ಬಂಟ್ವಾಳ: ಪಾದಚಾರಿ ಸಾವಿಗೆ ಕಾರಣನಾಗಿ ತಲೆ ಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಬಂಧನ
Team Udayavani, Oct 9, 2022, 10:00 PM IST
ಬಂಟ್ವಾಳ: ಪಾದಚಾರಿಗೆ ಢಿಕ್ಕಿ ಹೊಡೆದು ಸಾವಿಗೆ ಕಾರಣನಾಗಿ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಟ್ರಾಫಿಕ್ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ತಮಿಳುನಾಡು ಮೂಲದ ಪೆರಂಬದೂರು ಜಿಲ್ಲೆಯ ವೇಪನ್ ತಾಲೂಕಿನ ಪೆರಿಯಾ ವಡಗರೈ ನಿವಾಸಿ ಸೆಲ್ವರಾಜ್ (44) ಎಂಬಾತನನ್ನು ಆಂಧ್ರಪ್ರದೇಶದ ಕಡಪದಲ್ಲಿ ಪೋಲಿಸರು ಬಂಧಿಸಿದ್ದಾರೆ.
ಆರೋಪಿ ಸೇಲ್ವರಾಜ್ 2017 ರಲ್ಲಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಬಿಸಿರೋಡು ಕೈಕಂಬದ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಸೆಲ್ವರಾಜ್ ಚಲಾಯಿಸುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದ.
ಆರೋಪಿ ಯನ್ನು ಟ್ರಾಫಿಕ್ ಎಸ್ಐ ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬಂದಿ ಗಳಾದ ದೇವದಾಸ್ ಹಾಗೂ ರಾಜು ಅವರು ಅಂಧ್ರ ಪ್ರದೇಶದಿಂದ ಬಂಧಿಸಿ ಕರೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ