ಸೌಕರ್ಯ ವಂಚಿತ ಪುಷ್ಪಗಿರಿ ತಪ್ಪಲಿನ ಗ್ರಾಮಗಳೀಗ ಅನಾಥ


Team Udayavani, May 15, 2018, 8:55 AM IST

Mula-Saukarya-15-5.jpg

ಸುಬ್ರಹ್ಮಣ್ಯ: ಮೊಬೈಲ್‌ ಸಿಗ್ನಲ್‌ ದೊರೆಯದ ದಟ್ಟಾರಣ್ಯ. ಒಂದು ಸೈಕಲ್‌ ಕೂಡ ಸಾಗಲು ಕಷ್ಟವಿರುವ ಹದಗೆಟ್ಟ ಸಂಪರ್ಕ ರಸ್ತೆ, ವರ್ಷಗಳೇ ಕಳೆದರೂ ಈಡೇರದ ಸೇತುವೆ ಕನಸು. ಮನೆ ಅಂಗ ಳಕ್ಕೂ ಕಾಲಿಡುವ ಕಾಡು ಪ್ರಾಣಿಗಳು! ಇದು ಸುಳ್ಯ ತಾಲೂಕಿನ ಕಟ್ಟಕಡೆಯ ಕುಗ್ರಾಮ ಕಲ್ಮಕಾರು-ಕೊಲ್ಲಮೊಗ್ರು ಈ ಎರಡು ಅವಳಿ ಕಂದಾಯ ಗ್ರಾಮಗಳಲ್ಲಿನ ದುಸ್ತಿತಿ. ಮೂಲಸೌಕರ್ಯವಿಲ್ಲದ ಊರಿನಲ್ಲಿ ಶತಮಾನಗಳಿಂದಲೂ ಇಲ್ಲಿನ ಜನರ ಬದುಕು ಮುದುಡುತ್ತಿದೆ.

ದ.ಕ. ಕೊಡಗು ಗಡಿಭಾಗದ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯಲ್ಲಿ ಸುಳ್ಯ ತಾಲೂಕು ಕೇಂದ್ರದಿಂದ 40 ಕಿ.ಮೀ ದೂರದಲ್ಲಿದೆ ಈ ಪ್ರದೇಶ. ಈ ಎರಡು ಕಂದಾಯ ಊರುಗಳು ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಬಿದ್ದಿವೆ. ಸೇತುವೆ, ರಸ್ತೆ, ಕಾಲನಿಗಳ ಅಭಿವೃದ್ಧಿ, ಶೌಚಾಲಯ ಇತ್ಯಾದಿಗಳನ್ನು ಹೊಂದುವಲ್ಲಿ ಹಿಂದೆ ಬಿದ್ದಿದೆ. ಅವಳಿ ಗ್ರಾಮಗಳಲ್ಲಿ 466ರಕ್ಕೂ ಅಧಿಕ ಮನೆಗಳಿದ್ದು 3,008 ಜನಸಂಖ್ಯೆಯಿದೆ. ಇವರೆಲ್ಲರದು ಕೃಷಿ ಕಸುಬು. ಅಡಿಕೆ ಇಲ್ಲಿಯ ಪ್ರಮುಖ ಬೆಳೆ.

ಹತ್ತಾರು ವರ್ಷಗಳಿಂದ ಇಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ ಇಲ್ಲಿಯವರು. ಆದರೆ ಅರಣ್ಯ ಸಂರಕ್ಷಣೆಯಲ್ಲಿ ಬರುವ ಸೂಕ್ಷ್ಮ ವಲಯ ಕಾಯ್ದೆ, ಕಾಡು ಪ್ರಾಣಿಗಳ ಹಾವಳಿ ಒಂದೆಡೆ ಕಂಗೆಡಿಸಿದ್ದರೆ ಸಂಪರ್ಕ ರಸ್ತೆಗಳು, ಸೇತುವೆಗಳು ಸುಸೂತ್ರವಾಗಿಲ್ಲದೆ ಇರುವುದು ಇಲ್ಲಿನ ನಿತ್ಯದ ಗೋಳಾಗಿ ಹೋಗಿದೆ. ಹತ್ತೂರೊಟ್ಟಿಗೆ ಹನ್ನೊಂದರಂತೆ ಸಮಸ್ಯೆ ಸಹಿಸಿಕೊಂಡು ಬದುಕುತ್ತಿದ್ದೇವೆ ಎನ್ನುವ ಇಲ್ಲಿಯವರಿಗೆ ದುಸ್ತರ ಬದುಕಿನಿಂದ ಕಾಲ್ನಡಿಗೆ ಅಭ್ಯಾಸವಾಗಿಬಿಟ್ಟಿದೆ.


ಬಸ್‌ ಸಂಚಾರ ಇಲ್ಲ

ತೀರಾ ಹದೆಟ್ಟ ಈ ಊರಿಗೆ ಸರಕಾರಿ ಬಸ್ಸುಗಳು ಬರಲು ಒಪ್ಪುವುದಿಲ್ಲ, ದಿನಕ್ಕೆ ಒಂದೆರಡು ಬಸ್ಸುಗಳು ಬರುತ್ತವೆ. ಉಳಿದಂತೆ ಎಲ್ಲರು ಖಾಸಗಿ ವಾಹನಗಳನ್ನೆ ಅವಲಂಭಿಸಿಕೊಂಡಿದ್ದಾರೆ. ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಸೇತುವೆಗಳಿಲ್ಲದೆ ಮಳೆಗಾಲದಲ್ಲಿ ಸಂಕಷ್ಟ ಪಡುತ್ತಿರುತ್ತಾರೆ. ಮಕ್ಕಳು, ಇಳಿವಯಸ್ಸಿನವರು, ಮಹಿಳೆಯರು ಜೀವ ಅಭದ್ರತೆಯಲ್ಲಿ ದಿನ ಕಳೆಯುತ್ತಿದ್ದಾರೆ. ಈ ಊರಿನ ಮಂದಿ ತಮ್ಮೂರಿಗೆ ಸೇತುವೆಗಾಗಿ ಎದುರು ನೋಡುತ್ತಿದ್ದಾರೆ.

ಇಚ್ಚಾಶಕ್ತಿಯ ಕೊರತೆ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯತ್‌ಗೆ ಸೇರಿದ ಕಡಮಕಲ್ಲು ಎಂಬಲ್ಲಿ ಸುಮಾರು 200 ಕುಟುಂಬಗಳು ವಾಸಿಸುತ್ತಿವೆ. ಪಡಿತರ ಸಹಿತ ಇನ್ನಿತರ ಮೂಲ ಸವಲತ್ತುಗಳಿಗೆ ಈ ಕುಟುಂಬಗಳ ಸದಸ್ಯರು ಗಾಳಿಬೀಡಿಗೆ ತೆರಳಬೇಕು. ಅದಕ್ಕಾಗಿ ಕಡಮಕಲ್ಲಿನಿಂದ ನೇರ ದಾರಿಯಿಲ್ಲ. 40 ಕಿ.ಮೀ ಬದಲಿಗೆ ಸುಳ್ಯ ನಗರ ಮೂಲಕ 140 ಕಿ.ಮೀ ದೂರ ಸುತ್ತಿ ತೆರಳಬೇಕು. ಬಳಸಿ ಸಾಗುವ ವೇಳೆ ಸಮಯ ಹಾಗೂ ಹಣ ವ್ಯರ್ಥ. ಮಡಿಕೇರಿ-ಗಾಳಿಬೀಡು-ಕಡಮಕಲ್ಲು-ಸುಬ್ರಹ್ಮಣ್ಯ ಈ ಕಚ್ಚಾ ರಸ್ತೆ ಅಭಿವೃದ್ಧಿ ಆದಲ್ಲಿ ಎರಡು ಗ್ರಾಮಗಳು ಅಭಿವೃದ್ಧಿಯಾಗುತ್ತವೆ. ಇದಕ್ಕೆ ಜನಪ್ರತಿನಿಧಿಗಳಿಗೆ ಇಚ್ಚಾಶಕ್ತಿಬೇಕು.


ಕಷ್ಟದ ಜೀವನ

ಈ ಭಾಗದಲ್ಲಿ ಬಹುತೇಕ ದಿನಗಳಲ್ಲಿ ಮೊಬೈಲ್‌ ಸಂಪರ್ಕ ಸೇವೆ ಇರುವುದಿಲ್ಲ. ವಿದ್ಯುತ್‌ ಸರಬರಾಜುಗಳು ಇರುವುದಿಲ್ಲ. ಪ್ರತಿನಿತ್ಯ ಕಾಡು ಪ್ರಾಣಿಗಳು ಕೃಷಿ ತೋಟಗಳಿಗೆ ಧಾವಿಸಿ ಬಂದು ಕೃಷಿ ಫಸಲು ನಾಶ ಪಡಿಸುತ್ತಿದೆ. ಕೃಷಿಕರು ಕೃಷಿ ನಡೆಸಲು ಸಾಧ್ಯವಾಗದೆ ಸ್ಥಿತಿ ಒಂದೆಡೆಯಾದರೆ ಮತ್ತೂಂದು ಕಡೆ ಬೆಳೆಗಳಿಗೆ ಭಾಧಿಸುವ ವಿವಿಧ ರೋಗಗಳು, ಅಡಿಕೆಗೆ ಹಸಿರು ಕೊಳೆ ರೋಗ, ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಇಲ್ಲಿ ಜೀವನ ಸಾಗಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.

ವ್ಯರ್ಥ ಹೊರಾಟ
ಕಾಡನಂಚಿನ ಇಲ್ಲಿನ ಜನರು ನಾಗರಿಕತೆಯಿಂದ ತುಂಬಾ ದೂರವಿರುವಂತೆ ಬದುಕುತ್ತಿದ್ದಾರೆ. ಪೂರ್ಣ ಪ್ರಮಾಣದಲ್ಲಿ ನಾಗರಿಕತೆಗೆ ಈ ಊರು ಇನ್ನು ತೆರೆದುಕೊಂಡಿಲ್ಲ. ಹೀಗಾಗಿ ಇಲ್ಲಿಯ ಬಹುತೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಪುಷ್ಪಗಿರಿ ತಪ್ಪಲಿನ ಕೊಲ್ಲಮೊಗ್ರು, ಕಲ್ಮಕಾರು ಈ ಎರಡು ಗ್ರಾಮಗಳು ಪರಿಸರ ಸಂರಕ್ಷಣೆಯ ಸೂಕ್ಷ್ಮ ವಲಯ ವ್ಯಾಪ್ತಿಗೆ ಸೇರಿದ ಬಳಿಕ ಈ ಭಾಗದವರು ಭಾರಿ ಹೋರಾಟಗಳನ್ನು ನಡೆಸಿದ್ದರು. ಕಾನೂನು ಸೇರಿದಂತೆ ಹಲವಾರು ಹೋರಾಟಗಳಿಗೆ ಧುಮುಕಿದ್ದ ಇಲ್ಲಿಯವರು ಚುನಾವಣೆಗಳ ಸಂದರ್ಭ ಮತದಾನ ಬಹಿಷ್ಕಾರದಂತಹ ಬೆದರಿಕೆಗಳನ್ನು ಒಡ್ಡಿದ್ದರು. ಆದರೆ ಮತದಾನದಿಂದ ದೂರ ಸರಿಯದೇ ಅಭಿವೃದ್ಧಿಯ ಆಶಾವಾದವನ್ನು ಇಟ್ಟುಕೊಂಡಿದ್ದಾರೆ.

ಮಕ್ಕಳ ಕೊರತೆ
ಕಡಮಕಲ್ಲು ಎಂಬಲ್ಲಿ ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆಯ ಸರಕಾರಿ ಶಾಲೆ ಕಾರ್ಯಚರಿಸುತ್ತಿತ್ತು. ಇದು ಕಡಮಕಲ್ಲು ಭಾಗದ ಜನತೆಗೆ ಉಪಯುಕ್ತವಾಗಿತ್ತು. ಮೂಲಸೌಕರ್ಯವಿಲ್ಲದೆ ಇರುವ ಈ ಶಾಲೆ ಈಗ ಪಾಳು ಬಿದ್ದಿದೆ. ಹಳೆ ಕಟ್ಟಡ ಕೆಡವದೆ ಉಳಿಸಿಕೊಳ್ಳಲಾಗಿದೆ. ಪಕ್ಕದ ಹೊಸ ಕಟ್ಟಡದಲ್ಲಿ ಶಾಲೆ ನಡೆಯುತ್ತಿದೆ. ಇಲ್ಲಿರುವ ಶಾಲೆ ಮಕ್ಕಳ ಕೊರತೆ ಎದುರಿಸುತ್ತಿದೆ. ಇಲ್ಲಿ ವಾಸವಿರುವ ಕುಟುಂಬಗಳ ಹೆತ್ತವರು ತಮ್ಮ ಮಕ್ಕಳನ್ನು ಇತರೆಡೆಗಳ ಶಾಲೆಗೆ ಸೇರಿಸಿರುವ ಕಾರಣಕ್ಕೆ ಶಾಲೆಯಲ್ಲಿ ಮಕ್ಕಳ ಕೊರತೆ ಕಂಡುಬಂದಿದೆ.

ಅಭಿವೃದ್ಧಿಗೆ ತಡೆ
ಮೂಲ ಸೌಕರ್ಯ ಕೊರೆತೆ ನಮ್ಮನ್ನು ಚಿಂತೆಗೀಡು ಮಾಡಿದೆ. ಗಡಿಭಾಗಗಳ ಕಚ್ಚಾ ರಸ್ತೆ ಅಭಿವೃದ್ಧಿ ಆದಲ್ಲಿ ಈ ಎರಡು ಅಭಿವೃದ್ಧಿಗೆ ತೆರೆದಂತೆ. ಸಣ್ಣ ನೆಪಗಳನ್ನು ಹೇಳಿಕೊಂಡು ಅ ಕಾರಿಗಳು ಮಡಿಕೇರಿ-ಸುಬ್ರಹ್ಮಣ್ಯ ರಸ್ತೆಗೆ ತಡೆ ಒಡ್ಡುತ್ತಿದ್ದಾರೆ.

ಒಟ್ಟಾರೆ ಬದುಕು
ವಿದ್ಯುತ್‌ ಯಾವತ್ತೂ ಇರುವುದಿಲ್ಲ. ಸಣ್ಣ ಗುಡುಗು ಆದರೂ ಮೊಬೈಲ್‌ ನೆಟ್‌ವರ್ಕ್‌ ಹೋಗುತ್ತದೆ. ನಡುರಾತ್ರಿ ಅನಾರೋಗ್ಯ ಕಾಣಿಸಿಕೊಂಡರೆ ತತ್‌ಕ್ಷಣಕ್ಕೆ ಏನೂ ಮಾಡಲಾಗುತ್ತಿಲ್ಲ. ಒಟ್ಟಾರೆ ನಮ್ಮದೊಂದು ಬದುಕು ಅಷ್ಟೆ.
– ತೇಜಾವತಿ ಕಲ್ಮಕಾರು, ಗ್ರಹಿಣಿ

— ಬಾಲಕೃಷ್ಣ  ಭೀಮಗುಳಿ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.