ಗ್ರಾಮಾಂತರ ಪ್ರದೇಶಗಳಿಗೆ ಬಾರ್‌ಗಳ ‘ಭಾರ’


Team Udayavani, Jul 7, 2017, 3:40 AM IST

Liqour-Ban-28-6.jpg

ಬಂಟ್ವಾಳ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಿಂದ ಬಾರ್‌ ಮತ್ತು ಮದ್ಯ ಮಾರಾಟದ ಅಂಗಡಿಗಳನ್ನು ತೆರವುಗೊಳಿಸಬೇಕೆಂಬ ಆದೇಶದ ಹಿನ್ನೆಲೆಯಲ್ಲಿ ಪಟ್ಟಣದಿಂದ ದೂರದ ಹಳ್ಳಿ ಪ್ರದೇಶಗಳಲ್ಲಿ ಬಾರ್‌/ಮದ್ಯದಂಗಡಿಗಳ ಹಾವಳಿ ಹೆಚ್ಚಾಗುವ ಭೀತಿ ಉಂಟಾಗಿದೆ. ಮದ್ಯದಂಗಡಿಗಳನ್ನು ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ. ರಾಜ್ಯ, ರಾಷ್ಟ್ರೀಯ ಹೆದ್ದಾರಿ ಬದಿ ಮದ್ಯ ಸಿಗುತ್ತಿಲ್ಲವಾದ ಕಾರಣ ಮದ್ಯಪ್ರಿಯರು ಒಳರಸ್ತೆಗಳತ್ತ ತಮ್ಮ ನೋಟ ಹಾಯಿಸಿದ್ದಾರೆ. ಗ್ರಾಮಾಂತರ ಭಾಗದ ಕೆಲವೆಡೆ ತೋಟದ ಪರಿಸರವೂ ಮದ್ಯದಂಗಡಿಗಳಾಗುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ಹೇರಿಕೆಯಲ್ಲವೆ
ಈಗಾಗಲೇ ವೈನ್‌ಶಾಪ್‌ ಅಥವಾ ಬಾರ್‌ ಇರುವ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಮತ್ತೆ ಮದ್ಯದಂಗಡಿ, ಬಾರ್‌ಗಳನ್ನು ಆರಂಭಿಸಿದರೆ(ಸ್ಥಳಾಂತರ) ಆ ಪ್ರದೇಶಗಳ ಮೇಲೆ ಹೆಚ್ಚುವರಿಯಾಗಿ ಹೇರಿಕೆ ಮಾಡಿದಂತಾಗುತ್ತದೆ ಎಂಬುದು ನಾಗರಿಕರ  ಅಭಿಪ್ರಾಯವಾಗಿದೆ. ಹಣ ತೊಡಗಿಸಿರುವ ಮಾಲಕರು, ಅದರಲ್ಲಿ ದುಡಿಯುತ್ತಿದ್ದ ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಹಾಗಂತ ಮನಬಂದಂತೆ ಪರವಾನಿಗೆ ನೀಡಿದರೆ ಹಳ್ಳಿಗಳಲ್ಲಿ ಮದ್ಯದ ಹೊಳೆ ಹರಿಸಿದಂತಾಗುತ್ತದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಸರಕಾರಕ್ಕೆ ಫೋರಂ ಮನವಿ 
ವೈನ್‌ಶಾಪ್‌ಗ್ಳಿಗೆ ಗ್ರಾಮಾಂತರ ಪ್ರದೇಶದಲ್ಲಿ ಪರವಾನಿಗೆ ನೀಡುವುದಕ್ಕೆ ಆಕ್ಷೇಪಿಸಿ ಡಿ.ಕೆ.ಡಿಸ್ಟ್ರಿಕ್ಟ್ ಅಂಬೇಡ್ಕರ್‌ ಫೋರಂ ಫಾರ್‌ ಸೋಷಿಯಲ್‌ ಜಸ್ಟೀಸ್‌ ದ.ಕ. ಜಿಲ್ಲಾಧಿಕಾರಿ, ಸಚಿವರು ಮತ್ತು ರಾಜ್ಯ ಸರಕಾರಕ್ಕೆ  ಮನವಿ ಸಲ್ಲಿಸಿದೆ. ಇದೇ ರೀತಿಯಲ್ಲಿ ಹಲವು ಸಂಘಟನೆಗಳು, ಸಾಮಾಜಿಕ ಸೇವಾಕರ್ತರು ಕೂಡ ಮನವಿ ಸಲ್ಲಿಸಿದ್ದಾರೆ. ಒಂದೆಡೆ ಸರಕಾರದ ಬೊಕ್ಕಸಕ್ಕೆ ಆದಾಯ, ಇನ್ನೊಂದೆಡೆ ಮಾಲಕರು, ಕಾರ್ಮಿಕರ ಹಿತ ರಕ್ಷಣೆ, ಮತ್ತೂಂದೆಡೆ ಗ್ರಾಮೀಣ ಜನರ ವಿರೋಧ ಎದುರಿಸುವ ಸ್ಥಿತಿ ಸರಕಾರದ್ದು. ನ್ಯಾಯಾಲಯ ಇದೀಗ ಡಿನೋಟಿಫೈಗೆ ರಾಜ್ಯ ಸರಕಾರಗಳಿಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಗ್ರಾಮಾಂತರದಲ್ಲಿ ಬಾರ್‌ಗಳ ಭಾರ ಕಡಿಮೆಯಾಗಬಹುದು ಎಂಬ ನಿರೀಕ್ಷೆ ಸಾರ್ವಜನಿಕರದ್ದು.  

ಹೊಸಬರಿಗೆ ಚಟ
ಹಳ್ಳಿಗಳಿಗೆ ಸ್ಥಳಾಂತರಿಸುವುದರಿಂದ ಇದುವರೆಗೆ ಚಟ ಹತ್ತಿಸಿಕೊಳ್ಳದ ಮಂದಿಗೆ ಸರಕಾರವೇ ಅವಕಾಶ ಮಾಡಿಕೊಟ್ಟಂತಾಗುವುದಿಲ್ಲವೇ ಎಂದು ಜನತೆ ಪ್ರಶ್ನಿಸುವಂತಾಗಿದೆ. ‘ಸಾಕಷ್ಟು ಹಣ ಇನ್‌ವೆಸ್ಟ್‌ ಮಾಡಿದ್ದೇವೆ. ಸಾಮಾಜಿಕ ಅನಿಷ್ಟ ಎನ್ನುವುದಾದರೆ ಸಾರ್ವತ್ರಿಕ ಬಹಿಷ್ಕರಿಸಬೇಕು. ಕೇರಳ ಮಾದರಿಯಲ್ಲಿ ಸರಕಾರವೇ ಹಂಚಿಕೆ ನಡೆಸಬೇಕು ಎನ್ನುತ್ತಾರೆ ಮಾಲಕರು.

ಒಂದಿಲ್ಲದೆ ಇನ್ನೊಂದಿಲ್ಲ
ಅನೇಕರು ಬಾರ್‌ ಎಂಡ್‌ ರೆಸ್ಟೋರೆಂಟ್‌ಗಳನ್ನು ಹೊಂದಿದ್ದು ಬಾರ್‌ ಅಥವಾ ರೆಸ್ಟೋರೆಂಟ್‌ ಇವೆರಡರಲ್ಲಿ ಒಂದನ್ನು ಮಾತ್ರ ನಡೆಸಿದರೆ ಯಾವುದೇ ಲಾಭವಾಗುತ್ತಿಲ್ಲ ಎಂದು ಕೂಡ ಹೇಳುತ್ತಾರೆ. ‘ನಮಗೆ ಸೂಕ್ತ ಪರಿಹಾರ ಒದಗಿಸಲಿ’ ಎನ್ನುತ್ತಾರೆ ಬಾರ್‌, ವೈನ್‌ಶಾಪ್‌ ಮಾಲಕರು.

23 ವೈನ್‌ಶಾಪ್‌ಗಳ ಸ್ಥಳಾಂತರ 
ಬಂಟ್ವಾಳ ತಾಲೂಕಿನಲ್ಲಿ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ 23 ಬಾರ್‌ ವೈನ್‌ಶಾಪ್‌ ಸ್ಥಳಾಂತರ ಆಗಿದೆ. 34 ಘಟಕಗಳ ಪರವಾನಗಿ ನವೀಕರಿಸಲಾಗಿದೆ. ಸಿದ್ಧಕಟ್ಟೆ ಮತ್ತು ಮಾರ್ನಬೈಲ್‌ನಲ್ಲಿ ಹೊರ ತಾಲೂಕಿನಿಂದ ಸ್ಥಳಾಂತರಿತ ಬಾರ್‌ ತೆರೆಯಲ್ಪಟ್ಟಿವೆ. ಸರಕಾರದ ಎಂಎಸ್‌ಐಎಲ್‌ ಮೂರು ಘಟಕ ಮಂಜೂರಾಗಿದ್ದು ಅದರಲ್ಲಿ ವಿಟ್ಲ ಪಟ್ನೂರು ಮತ್ತು ಕೆದಿಲ ಘಟಕ ಆರಂಭವಾಗಿದೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.