್ಕೆ ಸಂಬಂಧ ಎಲ್ಲಾ ಮಾಹಿತಿ ಕಲೆ ಹಾಕಲಾಗುತ್ತಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ನಗರ ಠಾಣಾ ಪೋಲೀಸ್ ಪಿಎಸ್ಐಗಳಾದ ಅವಿನಾಶ್, ಹರೀಶ್ ಸಹಿತ ಇಡೀ ಪೋಲೀಸ್ ತಂಡ ಇಲ್ಲಿ ಮೊಕ್ಕಾಂ ಇದ್ದು ಭದ್ರತೆ ಒದಗಿಸಿ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ : ಹುಣಸೂರು: ಹರಾಜು ನಿರ್ದೇಶಕ ಗೈರು, ಸಭೆ ಬಹಿಷ್ಕರಿಸಿದ ತಂಬಾಕು ಬೆಳೆಗಾರರು