ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ ಚಾರುಮುಡಿ


Team Udayavani, May 26, 2018, 5:25 AM IST

charumudi-25-5.jpg

ಬೆಳ್ತಂಗಡಿ: ಆಗಾಗ ಸುರಿಯುತ್ತಿರುವ ಮಳೆಗೆ ಹಸಿರ ಹೊದ್ದು ಮೈದುಂಬಿದೆ ಚಾರುಮುಡಿ. ತನ್ನ ಇರುವಿಕೆಯನ್ನು ಪ್ರದರ್ಶಿಸುತ್ತಾ ಹರಿಯುತ್ತಿದೆ ಝರಿ, ಈ ಸೊಬಗನ್ನು ಕಂಡು ಮನಸೋತ ಪ್ರವಾಸಿಗರು ಫೋಟೋ ಕ್ಲಿಕ್ಕಿಸುತ್ತಾ ಸುಂದರ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಮಳೆಯಿಂದ ಚಾರುಮುಡಿ ಬೆಟ್ಟಗಳ ಹುಲ್ಲುಗಾವಲು ಚಿಗುರಿ ಹಸುರಿನಿಂದ ಕಂಗೊಳಿಸುತ್ತಿದೆ. ಪ್ರವಾಸಿಗರು ಈ ದೃಶ್ಯವನ್ನು ಕಣ್ತಂಬಿಕೊಳ್ಳುವ ಜತೆಗೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ರಾ.ಹೆ. 234ರ ಬಂಟ್ವಾಳ – ವಿಲುಪುರಂ ವ್ಯಾಪ್ತಿಯಲ್ಲಿ ಬರುವ ಬೆಟ್ಟ ಪ್ರದೇಶ ಬಯಲು ಸೀಮೆ, ಕರಾವಳಿಗೆ ಸಂಪರ್ಕ ಕೊಂಡಿಯಂತಿದ್ದು, ಧಾರ್ಮಿಕ ಕೇಂದ್ರಗಳಿಗೆ ಆಗಮಿಸುವ ಭಕ್ತರು ಚಾರುಮುಡಿ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಪಾರ್ಕಿಂಗ್ ನಿಂದ ಸಮಸ್ಯೆ
ಶಿರಾಡಿ ಘಾಟಿ ಕಾಮಗಾರಿ ಪ್ರಯುಕ್ತ ನಿರ್ಬಂಧ ಹೇರಿರುವುದರಿಂದ ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನಗಳನ್ನು ರಸ್ತೆಬದಿ ನಿಲ್ಲಿಸುವುದರಿಂದ ಆಗಮಿಸುವ ಇತರ ಆಗಲ ಕಿರಿದಾದ ರಸ್ತೆಗಳಲ್ಲಿ ಪಾರ್ಕಿಂಗ್‌ ಮಾಡುತ್ತಿರುವುದರಿಂದ ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಜಾಗವಿದ್ದು, ಅಲ್ಲಿ ವಾಹನ ನಿಲ್ಲಿಸಿದರೆ ಯಾರಿಗೂ ಸಮಸ್ಯೆ ಉಂಟಾಗುವುದಿಲ್ಲ. 


ನೀರಿನಲ್ಲಿ ಆಡುವಾಗ ಎಚ್ಚರಿಕೆ

ಇನ್ನೇನು ಮಳೆಗಾಲ ಆರಂಭಗೊಂಡು ಝರಿ, ತೊರೆ ತುಂಬಲಿದ್ದು, ಪ್ರವಾಸಿಗರು ನೀರಿನಲ್ಲಿ ಆಟವಾಡುವ ಮುನ್ನ ಎಚ್ಚರಿಕೆ ವಹಿಸಬೇಕಿದೆ. ಕಲ್ಲುಗಳು ಜಾರಿದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ.

ಸೆಲ್ಫಿ ತೆಗೆಯುವಾಗ ಇರಲಿ ಎಚ್ಚರ 
ದೃಶ್ಯ ಸೆರೆಹಿಡಿಯುವಾಗ, ಸೆಲ್ಫಿ ತೆಗೆಯುವ ವೇಳೆ ಎಚ್ಚರ ವಹಿಸಬೇಕಾಗಿದೆ. ರಸ್ತೆಯಲ್ಲಿ ವಾಹನಗಳು ವೇಗವಾಗಿ ಸಾಗುವಾಗ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಎತ್ತರದ ಕಟ್ಟೆಗಳಲ್ಲಿ ನಿಂತು ಪೋಟೋ ಕ್ಲಿಕ್ಕಿಸುವ ವೇಳೆ ಕಾಲು ಜಾರಿ ಬೀಳುವ ಸಾಧ್ಯತೆ ಇದೆ.

ಸಂಯಮ ಅಗತ್ಯ 
ವಾಹನ ಚಾಲನೆ ವೇಳೆಯೂ ರಸ್ತೆ ನಿಯಮ ಪಾಲನೆ ಮಾಡಬೇಕಿದೆ. ತಿರುವುಗಳು ಹೆಚ್ಚಾಗಿರುವ ಕಾರಣ ವಾಹನ ಸವಾರರು ಸಂಯಮದಿಂದ ವಾಹನ ಚಾಲನೆ ಮಾಡಬೇಕಿದೆ. ಓವರ್‌ ಟೇಕ್‌ ಮಾಡುವ ವೇಳೆಯೂ ಎಚ್ಚರ ವಹಿಸಬೇಕಿದೆ. ಸ್ವಲ್ಪ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ.

ಎಸೆಯದಿರಿ ಕಸ 
ಖಾದ್ಯ ಸವಿದು ಕಸ ಎಸೆಯುವುದರಿಂದ ಕಸದ ರಾಶಿ ಪ್ರಕೃತಿ ಸೌಂದರ್ಯ ಹಾಳು ಮಾಡುತ್ತಿದೆ. ಉತ್ತಮ ಪರಿಸರಕ್ಕಾಗಿ ಕಸ ಎಸೆಯದಿದ್ದಲ್ಲಿ ಉತ್ತಮ.

ಮಾರ್ಗಸೂಚಿ
ಬಂಟ್ವಾಳದಿಂದ ಉಜಿರೆ ಮಾರ್ಗ ಸಂಪರ್ಕಿಸುವ ರಾ.ಹೆ. 234ರಲ್ಲಿ ಚಾರುಮುಡಿ ಘಾಟಿಯಿದೆ. ರಸ್ತೆಯಲ್ಲಿ ಸುಮಾರು 12 ಹೇರ್‌ ಪಿನ್‌ ತಿರುವುಗಳಿವೆ. ಮಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸುವ ರಸ್ತೆಯಲ್ಲಿ ಸಿಗುವ ಉಜಿರೆಯಿಂದ ಸುಮಾರು 13 ಕಿ.ಮೀ. ದೂರದಲ್ಲಿರುವ ಚಾರ್ಮಾಡಿ ಗ್ರಾಮದಿಂದ ಘಾಟಿ ರಸ್ತೆ ಆರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆ ಹಾರ ಗ್ರಾಮದಲ್ಲಿ ಕೊನೆಗೊಳ್ಳುತ್ತದೆ. ಚಿಕ್ಕಮಗಳೂರು,ಚಿತ್ರದುರ್ಗ, ಹಾಸನ, ತುಮಕೂರು, ಬೆಂಗಳೂರು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಸಾವಿರಾರು ಜನ ಈ ಘಾಟಿ ಮೂಲಕ ಆಗಮಿಸುತ್ತಾರೆ.

ಪ್ರಕೃತಿ ಸೌಂದರ್ಯ ಅವಿಸ್ಮರಣೀಯ
ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆಂದು ಅಗಮಿಸಿದ್ದೇವೆ. ಜಲಪಾತ, ಹಸಿರು ಬೆಟ್ಟ ನೋಡಿ ಖುಷಿಯಾಯಿತು. ಕುಟುಂಬದವರು, ಮಕ್ಕಳು ನೋಡಿ ಆನಂದಿಸಿದ್ದಾರೆ. ಪ್ರಕೃ‌ತಿ ಸೌಂದರ್ಯ ಅವಿಸ್ಮರಣೀಯ.
– ಮಡಿವಾಳಪ್ಪ, ಉಪ್ಪಿನಬೆಟಗೇರಿ, ಧಾರವಾಡ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.