ಬಿ.ಸಿ.ರೋಡ್‌: ನೀರಲ್ಲೇ ಬಸ್‌ಗೆ ಕಾಯಬೇಕಾದ ಸ್ಥಿತಿ


Team Udayavani, May 20, 2022, 9:58 AM IST

bc-road

ಬಂಟ್ವಾಳ: ಸಾವಿರಾರು ಪ್ರಯಾಣಿಕರು ದಿನನಿತ್ಯ ಸಂಚರಿಸುವ ಬಿ.ಸಿ.ರೋಡ್‌ನ‌ಲ್ಲಿ ಸರಿಯಾದ ಬಸ್‌ ನಿಲ್ದಾಣಗಳನ್ನು ಕಲ್ಪಿಸಲಾಗದ ಆಡಳಿತ ವ್ಯವಸ್ಥೆ ಕನಿಷ್ಠ ಪಕ್ಷ ರಸ್ತೆ ಬದಿಯಲ್ಲಿ ನಿಂತು ಬಸ್ಸಿಗೆ ಕಾಯುವ ಸ್ಥಿತಿಯನ್ನೂ ಮಾಡಿಕೊಟ್ಟಿಲ್ಲ. ಹೀಗಾಗಿ ಕಳೆದ ಕೆಲವು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯ ಪರಿಣಾಮ ಬಿ.ಸಿ.ರೋಡ್‌ ನಿಂದ ಮಂಗಳೂರು ಭಾಗಕ್ಕೆ ತೆರಳುವ ಪ್ರಯಾಣಿಕರು ಕೃತಕ ನೆರೆಯಲ್ಲೇ ನಿಂತು ಬಸ್ಸಿಗೆ ಕಾಯಬೇಕಾದ ಸ್ಥಿತಿ ಇದೆ.

ಬಿ.ಸಿ.ರೋಡ್‌ನ‌ ಸರ್ವಿಸ್‌ ರಸ್ತೆಯಲ್ಲಿ ಮಂಗಳೂರು ಭಾಗಕ್ಕೆ ತೆರಳುವ ಬಸ್‌ ಗಳು ನಿಲ್ಲುವ ಸ್ಥಳದಲ್ಲಿ ಕಾಮಗಾರಿ ಅವ್ಯವಸ್ಥೆಯ ಪರಿಣಾಮ ಕಳೆದ ಹಲವು ವರ್ಷಗಳಿಂದ ಕೃತಕ ನೆರೆಯ ಸ್ಥಿತಿ ಇದ್ದು, ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿ ಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಪ್ರತೀ ವರ್ಷವೂ ಮಳೆಗಾಲದಲ್ಲಿ ಪ್ರಯಾಣಿಕರು ಕೃತಕ ನೆರೆಯಲ್ಲೇ ಬಸ್ಸಿಗೆ ಕಾಯಬೇಕಿದೆ.

ಗಮನಹರಿಸಿಲ್ಲ

ಇದು ಹೆದ್ದಾರಿ ಪ್ರದೇಶದಲ್ಲಿ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ)ದ ವ್ಯಾಪ್ತಿಗೆ ಬರುವುದರಿಂದ ಅಲ್ಲಿ ಅಧಿಕಾರಿಗಳು ಇತ್ತ ಗಮನಹರಿಸುವುದೇ ಇಲ್ಲ. ಅವರು ಇಲಾಖೆ ನೀಡಿದ ವಾಹನದಲ್ಲಿ ತಿರುಗಾಡುವುದರಿಂದ ಕೃತಕ ನೆರೆಯ ಪರಿಸ್ಥಿತಿಯಲ್ಲಿ ಸಮಸ್ಯೆಯಾಗಿಲ್ಲ.

ಸಮಸ್ಯೆ ಪರಿಹರಿಸಬೇಕಾದ ಬಂಟ್ವಾಳ ಪುರಸಭೆಯ ಅಧಿಕಾರಿಗಳು ಕೂಡ ಇತ್ತ ಗಮನವೇ ಹರಿಸುತ್ತಿಲ್ಲ.

ಇಲ್ಲಿ ಕಾಂಕ್ರೀಟ್‌ ಹೆದ್ದಾರಿ ಇದ್ದು, ಪಕ್ಕದಲ್ಲೇ ಚರಂಡಿ ಇದ್ದರೂ ಅದಕ್ಕೆ ನೀರು ಹೋಗಲು ಸರಿಯಾದ ವ್ಯವಸ್ಥೆ ಮಾಡದೆ ಇರುವುದರಿಂದ ಇಂತಹ ಸ್ಥಿತಿ ಇದೆ. ಜತೆಗೆ ತಳಭಾಗದಲ್ಲಿ ಕಾಂಕ್ರೀಟ್‌ ಇರುವುದರಿಂದ ನೀರು ಇಂಗದೆ ಹಾಗೇ ನಿಲ್ಲುತ್ತದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ದಿನದ ಎಲ್ಲ ಹೊತ್ತು ಕೂಡ ಈ ಭಾಗದಲ್ಲಿ ನೆರೆಯ ರೀತಿ ನೀರು ನಿಲ್ಲುತ್ತಿದೆ.

ಇಲ್ಲಿ ದಿನನಿತ್ಯ ಸಾವಿರಾರು ಪ್ರಯಾ ಣಿಕರು ಬಸ್ಸಿಗೆ ಕಾಯಬೇಕಿದ್ದು, ದೂರದ ಊರು ಸೇರಿ ಪುತ್ತೂರು, ಧರ್ಮಸ್ಥಳ, ವಿಟ್ಲ, ಉಪ್ಪಿನಂಗಡಿ ಮೊದಲಾದ ಭಾಗಗಳಿಂದ ಮಂಗಳೂರಿಗೆ ತೆರಳುವ ಬಸ್‌ಗಳು ಇಲ್ಲೇ ಪ್ರಯಾಣಿಕರನ್ನು ಇಳಿಸುತ್ತವೆ. ಇಲ್ಲಿನ ಅವ್ಯವಸ್ಥೆಯ ಪರಿಣಾಮ ಅವರೆಲ್ಲರೂ ನೀರಿನಲ್ಲೇ ಇಳಿಯಬೇಕಾದ ಸ್ಥಿತಿ ಇದೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.