Drought ಎದುರಿಸಲು ಸಜ್ಜಾಗಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ


Team Udayavani, Nov 16, 2023, 12:05 AM IST

Drought ಎದುರಿಸಲು ಸಜ್ಜಾಗಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಮಂಗಳೂರು: ಬರಗಾಲ ಬಾಧಿಸುವ ಸಾಧ್ಯತೆಗಳು ಗೋಚರಿಸುತ್ತಿರುವುದರಿಂದ ಪರ್ಯಾಯ ಪರಿಹಾರ ಕ್ರಮಗಳನ್ನು ಈಗಿಂದಲೇ ಸಜ್ಜು ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಬುಧವಾರ ಇಲ್ಲಿನ ಜಿ.ಪಂ. ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜಿ.ಪಂ.ನ ಕಾರ್ಯ ನಿರ್ವಹಣಾ ಧಿಕಾರಿಯಿಂದ ಮಾಹಿತಿ ಪಡೆದು ನೀರಿನ ಸಮಸ್ಯೆ ಬಗೆಹರಿಸಲು ಈಗಿನಿಂ ದಲೇ ಕ್ರಮ ಕೈಗೊಳ್ಳಬೇಕು ಎಂದರು.

ಮಂಗಳೂರು, ಮೂಡುಬಿದಿರೆ ತಾಲೂಕುಗಳನ್ನು ಸಾಧಾರಣ ಬರದ ಪಟ್ಟಿಗೆ ಸೇರಿಸಲಾಗಿದೆ. ಅಲ್ಲದೆ ಮಂಗಳೂರು, ಬಂಟ್ವಾಳ ಹಾಗೂ ಮೂಲ್ಕಿ ತಾಲೂಕುಗಳ 16 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುವುದಾಗಿ ಜಿ.ಪಂ. ಸಿಇಒ ಡಾ| ಆನಂದ್‌ ತಿಳಿಸಿದರು. ಮಳೆಯ ಕುರಿತು ಬರುವ ಮಾಹಿತಿಗಳನ್ನು ತಾ.ಪಂ. ಇಒಗಳಿಗೆ ಮುಟ್ಟಿಸಿ ಅವರು ಸ್ಥಳೀಯ ಶಾಸಕರಿಗೆ ಹಾಗೂ ಗ್ರಾಮಗಳಿಗೆ ಮಾಹಿತಿ ನೀಡುವ ಮೂಲಕ ಸಮನ್ವಯದಿಂದ ಯಾವುದೇ ರೀತಿಯ ಬರ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ನಡೆಸಬೇಕು. 20 ದಿನಕ್ಕೊಮ್ಮೆ ಸಂಬಂಧ ಪಟ್ಟ ಅಧಿಕಾರಿಗಳು ವಿಚಾರ ವಿಮರ್ಶೆ ನಡೆಸಬೇಕು ಎಂದರು.

ಅಧಿಕಾರಿಗಳಲ್ಲಿ ಸೋಮಾರಿತನ
ದ.ಕ. ಜಿಲ್ಲೆಯಲ್ಲಿರುವ ಗ್ರಾ.ಪಂ.ಗಳ ತೆರಿಗೆಗಳ ಬೇಡಿಕೆ, ವಸೂಲಾತಿ, ಬಾಕಿಗಳ ಕುರಿತು ತಾ.ಪಂ. ಇಒ ಗಳ ಸೋಮಾರಿತನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ವರ್ಷದ ಕೊನೆಯ 4 ತಿಂಗಳಲ್ಲಿ ಶೇ. 70ರಿಂದ 80 ಸಂಗ್ರಹ ಮಾಡುವ ಕ್ರಮ ಸರಿಯಲ್ಲ; ಆರಂಭದಿಂದಲೇ ತೆರಿಗೆ ಸಂಗ್ರಹವಾಗಬೇಕು ಎಂದರು.

ಗ್ರಾ.ಪಂ. ಆಸ್ತಿಗಳ ಮ್ಯಾನ್ಯುವಲ್‌ ಸಮೀಕ್ಷೆಯಲ್ಲೂ ಜಿಲ್ಲೆ ಹಿಂದುಳಿದಿರು ವುದನ್ನು ಉಲ್ಲೇಖಿಸಿದ ಖರ್ಗೆ, ಗ್ರಾ.ಪಂ.ಗಳ ಸಂಪನ್ಮೂಲ ಹೆಚ್ಚಳಕ್ಕಾಗಿ ಈ ಕ್ರಮಕ್ಕೆ ಸೂಚಿಸಲಾಗಿದೆ; ಅದ ರಲ್ಲೂ ಹಿಂದುಳಿದಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಜೆಜೆಎಂ ಪರಿಶೋಧನೆಗೆ ತಂಡ
ಜಲಜೀವನ್‌ ಮಿಷನ್‌ (ಜೆಜೆಎಂ) ಪ್ರಗತಿಯ ಕುರಿತು ಈಗಾಗಲೇ ಮುಖ್ಯಮಂತ್ರಿ ಸಲಹೆ ಮೇರೆಗೆ ಥರ್ಡ್‌ ಪಾರ್ಟಿಯಿಂದ ಆಡಿಟ್‌ ಮಾಡಲಾಗುತ್ತಿದೆ. ರಾಜ್ಯದ 1,500 ಗ್ರಾಮಗಳಿಗೆ ಈ ತಂಡ ಭೇಟಿ ನೀಡಿ ಪ್ರಗತಿ ಪರಿಶೀಲನೆ ಕೆಲಸ ಮಾಡಲಿದೆ. ಎಂದು ಸಚಿವರು ಹೇಳಿದರು.

ವಿಧಾನ ಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಡಾ| ಮಂಜುನಾಥ ಭಂಡಾರಿ, ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್‌, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ ಪವನ್‌ ಕುಮಾರ್‌ ಮಾಲಪಾಟಿ ಉಪಸ್ಥಿತರಿದ್ದರು.

ಕ್ಲಪ್ತ ಸಮಯದಲ್ಲಿ ದೂರು ಇತ್ಯರ್ಥ
ಪಿಡಿಒ, ಕಾರ್ಯದರ್ಶಿ ಸಹಿತ ಅಧಿಕಾರಿಗಳ ಬಗ್ಗೆ ಸಾರ್ವಜನಿಕರು ನೀಡುವ ದೂರುಗಳನ್ನು ತಿಂಗಳುಗಟ್ಟಲೆ ಬಾಕಿ ಇರಿಸುವ ತಾ.ಪಂ. ಇಒಗಳನ್ನು ಅಮಾನತು ಮಾಡುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ಯಿತ್ತರು. ನಿಮ್ಮ ಕೆಲಸಗಳನ್ನು ನಾವು ವಿಧಾನಸೌಧದಲ್ಲಿ ಕೂತು ಪರಿಹರಿಸಲಾ ಗದು. ನೀವೇ ತ್ವರಿತವಾಗಿ ಇತ್ಯರ್ಥಪಡಿಸಿ ಎಂದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.