ಬಂಟ್ವಾಳ: ರಿಕ್ಷಾಕ್ಕೆ ಟಿಪ್ಪರ್ ಢಿಕ್ಕಿ ಹೊಡೆದು ವೃದ್ಧ ಮಹಿಳೆ ಗಂಭೀರ
Team Udayavani, Dec 14, 2022, 7:21 PM IST
ಬಂಟ್ವಾಳ: ಟಿಪ್ಪರ್ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ವೃದ್ಧ ಮಹಿಳೆ ಗಂಭೀರ ಗಾಯಗೊಂಡು, ಮಗು, ಚಾಲಕ ಸಹಿತ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿರೋಡು ಸಮೀಪದ ಮೊಡಂಕಾಪುವಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಈ ರಿಕ್ಷಾವನ್ನು ಅಶ್ರಫ್ ಎಂಬವರು ಚಲಾಯಿಸುತ್ತಿದ್ದು, ರಿಕ್ಷಾ ಪ್ರಯಾಣಿಕರನ್ನು ಕೈಕಂಬ ಕಡೆಯಿಂದ ಮೊಡಂಕಾಪು ಕಡೆಗೆ ಕರೆದೊಯ್ಯುತ್ತಿತ್ತು, ಈ ವೇಳೆ ಮೊಡಂಕಾಪು ಕಡೆಯಿಂದ ಬಂದ ಟಿಪ್ಪರ್ ಲಾರಿ, ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದು, ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ.
ಅಪಘಾತದ ತೀವ್ರತೆಗೆ ರಿಕ್ಷಾ ನುಜ್ಜುಗುಜ್ಜಾಗಿದ್ದು, ರಿಕ್ಷಾದಲ್ಲಿದ್ದ ವೃದ್ಧ ಮಹಿಳೆ ಅವ್ವಮ್ಮ(70) ಗಂಭೀರ ಗಾಯಗೊಂಡಿದ್ದು ಸಂಬಂಧಿಕರಾದ 6 ವರ್ಷದ ಮಗು ಹಾಗೂ ಇನ್ನಿಬ್ಬರು ಮಹಿಳೆಯರಿಗೆ ಹಾಗೂ ರಿಕ್ಷಾ ಚಾಲಕ ಅಶ್ರಫ್ ಅವರಿಗೆ ಗಾಯಗಳಾಗಿದೆ.
ಮೆಲ್ಕಾರ್ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ‘ಪಠಾಣ್’ ಬ್ಯಾನ್ ಮಾಡಬೇಕಾಗುತ್ತದೆ; ಮಧ್ಯ ಪ್ರದೇಶ ಸಚಿವ ಮಿಶ್ರಾ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ