ಮಳೆಗಾಲ: ವಿದ್ಯುತ್‌ ಸಮಸ್ಯೆ, ಸಾರ್ವಜನಿಕರಲ್ಲೂ ಇರಲಿ ಜಾಗ್ರತೆ


Team Udayavani, May 26, 2018, 5:55 AM IST

electricity-distribution-900.jpg

ಪುತ್ತೂರು: ಮಳೆಗಾಲ ಬಂತೆಂದರೆ ವಿದ್ಯುತ್‌ ಅವಘಡಗಳೂ ಹೆಚ್ಚುತ್ತವೆ. ಗಾಳಿ ಮಳೆ, ಸಿಡಿಲು, ಮಿಂಚು ಬಂದಾಗ ವಿದ್ಯುತ್‌ ಅವಘಡಗಳು ಉಂಟಾಗುತ್ತವೆ. ಈ ಕಾರಣದಿಂದ ಮೆಸ್ಕಾಂ ಮುನ್ನೆಚ್ಚರಿಕೆ ವಹಿಸುವ ಜತೆಗೆ, ಸಾರ್ವಜನಿಕರೂ ಜಾಗೃತ ಸ್ಥಿತಿಯಲ್ಲಿರಬೇಕಾಗುತ್ತದೆ. ಬೇಸಗೆ ಅಥವಾ ಚಳಿಗಾಲದಲ್ಲಿ ಇರುವ ವಿದ್ಯುತ್‌ ಸರಬರಾಜು ವ್ಯವಸ್ಥೆಗೂ ಮಳೆಗಾಲದ ಸರಬರಾಜು ವ್ಯವಸ್ಥೆಗೂ ವ್ಯತ್ಯಾಸವಿರುತ್ತದೆ. ಮಳೆಗಾಲದಲ್ಲಿ ಸಿಡಿಲು, ಮಳೆ ಬರುವಾಗ ಅಥವಾ ವಿದ್ಯುತ್‌ ತಂತಿಗಳಲ್ಲಿ ತಾಂತ್ರಿಕ ತೊಂದರೆಗಳು ಉಂಟಾದಾಗ ಸಾರ್ವಜನಿಕರೇ ಅದನ್ನು ಸರಿಪಡಿ ಸಲು, ಮುಟ್ಟಲು ಹೋಗಬಾರದು.

ವಿದ್ಯುತ್‌ ತಂತಿಯ ಇಕ್ಕೆಲಗಳಲ್ಲಿನ ಮರಗಳ ಕೊಂಬೆಗಳು ವಿದ್ಯುತ್‌ ತಂತಿಗೆ ತಾಗುವಂತಿದ್ದರೆ ಸಾಮಾನ್ಯವಾಗಿ ಮಳೆಗಾಲದ ಆರಂಭಕ್ಕೆ ಮೊದಲೇ ಸವರುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಮೆಸ್ಕಾಂ ಸಿಬಂದಿ ಕಾರ್ಯನಿರ್ವಹಿ ಸುತ್ತಾರೆ. ಆದರೆ ಕೆಲವು ಖಾಸಗಿ ಜಾಗಗಳಲ್ಲಿ ಕೊಂಬೆಗಳು ವಿದ್ಯುತ್‌ ತಂತಿಗಳಿಗೆ ಸವರಿಕೊಂಡಿದ್ದರೆ ಮಳೆಗಾಲ ಆರಂಭವಾದ ಬಳಿಕ ಪ್ರಯತ್ನಿಸಬಾರದು. ಇಂತಹ ಕೆಲಸ ಮಾಡುವುದಿದ್ದರೂ ಸ್ಥಳೀಯ ಮೆಸ್ಕಾಂ ಕಚೇರಿಗೆ ಮಾಹಿತಿ ನೀಡಿ ಅವರ ಉಪಸ್ಥಿತಿಯಲ್ಲಿ ಕೆಲಸ ಮಾಡಬೇಕು ಎನ್ನುವುದು ಮೆಸ್ಕಾಂ ಅಧಿಕಾರಿಗಳ ಅಭಿಪ್ರಾಯ.


ಮೆಸ್ಕಾಂ ಸಂಪರ್ಕಿಸಿ

ವಿದ್ಯುತ್‌ ಅವಘಡಗಳ ಮುನ್ಸೂಚನೆ ಕಂಡುಬಂದಲ್ಲಿ ಅಥವಾ ವಿದ್ಯುತ್‌ ಅವಘಡ ಸಂಭವಿಸಿದಲ್ಲಿ 1912 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು. ಅಥವಾ ಸಮೀಪದ ಮೆಸ್ಕಾಂ ಕಚೇರಿಯನ್ನು, ಅಧಿಕಾರಿಗಳನ್ನು ಸಂಪರ್ಕಿಸಬಹುದು. ವಿದ್ಯುತ್‌ ಲೈನ್‌ ಗಳಲ್ಲಿ ತೊಂದರೆ ಸಂಭವಿಸಿದ ಸಂದರ್ಭದಲ್ಲಿ ಸಾರ್ವಜನಿಕರು ತಾವೇ ಸರಿಪಡಿಸಲು ಮುಂದಾಗದೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅಪಾಯಗಳನ್ನು ದೂರ ಮಾಡಬಹುದು.

ವಿಭಾಗದಲ್ಲಿ 27 ಲಕ್ಷ ರೂ. ನಷ್ಟ
ಪುತ್ತೂರು ವಿಭಾಗ ವ್ಯಾಪ್ತಿಯಲ್ಲಿ ಎಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಗಾಳಿ, ಮಳೆಯ ಸಂದರ್ಭದಲ್ಲಿ ವಿದ್ಯುತ್‌ ವ್ಯವಸ್ಥೆಗೆ ಸಂಬಂಧಿಸಿದಂತೆ 230 ವಿದ್ಯುತ್‌ ಕಂಬಗಳು ಧರಾಶಾಹಿಯಾಗಿವೆ. 40 ಟ್ಯಾನ್ಸ್‌ಫಾರ್ಮರ್‌ ಗಳಿಗೆ ಹಾನಿಯಾಗಿದ್ದು, ಒಟ್ಟು 27 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.


ಅಪಾಯಕ್ಕೆ ಕಾರಣರಾಗಬೇಡಿ

– ತುಂಡಾಗಿ ಬಿದ್ದಿರುವ ವಿದ್ಯುತ್‌ ಲೈನುಗಳನ್ನು ಮುಟ್ಟಬಾರದು.
- ಒದ್ದೆಯಾಗಿರುವ ವಿದ್ಯುತ್‌ ಕಂಬಗಳನ್ನು ಹಾಗೂ ಇತರೆ ವಿದ್ಯುತ್‌ ಉಪಕರಣಗಳನ್ನು ಮುಟ್ಟಬಾರದು.
– ಜಾನುವಾರುಗಳನ್ನು ವಿದ್ಯುತ್‌ ಕಂಬಗಳಿಗೆ ಕಟ್ಟಬಾರದು.
– ಒಟ್ಟೆ ಒಣಗಲು ವಿದ್ಯುತ್‌ ಸಾಮಗ್ರಿಗಳನ್ನು ಬಳಸಬಾರದು.
- ಸಿಡಿಲು, ಮಿಂಚು ಇದ್ದ ಸಂದರ್ಭದಲ್ಲಿ ಮೈನ್‌ ಸ್ವಿಚ್‌ ಅಥವಾ ಸ್ವಿಚ್‌ ಬೋರ್ಡ್‌ ಬಳಿ ನಿಲ್ಲಬಾರದು.


ಮೆಸ್ಕಾಂ ಸನ್ನದ್ಧ

ಮಳೆಗಾಲದಲ್ಲಿ ವಿದ್ಯುತ್‌ ವ್ಯವಸ್ಥೆಯನ್ನು ಬಳಕೆ ಮಾಡುವಾಗ ಸ್ವಯಂ ಜಾಗ್ರತೆ ವಹಿಸಬೇಕು. ವಿದ್ಯುತ್‌ ವ್ಯವಸ್ಥೆಯಲ್ಲಿ ಯಾವುದಾದರೂ ತೊಂದರೆ ಕಂಡುಬಂದರೆ ಮೆಸ್ಕಾಂಗೆ ತಿಳಿಸಬೇಕು. ಸಾರ್ವಜನಿಕರಿಂದ ದೂರುಗಳು ಬಂದಾಗ ಯಾವುದೇ ಸಂದರ್ಭದಲ್ಲಿ ತತ್‌ಕ್ಷಣ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡುವಂತೆ ಸಿಬಂದಿಗೆ ಸೂಚನೆ ನೀಡಲಾಗಿದೆ. ಸಿಬಂದಿಗೂ ರಕ್ಷಣಾ ಸಾಮಗ್ರಿಗಳನ್ನು ಒದಗಿಸಲಾಗಿದೆ. ಮೆಸ್ಕಾಂ ಎಲ್ಲ ರೀತಿಯಲ್ಲೂ ಸನ್ನದ್ಧವಾಗಿದೆ.
– ನರಸಿಂಹ ಕಾರ್ಯ ನಿರ್ವಾಹಕ ಎಂಜಿನಿಯರ್‌, ಮೆಸ್ಕಾಂ, ಪುತ್ತೂರು ವಿಭಾಗ

— ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.