ಬಂಟ್ವಾಳ ಪುರಸಭೆ ವ್ಯಾಪ್ತಿ: ಚರ್ಚೆಗೆ ಸೀಮಿತವಾಗಿರುವ ಬೀದಿ ಬದಿ ವ್ಯಾಪಾರ

ಘೋಷಣೆಯಾಗದ ವ್ಯಾಪಾರ ವಲಯ

Team Udayavani, Dec 22, 2022, 5:10 AM IST

ಬಂಟ್ವಾಳ ಪುರಸಭೆ ವ್ಯಾಪ್ತಿ: ಚರ್ಚೆಗೆ ಸೀಮಿತವಾಗಿರುವ ಬೀದಿ ಬದಿ ವ್ಯಾಪಾರ

ಬಂಟ್ವಾಳ: ಬಂಟ್ವಾಳ ತಾಲೂಕು ಕೇಂದ್ರ ಬಿ.ಸಿ.ರೋಡ್‌ ಸೇರಿದಂತೆ ಪುರಸಭೆ ವ್ಯಾಪ್ತಿಯ ಬಂಟ್ವಾಳ ಪೇಟೆ, ಮೆಲ್ಕಾರ್‌, ಕೈಕಂಬ ಭಾಗದಲ್ಲಿ ಬೀದಿಬದಿ ವ್ಯಾಪಾರದಿಂದಾಗುವ ತೊಂದರೆ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿರುವ ಪುರಸಭೆಯು ಅವರಿಗೆ ನಿರ್ದಿಷ್ಟ ವಲಯವನ್ನು ಇನ್ನೂ ಘೋಷಣೆ ಮಾಡದೇ ಇರುವುದರಿಂದ ಅವರು ಫ‌ುಟ್‌ಪಾತ್‌ಗಳಲ್ಲೇ ವ್ಯಾಪಾರ ಮಾಡಬೇಕಾದ ಸ್ಥಿತಿ ಇದೆ.

ಪುರಸಭೆ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳು ಸೇರಿದಂತೆ ಹಲವು ಭಾಗಗಳಲ್ಲಿ ದಿನ ಕಳೆದಂತೆ ರಸ್ತೆ ಬದಿಗಳಲ್ಲಿ ಸರಕುಗಳನ್ನಿಟ್ಟು ಮಾರಾಟ ಮಾಡುವ ವ್ಯಾಪಾರಿಗಳ ಸಂಖ್ಯೆ ಹೆಚ್ಚುತ್ತಿದ್ದು, ಪುರಸಭೆಯಿಂದ ಗುರುತಿನ ಚೀಟಿ ಪಡೆದವರ ಜತೆಗೆ ಪಡೆಯದವರು ಕೂಡ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದಾರೆ. ಬೀದಿ ಬದಿ ವ್ಯಾಪಾರಿಗಳ ವಲಯವಿಲ್ಲದೆ ಅವರನ್ನು ವ್ಯಾಪಾರ ಮಾಡುತ್ತಿರುವ ಸ್ಥಳದಿಂದ ಎಬ್ಬಿಸುವಂತೆಯೂ ಇಲ್ಲ ಎನ್ನಲಾಗುತ್ತಿದೆ.

ಅರ್ಧಕ್ಕೆ ನಿಂತ ವಲಯ ಗುರುತು ಕೆಲಸ
ಪುರಸಭೆಯ ಪ್ರತೀ ಸಾಮಾನ್ಯ ಸಭೆಗಳಲ್ಲೂ ಬೀದಿ ಬದಿ ವ್ಯಾಪಾರದ ಕುರಿತು ಸಾಕಷ್ಟು ಚರ್ಚೆ ಯಾಗುತ್ತಿದ್ದು, ನಿರ್ದಿಷ್ಟ ಸ್ಥಳವನ್ನು ಗುರುತು ಮಾಡಿ ಅವರ ವಲಯವನ್ನಾಗಿ ಘೋಷಣೆ ಮಾಡುವ ಕಾರ್ಯ ನಡೆದಿಲ್ಲ. ಈ ಹಿಂದೆ ಪುರಸಭೆ ವ್ಯಾಪ್ತಿಯ ತಲಪಾಡಿ, ಬಂಟ್ವಾಳ ಪೇಟೆಯ ಕೊಟ್ರಮ್ಮನಗಂಡಿ, ಬಡ್ಡಕಟ್ಟೆ ಭಾಗದಲ್ಲಿ ಬೀದಿ ಬದಿ ವ್ಯಾಪಾರಿ ವಲಯ ಮಾಡುವ ಪ್ರಸ್ತಾವವಿದ್ದರೂ ಯಾವುದೂ ಕೂಡ ಅನುಷ್ಠಾನಕ್ಕೆ ಬಂದಿಲ್ಲ.

ಬಿ.ಸಿ.ರೋಡ್‌ನ‌ ತಲಪಾಡಿಯಲ್ಲಿ ವ್ಯಾಪಾರಿ ವಲಯ ಮಾಡುವ ಪ್ರಸ್ತಾವ ಅಂತಿಮಗೊಂಡಿದೆ ಎಂಬ ಮಾತು ಕೇಳಿಬಂದಿದ್ದರೂ, ಅದು ಕೂಡ ಹಾಗೇ ಉಳಿದುಕೊಂಡಿದೆ. ಸಾಮಾನ್ಯವಾಗಿ ಒಂದು ಪ್ರದೇಶವನ್ನು ಬೀದಿ ಬದಿ ವ್ಯಾಪಾರಿಗಳ ವಲಯ ಎಂದು ಘೋಷಣೆ ಮಾಡಿದರೆ ಅದಕ್ಕೆ ಬೇಕಾದ ಮೂಲ ಸೌಕರ್ಯವನ್ನು ನೀಡುವ ಕಾರ್ಯವನ್ನೂ ಪುರಸಭೆ ಮಾಡಬೇಕಾಗುತ್ತದೆ. ಇಲ್ಲದೇ ಇದ್ದರೆ ಬೀದಿ ಬದಿ ವ್ಯಾಪಾರ ಅಧಿನಿಯಮ ಕಾಯ್ದೆಯನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ.

ರವಿವಾರ ಅನಧಿಕೃತ ಸಂತೆ
ಬಿ.ಸಿ.ರೋಡ್‌ನ‌ಲ್ಲಿ ಪ್ರತೀ ರವಿವಾರ ನಡೆಯುವ ಅನಧಿಕೃತ ಸಂತೆಯ ಕುರಿತೇ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ಅವರಿಗೆ ವ್ಯಾಪಾರ ಮಾಡಲು ಅವಕಾಶ ಕೊಟ್ಟವರು ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಎಲ್ಲಿಂದಲೋ ಬಂದ ವ್ಯಾಪಾರಿಗಳು ಬಿ.ಸಿ.ರೋಡ್‌ನ‌ ಹೆದ್ದಾರಿ ಬದಿ, ಫ್ಲೆ$çಓವರ್‌ ತಳಭಾಗದಲ್ಲಿ ತರಕಾರಿ, ದಿನಸಿ ಸಾಮಗ್ರಿ, ಹಣ್ಣುಹಂಪಲು ವ್ಯಾಪಾರ ಮಾಡುತ್ತಿದ್ದು, ಆದರೆ ಅವರ್ಯಾರು ಕೂಡ ಪುರಸಭೆಯಿಂದ ಗುರುತಿನ ಚೀಟಿ ಪಡೆದ ವ್ಯಾಪಾರಿಗಳಲ್ಲ ಎನ್ನಲಾಗುತ್ತಿದೆ.

ಅವರು ಪುರಸಭೆಯಿಂದ ಲೈಸನ್ಸ್‌ ಪಡೆದ ಅಂಗಡಿಗಳ ಮುಂದೆಯೇ ಅನಧಿಕೃತ ವ್ಯಾಪಾರ ಮಾಡುತ್ತಿದ್ದರೂ ಪುರಸಭೆ ಸುಮ್ಮನಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ರೀತಿಯ ವ್ಯಾಪಾರದಿಂದ ಹೆದ್ದಾರಿ ಬದಿ ನಡೆದುಕೊಂಡು ಹೋಗುವವರಿಗೆ ತೊಂದರೆಯಾಗುವ ಜತೆಗೆ ವಾಹನಗಳ ಪಾರ್ಕಿಂಗ್‌ಗೆ ಅಡ್ಡಿಯಾಗುತ್ತಿದೆ. ಎಲ್ಲೆಂದರಲ್ಲಿ ವ್ಯಾಪಾರ ಮಾಡುವ ಬೀದಿ ಬದಿ ವ್ಯಾಪಾರಿಗಳು ನಿರ್ದಿಷ್ಟ ವಲಯಕ್ಕೆ ಹೋದರೆ ಉಳಿದಂತೆ ಈ ರೀತಿಯ ಅನಧಿಕೃತ ವ್ಯಾಪಾರಗಳಿಗೆ ಬ್ರೇಕ್‌ ಹಾಕುವುದಕ್ಕೆ ಸುಲಭವಾಗಲಿದೆ.

ಅನಧಿಕೃತ ವ್ಯಾಪಾರದ ವಿರುದ್ಧ ಕ್ರಮ
ಪ್ರಸ್ತುತ ಗುರುತಿನ ಚೀಟಿ ಪಡೆದಿರುವ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ಸಮಸ್ಯೆ ಇಲ್ಲ. ಅವರು ಫ‌ುಟ್‌ಪಾತ್‌ ಅತಿಕ್ರಮಿಸಿದ್ದರೆ ಅದನ್ನು ತೆರವು ಮಾಡುತ್ತೇವೆ. ಪ್ರಸ್ತುತ ಗುರುತಿನ ಚೀಟಿ ಪಡೆಯದೆ ಅನಧಿಕೃತ ವ್ಯಾಪಾರ ಮಾಡುತ್ತಿರುವವರಿಂದ ತೊಂದರೆಯಾಗುತ್ತಿದ್ದು, ಅದರ ವಿರುದ್ಧ ಕಾರ್ಯಾಚರಣೆ ನಡೆಸಲಿದ್ದೇವೆ. ವಲಯ ಘೋಷಣೆಯ ಕುರಿತು ಈಗಾಗಲೇ 2-3 ಮೂರು ಸ್ಥಳಗಳನ್ನು ಪರಿಶೀಲನೆ ನಡೆಸಿದ್ದೇವೆ.
-ಮಹಮ್ಮದ್‌ ಶರೀಫ್‌, ಅಧ್ಯಕ್ಷರು, ಬಂಟ್ವಾಳ ಪುರಸಭೆ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.