“ವಿಶ್ವ ಕೊಂಕಣಿ ಸರದಾರ’ನಿಗೆ ಪ್ರತಿಮೆಯ ಗೌರವ: ಉತ್ತರ ಪ್ರದೇಶದಲ್ಲಿ 6.5 ಅಡಿ ಎತ್ತರದ ಪ್ರತಿಮೆ ನಿರ್ಮಾಣ


Team Udayavani, Jan 26, 2023, 7:20 AM IST

“ವಿಶ್ವ ಕೊಂಕಣಿ ಸರದಾರ’ನಿಗೆ ಪ್ರತಿಮೆಯ ಗೌರವ: ಉತ್ತರ ಪ್ರದೇಶದಲ್ಲಿ 6.5 ಅಡಿ ಎತ್ತರದ ಪ್ರತಿಮೆ ನಿರ್ಮಾಣ

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ರೂವಾರಿ, ವಿಶ್ವ ಕೊಂಕಣಿ ಸರದಾರ ಬಿರುದಾಂಕಿತ ದಿ| ಬಸ್ತಿ ವಾಮನ ಶೆಣೈ ಅವರ ಸಾರ್ಥಕ ಸಾಧನೆಯನ್ನು ಶಾಶ್ವತ ವಾಗಿರಿಸುವ ಆಶಯದಿಂದ ವಿಶ್ವ ಕೊಂಕಣಿ ಕೇಂದ್ರವು ಲೋಹದ ಪ್ರತಿಮೆ ನಿರ್ಮಿಸಿ ಗೌರವ ಸಲ್ಲಿಸಲು ನಿರ್ಧರಿಸಿದೆ.

ಕೊಂಕಣಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಸಮು ದಾಯದ ಶ್ರೇಯಸ್ಸು ಮತ್ತು ಸಂಘಟನೆಗಾಗಿ ಶ್ರಮಿಸಿದ್ದ ಅವರು ಕೊಂಕಣಿ ಸಾರಸತ್ವ ಲೋಕದಲ್ಲಿ ಅಪಾರ ಮನ್ನಣೆ, ಗೌರವಾದಾರಗಳಿಗೆ ಪಾತ್ರರಾಗಿದ್ದರು.

ಕೊಂಕಣಿ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ನೆನಪಿನಲ್ಲಿ ನಗುಮೊಗ, ವಿನಮ್ರ ನಿಲುವಿನ ದಿ| ಬಸ್ತಿ ವಾಮನ ಶೆಣೈ ಅವರನ್ನು ಯಥಾವತ್‌ ಬಿಂಬಿಸುವ ಹಿತ್ತಾಳೆಯ 250 ಕೆ.ಜಿ. ತೂಕ
ಹಾಗೂ 6.5 ಅಡಿ ಎತ್ತರದ ಪ್ರತಿಮೆಯು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದ ಮುಖ ಮಂಟಪದಲ್ಲಿ ಅನಾವರಣಕ್ಕೆ ಸಜ್ಜು ಗೊಂಡಿದೆ.

ಮಂಗಳೂರಿನ ವಿಭಿನ್‌ ಸಂಸ್ಥೆಯ ಉಸ್ತುವಾರಿಯಲ್ಲಿ ಈ ಪ್ರತಿಮೆಯನ್ನು ಉತ್ತರ ಪ್ರದೇಶದ ಅಲೀಘರ್‌ನ ಲೋಹ ಶಾಲೆಯಲ್ಲಿ ಮೂರು ತಿಂಗಳ ಅವಧಿಯಲ್ಲಿ ನಿರ್ಮಿಸಲಾಗಿದೆ. ಮೊದಲಿಗೆ ಆವೆ ಮಣ್ಣಿನ ಪ್ರತಿಕೃತಿಯನ್ನು ರಚಿಸಿ ಆ ಬಳಿಕ ಹಿತ್ತಾಳೆ ಲೋಹದ ಎರಕ ಹೊಯ್ಯುವ ಮೂಲಕ “ಬಸ್ತಿ ವಾಮನ ಮಾಮು’ ಅವರ ಪ್ರತಿ ರೂಪಕ್ಕೆ ಲೋಹದ ಸ್ಪರ್ಶ ನೀಡಲಾಗಿದೆ. ವಿಶ್ವ ಕೊಂಕಣಿ ಕೇಂದ್ರದ ಮಹಾ ಪೋಷಕ, ಗೌರವ ಅಧ್ಯಕ್ಷ ಡಾ| ಪಿ. ದಯಾನಂದ ಪೈ ಅವರ ಪ್ರಾಯೋಜಕತ್ವದಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಈ ಪ್ರತಿಮೆ ನಿರ್ಮಾಣವಾಗಿದೆ.

“ಬಸ್ತಿ ಮಾಮ್‌’ ಎಂದೇ ಜನ ಜನಿತ ರಾಗಿದ್ದ ಬಸ್ತಿ ವಾಮನ ಶೆಣೈ, 1991- 92ರಲ್ಲಿ ಕೊಂಕಣಿ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ಹಾಗೂ ಕೊಂಕಣಿ ಅಕಾಡೆಮಿ ಸ್ಥಾಪನೆ ಆಗ ಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟು ಕೊಂಕಣಿ ಜಾಥಾಕ್ಕೆ ಸಿದ್ಧತೆಗಳು ನಡೆಯುತ್ತಿದ್ದಾಗ ತನ್ನ ಬ್ಯಾಂಕ್‌ ವೃತ್ತಿಯಿಂದ ನಿವೃತ್ತಿ ಪಡೆದು ಜಾಥಾದ ಸಂಚಾಲಕತ್ವ ವಹಿಸಿದವರು. ಕೊಂಕಣಿ ಭಾಷೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಂಡು ಕ‌ರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸ್ಥಾಪನೆ‌ಗೊಳ್ಳುವಲ್ಲಿಯೂ ವಾಮನ ಶೆಣೈ ಅವರ ಪಾತ್ರ ಮಹತ್ವದ್ದು. ಸಾಮಾಜಿಕ ಸಂಘಟನೆ, ಹೋರಾಟದ ಜತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. ಎರಡು ಅವಧಿಗೆ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ವಾಮನ ಶೆಣೈ ಅವರ ಸಾಧನೆಗೆ ಹಲವು ಪ್ರಶಸ್ತಿ, ಸಮ್ಮಾನಗಳ ಜತೆಗೆ ವಿಶ್ವ ಕೊಂಕಣಿ ಸರದಾರ, ವಿಶ್ವ ಸಾರಸ್ವತ ಸರದಾರ ಎಂಬ ಬಿರುದುಗಳು ಪ್ರಾಪ್ತವಾಗಿವೆ. ಮಂಗಳೂರಿನಲ್ಲಿ ವ್ಯವಸ್ಥಿತವಾದ ಕೊಂಕಣಿ ಸಾಹಿತ್ಯ, ಸಾಂಸ್ಕೃತಿಕ ವಿಶ್ವ ಕೊಂಕಣಿ ಕೇಂದ್ರವನ್ನು ದಾನಿಗಳ ನೆರವಿನಲ್ಲಿ ಸಾಕಾರಗೊಳಿಸಿದ ದಿ| ಬಸ್ತಿ ಮಾಮ್‌ ಅವರ ಪ್ರತಿಮೆ ಅದೇ ಕೇಂದ್ರದಲ್ಲಿ ಕಂಗೊಳಿಸಲಿದೆ.

ವಿಶ್ವ ಕೊಂಕಣಿ ಸರದಾರ ಬಸ್ತಿ ವಾಮನ ಶೆಣೈ ಅವರ‌ ಎಂದಿನ ವಿನಮ್ರ ನಿಲುವಿನ ಈ ವಿಗ್ರಹ ಸ್ವರೂಪ ಯಥಾವತ್ತಾಗಿ ಬಿಂಬಿತವಾಗಿದ್ದು ಅವರ ನಿಕಟವರ್ತಿಗಳಿಗೆ, ಅಭಿಮಾನಿಗಳಿಗೆ ಇದು ಸ್ಫೂರ್ತಿದಾಯಕವಾಗಿದೆ. ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಫೆ. 8ರಂದು ಸಂಜೆ 5ಕ್ಕೆ ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರತಿಮೆ ಅನಾವರಣಗೊಳ್ಳಲಿದೆ.
– ಗುರುದತ್‌ ಬಂಟ್ವಾಳಕರ್‌, ಸಿಇಒ, ವಿಶ್ವ ಕೊಂಕಣಿ ಕೇಂದ್ರ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.